ಮಂಗಳೂರು: ರಾಜ್ಯದಲ್ಲಿ ಬದಲಾದ ರಾಜಕೀಯ ಬೆಳವಣಿಗೆಗಳಿಂದಾಗಿ, ಈ ಹಿಂದಿನ ಸರಕಾರ ಗೋಹತ್ಯೆ ನಿಷೇದ ಕಾಯ್ದೆಗೆ ತಿದ್ದುಪಡಿ ತಂದು ಜನರ ಸಂಸ್ಕೃತಿ ಮತ್ತು ಭಾವನೆಗಳ ಗೌರವ ಸಂರಕ್ಷಿಸುತ್ತೇವೆ ಎಂದು ಹೈನು ಮತ್ತು ಜಾನುವಾರು ಚಟುವಟಿಕೆಗಳಿಗೆ ಕಡಿವಾಣ ಹಾಕಿತ್ತು.
ಪ್ರಸ್ತುತ ರಾಜ್ಯದಲ್ಲಿ ನಿರುಪಯುಕ್ತ ಹಸುಗಳನ್ನು ವಿಲೇವಾರಿ ಮಾಡುವ ವಿಷಯದಲ್ಲಿ ಪಶು ಸಂಗೋಪನೆ ಸಚಿವರು ಹೇಳಿಕೆ ನೀಡಿ, ಕೃಷಿಕರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಚರ್ಚಿಸಿ ಹಾಲಿ ಇದ್ದ ಕಾನೂನಲ್ಲಿ ಬದಲಾವಣೆ ತರುತ್ತೇವೆ ಎಂದು ಮಾದ್ಯಮದಲ್ಲಿ ಹೇಳಿಕೆ ನೀಡಿದ ನಂತರ ರಾಜ್ಯದಲ್ಲಿ ಬಿಜೆಪಿ ಸದ್ರಿ ಬೆಳವಣಿಗೆಯನ್ನು ಮತೀಯ ವಿಷಯವಾಗಿ ಪರಿವರ್ತಿಸಲು ಪ್ರಯತ್ನ ಪಡುತ್ತಿದೆ.
ಸಚಿವರ ಹೇಳಿಕೆ ಒಂದು ನಿರ್ಧಿಷ್ಟ ಸಮುದಾಯವನ್ನು ಓಲೈಕೆ ಗೊಳಿಸಲು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಅಥವಾ ರದ್ದತಿಯ ವಿಷಯವು ಈ ರಾಜ್ಯದ ಕೃಷಿಕರ,ಹೈನು ಉದ್ಯಮೆದಾರರ ಮತ್ತು ರೈತರ ಪ್ರಮುಖ ಸಮಸ್ಯೆಯಾಗಿದೆ,ಹೊರತು ಯಾವುದೇ ನಿರ್ಧಿಷ್ಟ ಸಮುದಾಯದ ಸಮಸ್ಯೆ ಅಲ್ಲ ಎಂದು ಬಿಜೆಪಿ ತಿಳಿಯಲಿ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯಾವುದೇ ಒಂದು ನಿರ್ಧಿಷ್ಟ ಸಮುದಾಯವನ್ನು ಗುರಿಪಡಿಸಿ ‘ ಕಟುಕರು ‘ ಎಂದು ಸಂಬೋಧಿಸಿ ಬಿಜೆಪಿ ನಾಯಕರು ಮತೀಯತೆ ಕೆರಳಿಸುವ ಹೇಳಿಕೆ ನೀಡುವುದನ್ನು ರಾಜ್ಯದ ಜನತೆ ಚೆನ್ನಾಗಿ ಅರಿಯುತಿದ್ದಾರೆ ಎಂಬುದನ್ನು ತಿಳಿಯಬೇಕು.
ಗೋಹತ್ಯೆ ನಿಷೇಧ ಅಥವಾ ರದ್ದತಿ ಹೆಸರಲ್ಲಿ ರಾಜ್ಯದ ಮುಸ್ಲಿಮರನ್ನು ಎಳೆದು ತಂದು ಮತೀಯ ಫಸಲು ತೆಗೆಯುವ ಪ್ರಯತ್ನಕ್ಕೆ,ಈಗಾಗಲೇ ರಾಜ್ಯದ ಜನತೆ ಪ್ರಬುದ್ಧ ಸ್ಥಿತಿಯಲ್ಲಿಯೇ ಚುನಾವಣೆಯಲ್ಲಿ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.
ಮತೀಯ ಭಾವನೆ ಕೆರಳಿಸಿದ ಪಕ್ಷಗಳ ಸ್ಥಿತಿ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಏನಾಗಿದೆಯೋ ಅದೇ ಸ್ಥಿತಿ ಮುಂದಿನ ಲೋಕ ಸಭಾ ಚುನಾವಣೆಯಲ್ಲಿ ಖಂಡಿತವಾಗಿ ಆಗಲಿದೆ ಎನ್ನುವುದನ್ನು ಸಮರ್ಪಕವಾಗಿ ಅರಿಯಲಿ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ತಾಕೀತು ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್