ದ.ಕ. ಜಿಲ್ಲೆ ಬುದ್ದಿವಂತರ ಜಿಲ್ಲೆ ಎಂದು ಖ್ಯಾತಿ ಪಡೆದಿದ್ದು ಈಗ ಚುನಾವಣಾ ಸಂದರ್ಭದಲ್ಲಿ ಮತದಾನ ಮಾಡುವ ಮೂಲಕ ದ್ವೇಷ ರಾಜಕಾರಣವನ್ನು ತೊಲಗಿಸಿ ಪ್ರೀತಿ ರಾಜಕಾರಣದ ಬಾಗಿಲು ತೆರೆದು ದ.ಕ. ಜಿಲ್ಲೆಯನ್ನು ಹಿಂದಿಕ್ಕಿ ಬುದ್ದಿವಂತರ ಜಿಲ್ಲೆಯಾಗಿ ಖ್ಯಾತಿ ಪಡೆದಿರುವುದು ಹೆಮ್ಮೆಯ ವಿಷಯವಾಗಿದೆ.
ಶಾಂತಿ ಸಹಬಾಳ್ವೆಗೆ, ಮತ್ತು ಕೋಮುಸೌಹಾರ್ದತೆಗೆ ಹೆಸರುವಾಸಿಯಾಗಿರುವ ಮಲೆನಾಡು ಭಾಗದ ಸರ್ವಧರ್ಮ ಮತದಾರರು ಅತಿ ಚಾಣಾಕ್ಷತನದಿಂದ ಕೋಮುವಾದಿ ಮನಸ್ಥಿತಿಯುಳ್ಳವರಿಗೆ ತಿರಸ್ಕರಿಸಿ ಕೋಮುಸೌಹಾರ್ದ ಕಾಪಾಡಿಕೊಂಡು ಎಲ್ಲಾ ಸಮುದಾಯದ ನಾಗರಿಕರಿಗೆ ಸ್ವತಂತ್ರವಾಗಿ ಬಾಳಲು ಅವಕಾಶ ಕಲ್ಪಿಸಿ ಕೊಟ್ಟಿರುವ ಮತದಾರ ಬಂದುಗಳು ಕೈಗೊಂಡಿರುವ ನಿರ್ಧಾರ ದೇಶದ ಪ್ರಜಾಪ್ರಭುತ್ವ ಉಳಿಸುವ ಹೋರಾಟದಲ್ಲಿ ಜಯ ಸಿಕ್ಕಿದಂತಾಗಿದೆ ಮುಂದಿನ ದಿನಗಳಲ್ಲಿ ವಿಶಾಲ ಕರ್ನಾಟಕ ಮತ್ತು ನಮ್ಮ ಪ್ರೀತಿಯ ಜಿಲ್ಲೆಗೆ ಅತಿ ಹೆಚ್ಚು ಅಭಿವೃದ್ಧಿ ಕಾರ್ಯಗಳು ನಡೆಯುತ್ತವೆ ಎಂದು ವಿಶ್ವಾಸವಿದೆ.
ನಮ್ಮ ಜಿಲ್ಲೆಯಲ್ಲಿ ಈ ಬಾರಿ ಐದೂ ಕ್ಷೇತ್ರಗಳಲ್ಲಿ ಜಾತ್ಯತೀತ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಮೂಲಕ ಹಾಗು ರಾಜ್ಯದಲ್ಲಿ ಸ್ಪಷ್ಟ ಬಹುಮತ ತಂದು ಕೊಟ್ಟು ಕೇವಲ ಒಂದು ಪಕ್ಷದ ಜಯವಲ್ಲ ಇದು ಇಡೀ ಕನ್ನಡಿಗರ ಜಯವಾಗಿದೆ ಎಂದು ತಿಳಿಸಲಾಗಿದೆ ವಿಶೇಷವಾಗಿ ಚಿಕ್ಕಮಗಳೂರು ಕ್ಷೇತ್ರದಲ್ಲಿ ಚುನಾಯಿತರಾಗಿರುವ ಶಾಸಕರಾದ ಹೆಚ್. ಡಿ. ತಮ್ಮಯ್ಯ ರವರು ಸಮಾನತೆ ಮತ್ತು ಅಭಿವೃದ್ದಿಗೆ ಶ್ರಮಿಸಲು ಶೈಕ್ಷಣಿಕವಾಗಿ, ಸಾಮಾಜಿಕವಾಗಿ, ಜಿಲ್ಲೆಗೆ ಕೀರ್ತಿ ತಂದು ಕೊಡುವ ಮೂಲಕ ನೆಚ್ಚಿನ ಜನನಾಯಕರಾಗಿ ವಿಶ್ವಾಸ ಗಳಿಸಲು ಸಂಪೂರ್ಣ ಕಾರ್ಯಪ್ರವೃತ್ತರಾಗಲಿ ಎಂದು ಚಿಕ್ಕಮಗಳೂರು ಕರ್ನಾಟಕ ಮುಸ್ಲಿಂ ಜಮಾತ್ ಜಿಲ್ಲಾ ಕಾರ್ಯದರ್ಶಿಯಾದ ಅಲ್ ಹಾಜ್ ಫೈರೋಜ್ ಅಹಮದ್ ರಜ್ವಿ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕಿನ್ಯ:ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಸಾಹಿತ್ಯ ಹಬ್ಬಕ್ಕೆ ವಿದ್ಯುಕ್ತ ಚಾಲನೆ – ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಅಲ್ ಮದೀನಾದಲ್ಲಿ ಹಜ್ ಯಾತ್ರಿಕರಿಗೆ ಬೀಳ್ಕೊಡುಗೆ
ಮೇ 7ರಂದು ದಾರುಲ್ ಅಮಾನ್ ಎಲ್ಲೂರಿನಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ಸನದು ದಾನ ಸಮಾರಂಭ
ಎಪ್ರಿಲ್ 29 ಕ್ಕೆ ಸಾಮೂಹಿಕ ಉಚಿತ ಸುನ್ನತ್ (ಮುಂಜಿ) ಕಾರ್ಯಕ್ರಮ
ಎಸ್ ವೈ ಎಸ್ ವಾರ್ಷಿಕ ಕೌನ್ಸಿಲ್ ಅಭಿಯಾನ ಆರಂಭ
ಬಾಬಾ ಬುಡನ್ ದರ್ಗಾದಲ್ಲಿ ಆಯೋಜಿಸಲಾಗಿದ್ದ ವಾರ್ಷಿಕ ಸಂದಲ್ ಮತ್ತು ಉರುಸ್ ಆಚರಣೆಗೆ ಜಿಲ್ಲಾಡಳಿತ ಅವಕಾಶ ನಿರಾಕರಣೆ
ಸುನ್ನಿ ಸೆಂಟರ್ ಗೂಡಿನಬಳಿ ವತಿಯಿಂದ ರಮಳಾನ್ ಕಿಟ್ ವಿತರಣೆ
ಪೆಬ್ರವರಿ 15 ಮಂಗಳೂರಲ್ಲಿ ಇಹ್ಸಾನೋತ್ಸವ-26 ಘೋಷಣಾ ಸಮಾವೇಶ
ಉಳ್ತೂರು ; ದರ್ಸ್ ವಾರ್ಷಿಕ ಮತ್ತು ಬೀಳ್ಕೊಡಿಗೆ