ಮಡಿಕೇರಿ: ಕರ್ನಾಟಕ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ರಾಜ್ಯ ಸಮಿತಿ ಹಮ್ಮಿಕೊಂಡಿರುವ Initium ಜಿಲ್ಲಾ ಸೆಕ್ರೆಟರಿಯೇಟ್ ನಾಯಕರ ಕಾರ್ಯಾಗಾರ ನಾಳೆ ಮಧ್ಯಾಹ್ನ ಎರಡು ಗಂಟೆಗೆ ಕೊಡಗು ಜಿಲ್ಲೆಯ ಅಯ್ಯಂಗೇರಿಯಲ್ಲಿ ನಡೆಯಲಿದೆ.
ಎರಡು ದಿನಗಳ ಕಾಲ ನಡೆಯಲಿರುವ ಶಿಬಿರವನ್ನು ಎಸ್ವೈಎಸ್ ರಾಜ್ಯಾಧ್ಯಕ್ಷ ಹಫೀಲ್ ಸಅದಿ ಕೊಡಗು ಉದ್ಘಾಟಿಸಲಿದ್ದಾರೆ.
ಎಸ್ವೈಎಸ್ ರಾಜ್ಯ ಕಾರ್ಯದರ್ಶಿ ಜಿಎಂ ಮುಹಮ್ಮದ್ ಕಾಮಿಲ್ ಸಖಾಫಿ, ಎಸ್ಸೆಸ್ಸೆಫ್ ರಾಷ್ಟ್ರೀಯ ನಾಯಕರಾದ ರಾಶಿದ್ ಬುಖಾರಿ ಕೇರಳ, ಸಿಎನ್ ಜಾಫರ್ ಕಾಸರಗೋಡು ಹಾಗೂ ಅನಸ್ ಅಮಾನಿ ಪುಷ್ಪಗಿರಿ ವಿವಿಧ ವಿಷಯಗಳಲ್ಲಿ ತರಗತಿ ನಡೆಸಲಿದ್ದಾರೆ.
ಸಕಾಲಿಕವಾದ ವಿವಿಧ ವಿಷಯಗಳಲ್ಲಿ ಚರ್ಚೆಗಳು ನಡೆಯಲಿದ್ದು. ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ಅಧ್ಯಕ್ಷತೆ ವಹಿಸಲಿದ್ದಾರೆ.ಸಮಾರೋಪ ಸಮಾರಂಭವನ್ನು ಎಸ್ಸೆಸ್ಸೆಫ್ ಮಾಜಿ ರಾಜ್ಯಾಧ್ಯಕ್ಷ ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ ಉದ್ಘಾಟನೆ ಮಾಡಲಿದ್ದು ಎಸ್ಸೆಸ್ಸೆಫ್ ಮಾಜಿ ರಾಜ್ಯ ನಾಯಕರಾದ ಯಾಕೂಬ್ ಮಾಸ್ಟರ್ ಕೊಳಕೇರಿ, ಶರೀಫ್ ಹೊಸತೋಟ, ರಫೀಕ್ ನೆಲ್ಲಿಹುದ್ಕೇರಿ, ಕೆಎಂ ಮುಸ್ತಫಾ ನಈಮಿ ಹಾವೇರಿ ಹಾಗೂ ಪ್ರಮುಖರು ಭಾಗವಹಿಸಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್