ಮಂಗಳೂರು: ಸಂಸ್ಕೃತಿಯ ನೆಲೆಬೀಡಾಗಿರುವ ಕರುನಾಡು ಕೋಮುವಾದ ಹಾಗೂ ಮಾದಕ ವ್ಯಸನಗಳಿಗೆ ತತ್ತರಿಸಿ ಹೋಗಿವೆ.
ಅದನ್ನು ಸಂಪೂರ್ಣ ನಿರ್ನಾಮ ಗೊಳಿಸುವುದಕ್ಕೆ ಸರ್ಕಾರವು ಮೊದಲ ಆದ್ಯತೆ ನೀಡಬೇಕಿದೆ ಹಾಗೂ ಗೃಹ ಖಾತೆ ಮತ್ತು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ನೀಡುವಾಗ ಇದನ್ನು ಪರಿಗಣಿಸುವಂತೆಯೂ SKSSF ರಾಜ್ಯ ನಾಯಕ ಇಕ್ಬಾಲ್ ಬಾಳಿಲ ಈಮೈಲ್ ಮೂಲಕ ಹಾಗೂ ಸಂಬಂಧಪಟ್ಟ ಅಧಿಕಾರಿಗಳ ಮೂಲಕ ಮುಖ್ಯಮಂತ್ರಿಗೆ ಮನವಿಯನ್ನು ಸಲ್ಲಿಸಿದ್ದಾರೆ.
ಪ್ರತೇಕವಾಗಿ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಸ್ವಚ್ಚತೆ, ಧಾರ್ಮಿಕ ಆಚರಣೆಗಳ ಮೂಲಕ ಅತ್ಯಂತ ಗೌರವ ಉಳಿಸಿಕೊಂಡ ಜಿಲ್ಲೆ. ಆದರೆ ಕೆಲವು ವರ್ಷಗಳಿಂದ ಕೋಮುವಾದ ಮತ್ತು ಮಾದಕ ವ್ಯಸನವು ವ್ಯಾಪಕವಾಗಿ ಹರಡಿ ಜಿಲ್ಲೆಯನ್ನು ತಲೆತಗ್ಗಿಸುವಂತೆ ಮಾಡಿದೆ.
ಸೇವಾರಂಗದಲ್ಲಿ ಕ್ರಾಂತಿಯ ಹೆಜ್ಜೆ ಹಾಕಿರುವ SKSSF ಸಂಘಟನೆಯು ಸೌಹಾರ್ದತೆಯ ಉಳಿವಿವಾಗಿ ಪ್ರತೀ ವರ್ಷವೂ ನೂರಕ್ಕೂ ಅಧಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ
ಪ್ರತೇಕವಾಗಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ದಿನದಂದು ಸಾವಿರಾರು ಜನರನ್ನು ಸೇರಿಸಿ ಅದ್ಬುತ ಕಾರ್ಯಕ್ರಮ ನೀಡುವ ಮೂಲಕ ಕೋಮುವಾದ ಮಾದಕ ವ್ಯಸನ ನಿರ್ನಾಮಕ್ಕಾಗಿ ಪ್ರಯತ್ನಿಸಲಾಗಿದೆ. ಆದರೂ ಸಂಪೂರ್ಣ ಕಡಿವಾಣ ಬೀಳಬೇಕಾದ ಅನಿವಾರ್ಯವಿದೆ.
ಅದಕ್ಕೊಂದು ಪರಿಹಾರ ಕಂಡುಕೊಳ್ಳಬೇಕಾದರೆ ಸಮರ್ಥವಾಗಿ ಎದುರಿಸಬಲ್ಲ ನಾಯಕನನ್ನು ದಕ್ಷಿಣ ಕನ್ನಡ ಜಿಲ್ಲೆಗೆ ಉಸ್ತುವಾರಿ ಸಚಿವರನ್ನಾಗಿ ನೇಮಿಸಬೇಕೆಂದು ಇಕ್ಬಾಲ್ ಬಾಳಿಲ ಮನವಿಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ