ಮಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ನೈತಿಕ ಪೊಲೀಸ್ ಗಿರಿ ಮತ್ತು ಗೋಸಾಗಾಟದ ಹಲ್ಲೆ ಸಂತ್ರಸ್ತರ ಮೊಬೈಲ್ ಸಂಖ್ಯೆಯ ಚಲನ ವಲನದ ಬಗ್ಗೆ ವ್ಯವಸ್ಥಿತವಾಗಿ ಟವರ್ ಲೊಕೇಶನ್ ಸ್ಥಿತಿಯ ನಿಖರ ಮಾಹಿತಿಯನ್ನು ನಿರ್ಧಿಷ್ಟ ಸಂಘಟನೆಗಳ ಹಲ್ಲೆಗಾರರರಿಗೆ ಘಟನೆ ಪೂರ್ವವಾಗಿ ಮಾಹಿತಿ ಸೋರಿಕೆ ಮಾಡಲಾಗುತಿತ್ತಾ ಎಂಬ ಬಗ್ಗೆ ಬಲವಾದ ಸಂಶಯ ಸೃಷ್ಟಿಯಾಗಿದೆ.
ಈ ಕಾರಣದಿಂದಲೇ ಹಿಂದಿನ ಸರಕಾರದ ಅವಧಿಯಲ್ಲಿ ವ್ಯಾಪಕ ನೈತಿಕ ಪೊಲೀಸ್ ಗಿರಿ ಮತ್ತು ಗೋಸಾಗಾಟ ಹಲ್ಲೆ ಮತ್ತು ಹತ್ಯೆಗಳು ಸಂಭವಿಸಿದ ಬಗ್ಗೆ ಬಲವಾದ ಸಂಶಯವಿರುವುದರಿಂದ ಈ ಬಗ್ಗೆ ತನಿಖೆ ನಡೆಸಲು ಸರಕಾರವನ್ನು ಒತ್ತಾಯ ಮಾಡಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಮುಸ್ಲಿಂ ಒಕ್ಕೂಟದ ಅಧ್ಯಕ್ಷರಾದ ಕೆ. ಅಶ್ರಫ್ ತಿಳಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಆಂಟಿ ಕಮ್ಯುನಲ್ ವಿಂಗ್ ಅಸ್ತಿತ್ವಕ್ಕೆ ಬಂದದ್ದು ಸ್ವಾಗತಾರ್ಹ ಮತ್ತು ಈ ವಿಂಗ್ ಜಿಲ್ಲೆಯಲ್ಲಿ ಕಾರ್ಯಾರಂಭ ಗೊಂಡಿದ್ದು, ಈ ತಂಡ ಹಿಂದಿನ ಘಟನೆಗಳನ್ನು ಪರಿಶೀಲಿಸುವಾಗ ಟವರ್ ಲೊಕೇಶನ್ ಮಾಹಿತಿ ಸೋರಿಕೆಯ ಬಗ್ಗೆಯು ತನಿಖೆ ನಡೆಸಬೇಕಿದೆ ಎಂದು ಕೆ.ಅಶ್ರಫ್ ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ