ಬೆಂಗಳೂರು: ಸಂಸ್ಕೃತಿಯ ನೆಲೆಬೀಡಾಗಿರುವ ಕರುನಾಡು ಕೋಮುವಾದಗಳಿಂದ ತತ್ತರಿಸಿ ಹೋಗಿವೆ. ಅದನ್ನು ಸಂಪೂರ್ಣ ನಿರ್ನಾಮ ಗೊಳಿಸುವುದಕ್ಕೆ ಸರ್ಕಾರವು ಮೊದಲ ಆದ್ಯತೆ ನೀಡಬೇಕಿದೆಯೆಂದು SKSSF ರಾಜ್ಯ ನಾಯಕ, ಕರ್ನಾಟಕ ಭಾವೈಕ್ಯತಾ ಪರಿಷತ್ ದ.ಕ ಜಿಲ್ಲಾದ್ಯಕ್ಷ ಇಕ್ಬಾಲ್ ಬಾಳಿಲ ಆಗ್ರಹಿಸಿದ್ದಾರೆ.
ಅವರು ಇಂದು ಮುಖ್ಯಮಂತ್ರಿಯವರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ಮನವಿಯೊಂದನ್ನು ಸಲ್ಲಿಸಿದ್ದಾರೆ.
ಪ್ರತೇಕವಾಗಿ ದಕ್ಷಿಣ ಕನ್ನಡ ಜಿಲ್ಲೆಯು ಶಿಕ್ಷಣ, ಆರೋಗ್ಯ, ಸ್ವಚ್ಚತೆ, ಧಾರ್ಮಿಕ ಆಚರಣೆಗಳ ಮೂಲಕ ಅತ್ಯಂತ ಗೌರವ ಉಳಿಸಿಕೊಂಡ ಜಿಲ್ಲೆ. ಆದರೆ ಕೆಲವು ವರ್ಷಗಳಿಂದ ಕೋಮುವಾದ ಮತ್ತು ಮಾದಕ ವ್ಯಸನವು ವ್ಯಾಪಕವಾಗಿ ಹರಡಿ ಜಿಲ್ಲೆಯನ್ನು ತಲೆತಗ್ಗಿಸುವಂತೆ ಮಾಡಿದೆ.
ಇದರಿಂದ ಸಮಾಜ ಹೊರ ಬರಬೇಕಾದದ್ದು ಕಾಲದ ಬೇಡಿಕೆಯಾಗಿವೆ. ಆದ್ದರಿಂದ ಸರಕಾರವು ಸೌಹಾರ್ದತೆಗಾಗಿ ಹೆಚ್ಚಿನ ಪ್ರಯತ್ನಗಳನ್ನು ನಡೆಸಬೇಕಾಗಿದೆ.
ಸೇವಾರಂಗದಲ್ಲಿ ಕ್ರಾಂತಿಯ ಹೆಜ್ಜೆ ಹಾಕಿರುವ SKSSF ಸಂಘಟನೆಯು ಸೌಹಾರ್ದತೆಯ ಉಳಿವಿವಾಗಿ ಪ್ರತೀ ವರ್ಷವೂ ನೂರಕ್ಕೂ ಅಧಿಕ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ
ಪ್ರತೇಕವಾಗಿ ಸ್ವಾತಂತ್ರ್ಯ ದಿನಾಚರಣೆ ಹಾಗೂ ಗಣರಾಜ್ಯೋತ್ಸವ ದಿನದಂದು ಸಾವಿರಾರು ಜನರನ್ನು ಸೇರಿಸಿ ಅದ್ಭುತ ಕಾರ್ಯಕ್ರಮ ನೀಡುವ ಮೂಲಕ ಕೋಮುವಾದ ಮಾದಕ ವ್ಯಸನ ನಿರ್ನಾಮಕ್ಕಾಗಿ ಪ್ರಯತ್ನಿಸಲಾಗಿದೆ. ಆದರೂ ಸಂಪೂರ್ಣ ಕಡಿವಾಣ ಬೀಳಬೇಕಾದ ಅನಿವಾರ್ಯತೆಯಿದೆ.
ಅದಕ್ಕೊಂದು ಪರಿಹಾರ ಕಂಡುಕೊಳ್ಳಬೇಕಾದದ್ದು ಸರಕಾರದ ಜವಾಬ್ದಾರಿಯಾಗಿರುತ್ತದೆ. ಅದಕ್ಕಾಗಿ ಪ್ರತೇಕ ನಿಗಮಗಳನ್ನು ರಚಿಸುವಂತೆಯೂ ಮನವಿಯಲ್ಲಿ ಕೋರಲಾಗಿವೆ. ಹೊಸ ಸರಕಾರದ ಮೇಲೆ ಜನರಿಗೆ ತುಂಬಾ ನಿರೀಕ್ಷೆಯಿದೆ. ನಿರೀಕ್ಷೆಯಂತೆ ಮುನ್ನಡೆಯಲು ಮನವಿ ನೀಡಿರುತ್ತಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್