ನಾಲೆಜ್ ಸಿಟಿ: ಕರ್ನಾಟಕದ ಕೊಡಗು ಜಿಲ್ಲೆಯ 56 ಮೊಹಲ್ಲಾಗಳ ಪದಾಧಿಕಾರಿಗಳು ತಮ್ಮ ಖಾಝಿಯಾದ ಕಾಂದಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರನ್ನು ಭೇಟಿಯಾದರು.
ಕೊಡಗು ಜಿಲ್ಲೆಯ ಸಂಯುಕ್ತ ಖಾಝಿಯಾದ ಕಾಂದಪುರಂ ಉಸ್ತಾದರು ಕೊಡಗಿಗೆ ಆಗಾಗ್ಗೆ ಭೇಟಿ ನೀಡಿ ಸಂಬಂಧವನ್ನು ಹೆಚ್ಚಿಸುತ್ತಿದ್ದರು. ಈ ಸಂಬಂಧವನ್ನು ಗಟ್ಟಿಗೊಳಿಸುವ ಸಲುವಾಗಿ ಸುನ್ನಿ ಸಂಘಟನೆಗಳ ನಾಯಕರು ಹಾಗೂ ಸಮಿತಿಯ ಪದಾಧಿಕಾರಿಗಳು ಜಾಮಿಉಲ್ ಫುತೂಹ್ ಗೆ ಆಗಮಿಸಿ ಸಭೆ ನಡೆಸಿದರು.
ಮೊಹಲ್ಲಾ – ಸಾಂಸ್ಥಿಕ ಸಬಲೀಕರಣ, ಆದರ್ಶ ಪ್ರಚಾರ, ಶಿಕ್ಷಣ ಮತ್ತು ಸಾಮಾಜಿಕ ಸೇವೆ, ಇತ್ಯಾದಿಗಳ ಕುರಿತು ಚರ್ಚೆ ನಡೆದವು. ಕಾದಪುರಂ ಉಸ್ತಾದ್ ಎಲ್ಲಾ ಮಹಲ್ಲುಗಳಲ್ಲಿ ಮಹ್ಲರತುಲ್ ಬದ್ರಿಯ್ಯಃ ಪ್ರಾರಂಭಿಸಲು ಸೂಚಿಸಿ ಇಜಾಝತ್ ನೀಡಿದರು.
ಜೊತೆಗೆ ಈ ಬಾರಿ ಹಜ್ ಗೆ ತೆರಳುವವರಿಗಾಗಿ ಪ್ರಾರ್ಥಿಸಿದರು. ಕಾಂದಪುರಂ ಉಸ್ತಾದ್ ಖಾಝಿಯಾಗಿರುವ ವಿವಿಧ ಮಹಲ್ಲುಗಳ ಸಂಗಮ ಮುಂದಿನ ದಿನಗಳಲ್ಲಿ ಜಾಮಿಉಲ್ ಫುತೂಹ್ನಲ್ಲಿ ನಡೆಯಲಿದೆ.
ಸಭೆಯಲ್ಲಿ ಡಾ| ಎಪಿ ಅಬ್ದುಲ್ ಹಕೀಂ ಅಝ್ಹರಿ ಮಹಲ್ಲ್ ಪ್ರತಿನಿಧಿಗಳೊಂದಿಗೆ ಮಾತನಾಡಿದರು.
ನಾಇಬ್ ಖಾಝಿ ಕೆ.ಎಸ್.ಶಾದುಲಿ ಫೈಝಿ, ಕರ್ನಾಟಕ ಎಸ್ ವೈಎಸ್ ರಾಜ್ಯಾಧ್ಯಕ್ಷ ಅಬ್ದುಲ್ ಹಫೀಝ್ ಸಅದಿ, ಇಸ್ಮಾಯಿಲ್ ಸಖಾಫಿ ಕೊಂಡಂಗೇರಿ, ಅಶ್ರಫ್ ಅಹ್ಸನಿ, ಸಿ.ಪಿ.ಅಬ್ದುಲ್ ಮಜೀದ್ ಮದನಿ, ಮುಹಮ್ಮದ್ ಹಾಜಿ, ಅಬ್ದುಲ್ ಹಮೀದ್ ಮುಸ್ಲಿಯಾರ್, ಇಲ್ಯಾಸ್ ತಙ್ಙಳ್ ಎರುಮಾಡ್, ಝುಬೈರ್ ಸಅದಿ, ಅಡ್ವೊಕೇಟ್ ಕುಞ್ಞಬ್ದುಲ್ಲಾ ಹಾಗೂ ಪಿಎ ಯೂಸುಫ್ ಹಾಜಿ ಎಂಬಿವರು ಮಾತನಾಡಿದರು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ