ಬೆಂಗಳೂರು: ಸಂಸ್ಕೃತಿಯ ನೆಲೆಬೀಡಾಗಿರುವ ಕರುನಾಡು ಕೋಮುವಾದಗಳಿಂದ ತತ್ತರಿಸಿ ಹೋಗಿವೆ. ಅದನ್ನು ಸಂಪೂರ್ಣ ನಿರ್ನಾಮ ಗೊಳಿಸುವುದಕ್ಕೆ ಸರ್ಕಾರವು ಮೊದಲ ಆದ್ಯತೆ ನೀಡಬೇಕಿದೆಯೆಂದು SKSSF ರಾಜ್ಯ ನಾಯಕ, ಕರ್ನಾಟಕ ಭಾವೈಕ್ಯತಾ ಪರಿಷತ್ ದ.ಕ ಜಿಲ್ಲಾದ್ಯಕ್ಷ ಇಕ್ಬಾಲ್ ಬಾಳಿಲ ಆಗ್ರಹಿಸಿದ್ದಾರೆ.
ಅವರು ಇಂದು ಮುಖ್ಯಮಂತ್ರಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮನವಿಯೊಂದನ್ನು ಸಲ್ಲಿಸಿದ್ದಾರೆ.
ಪ್ರತೇಕವಾಗಿ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಸ್ವಚ್ಚತೆ, ಧಾರ್ಮಿಕ ಆಚರಣೆಗಳ ಮೂಲಕ ಅತ್ಯಂತ ಗೌರವ ಉಳಿಸಿಕೊಂಡ ಜಿಲ್ಲೆ. ಆದರೆ ಕೆಲವು ವರ್ಷಗಳಿಂದ ಕೋಮುವಾದ ಮತ್ತು ಮಾದಕ ವ್ಯಸನವು ವ್ಯಾಪಕವಾಗಿ ಹರಡಿ ಜಿಲ್ಲೆಯನ್ನು ತಲೆತಗ್ಗಿಸುವಂತೆ ಮಾಡಿದೆ.
ಇದರಿಂದ ಸಮಾಜ ಹೊರ ಬರಬೇಕಾದದ್ದು ಕಾಲದ ಬೇಡಿಕೆಯಾಗಿವೆ. ಆದ್ದರಿಂದ ಸರಕಾರವು ಸೌಹಾರ್ದತೆಗಾಗಿ ಹೆಚ್ಚಿನ ಪ್ರಯತ್ನಗಳನ್ನು ನಡೆಸಬೇಕಾಗಿದೆ.
ಸೇವಾರಂಗದಲ್ಲಿ ಕ್ರಾಂತಿಯ ಹೆಜ್ಜೆ ಹಾಕಿರುವ SKSSF ಸಂಘಟನೆಯು ಸೌಹಾರ್ದತೆಯ ಉಳಿವಿವಾಗಿ ಪ್ರತೀ ವರ್ಷವೂ ನೂರಕ್ಕೂ ಅಧಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ
ಪ್ರತೇಕವಾಗಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ದಿನದಂದು ಸಾವಿರಾರು ಜನರನ್ನು ಸೇರಿಸಿ ಅದ್ಭುತ ಕಾರ್ಯಕ್ರಮ ನೀಡುವ ಮೂಲಕ ಕೋಮುವಾದ ಮಾದಕ ವ್ಯಸನ ನಿರ್ನಾಮಕ್ಕಾಗಿ ಪ್ರಯತ್ನಿಸಲಾಗಿದೆ. ಆದರೂ ಸಂಪೂರ್ಣ ಕಡಿವಾಣ ಬೀಳಬೇಕಾದ ಅನಿವಾರ್ಯತೆಯಿದೆ.
ಅದಕ್ಕೊಂದು ಪರಿಹಾರ ಕಂಡುಕೊಳ್ಳಬೇಕಾದದ್ದು ಸರಕಾರದ ಜವಾಬ್ದಾರಿಯಾಗಿರುತ್ತದೆ. ಅದಕ್ಕಾಗಿ ಪ್ರತೇಕ ನಿಗಮಗಳನ್ನು ರಚಿಸುವಂತೆಯೂ ಮನವಿಯಲ್ಲಿ ಕೋರಲಾಗಿವೆ. ಹೊಸ ಸರಕಾರದ ಮೇಲೆ ಜನರಿಗೆ ತುಂಬಾ ನಿರೀಕ್ಷೆಯಿದೆ. ನಿರೀಕ್ಷೆಯಂತೆ ಮುನ್ನಡೆಯಲು ಮನವಿ ನೀಡಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ