ಮಂಗಳೂರು: ರಾಜ್ಯದಲ್ಲಿ ಬದಲಾದ ರಾಜಕೀಯ ಬೆಳವಣಿಗೆಗಳಿಂದಾಗಿ, ಈ ಹಿಂದಿನ ಸರಕಾರ ಗೋಹತ್ಯೆ ನಿಷೇದ ಕಾಯ್ದೆಗೆ ತಿದ್ದುಪಡಿ ತಂದು ಜನರ ಸಂಸ್ಕೃತಿ ಮತ್ತು ಭಾವನೆಗಳ ಗೌರವ ಸಂರಕ್ಷಿಸುತ್ತೇವೆ ಎಂದು ಹೈನು ಮತ್ತು ಜಾನುವಾರು ಚಟುವಟಿಕೆಗಳಿಗೆ ಕಡಿವಾಣ ಹಾಕಿತ್ತು.
ಪ್ರಸ್ತುತ ರಾಜ್ಯದಲ್ಲಿ ನಿರುಪಯುಕ್ತ ಹಸುಗಳನ್ನು ವಿಲೇವಾರಿ ಮಾಡುವ ವಿಷಯದಲ್ಲಿ ಪಶು ಸಂಗೋಪನೆ ಸಚಿವರು ಹೇಳಿಕೆ ನೀಡಿ, ಕೃಷಿಕರಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಚರ್ಚಿಸಿ ಹಾಲಿ ಇದ್ದ ಕಾನೂನಲ್ಲಿ ಬದಲಾವಣೆ ತರುತ್ತೇವೆ ಎಂದು ಮಾದ್ಯಮದಲ್ಲಿ ಹೇಳಿಕೆ ನೀಡಿದ ನಂತರ ರಾಜ್ಯದಲ್ಲಿ ಬಿಜೆಪಿ ಸದ್ರಿ ಬೆಳವಣಿಗೆಯನ್ನು ಮತೀಯ ವಿಷಯವಾಗಿ ಪರಿವರ್ತಿಸಲು ಪ್ರಯತ್ನ ಪಡುತ್ತಿದೆ.
ಸಚಿವರ ಹೇಳಿಕೆ ಒಂದು ನಿರ್ಧಿಷ್ಟ ಸಮುದಾಯವನ್ನು ಓಲೈಕೆ ಗೊಳಿಸಲು ಮಾಡಲಾಗಿದೆ ಎಂದು ಬಿಜೆಪಿ ನಾಯಕರು ಪತ್ರಿಕಾ ಹೇಳಿಕೆ ನೀಡಿದ್ದಾರೆ.
ರಾಜ್ಯದಲ್ಲಿ ಗೋಹತ್ಯೆ ನಿಷೇಧ ಅಥವಾ ರದ್ದತಿಯ ವಿಷಯವು ಈ ರಾಜ್ಯದ ಕೃಷಿಕರ,ಹೈನು ಉದ್ಯಮೆದಾರರ ಮತ್ತು ರೈತರ ಪ್ರಮುಖ ಸಮಸ್ಯೆಯಾಗಿದೆ,ಹೊರತು ಯಾವುದೇ ನಿರ್ಧಿಷ್ಟ ಸಮುದಾಯದ ಸಮಸ್ಯೆ ಅಲ್ಲ ಎಂದು ಬಿಜೆಪಿ ತಿಳಿಯಲಿ ಎಂದು ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯಾವುದೇ ಒಂದು ನಿರ್ಧಿಷ್ಟ ಸಮುದಾಯವನ್ನು ಗುರಿಪಡಿಸಿ ‘ ಕಟುಕರು ‘ ಎಂದು ಸಂಬೋಧಿಸಿ ಬಿಜೆಪಿ ನಾಯಕರು ಮತೀಯತೆ ಕೆರಳಿಸುವ ಹೇಳಿಕೆ ನೀಡುವುದನ್ನು ರಾಜ್ಯದ ಜನತೆ ಚೆನ್ನಾಗಿ ಅರಿಯುತಿದ್ದಾರೆ ಎಂಬುದನ್ನು ತಿಳಿಯಬೇಕು.
ಗೋಹತ್ಯೆ ನಿಷೇಧ ಅಥವಾ ರದ್ದತಿ ಹೆಸರಲ್ಲಿ ರಾಜ್ಯದ ಮುಸ್ಲಿಮರನ್ನು ಎಳೆದು ತಂದು ಮತೀಯ ಫಸಲು ತೆಗೆಯುವ ಪ್ರಯತ್ನಕ್ಕೆ,ಈಗಾಗಲೇ ರಾಜ್ಯದ ಜನತೆ ಪ್ರಬುದ್ಧ ಸ್ಥಿತಿಯಲ್ಲಿಯೇ ಚುನಾವಣೆಯಲ್ಲಿ ತಕ್ಕ ಪ್ರತ್ಯುತ್ತರ ನೀಡಿದ್ದಾರೆ.
ಮತೀಯ ಭಾವನೆ ಕೆರಳಿಸಿದ ಪಕ್ಷಗಳ ಸ್ಥಿತಿ ಕಳೆದ ವಿಧಾನ ಸಭಾ ಚುನಾವಣೆಯಲ್ಲಿ ಏನಾಗಿದೆಯೋ ಅದೇ ಸ್ಥಿತಿ ಮುಂದಿನ ಲೋಕ ಸಭಾ ಚುನಾವಣೆಯಲ್ಲಿ ಖಂಡಿತವಾಗಿ ಆಗಲಿದೆ ಎನ್ನುವುದನ್ನು ಸಮರ್ಪಕವಾಗಿ ಅರಿಯಲಿ ಎಂದು ಕೆ.ಅಶ್ರಫ್(ಮಾಜಿ ಮೇಯರ್)
ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ತಾಕೀತು ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ