ಮಂಗಳೂರು,ಜೂನ್.16:ದ.ಕ.ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿ ಸರಕಾರದಿಂದ ಪರಿಹಾರ ಸಿಗದ ನಾಲ್ವರು ಯುವಕರ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ.
ಕಳೆದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಹತ್ಯೆಯಾಗಿತ್ತು. ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.
ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ್ದರು. ಅದರಂತೆ ಪರಿಹಾರ ಬಿಡುಗಡೆ ಮಾಡಲಾಗಿದೆ.
ಬೊಮ್ಮಾಯಿ ಸರಕಾರದ ಅವಧಿಯಲ್ಲಿ ಇವರ ಕುಟುಂಬಕ್ಕೆ ಪರಿಹಾರ ಕೊಡದೆ ತಾರತಮ್ಯ ಮಾಡಲಾಗಿತ್ತು.ನೂತನ ಸರಕಾರ ಬಂದ ಬಳಿಕ ಪರಿಹಾರ ನೀಡಲು ಆಗ್ರಹ ಕೇಳಿ ಬಂದಿತ್ತು.
















ಇನ್ನಷ್ಟು ಸುದ್ದಿಗಳು
ಸಪ್ಟೆಂಬರ್-17 : ಉಪ್ಪಿನಂಗಡಿಯಲ್ಲಿ ಬೃಹತ್ ಮೀಲಾದ್ ರ್ಯಾಲಿ ಹಾಗೂ ಕಾನ್ಫರೆನ್ಸ್
SIR ನೋಟೀಸ್ ಗೊಂದಲ: ಅನಿವಾಸಿ ಭಾರತೀಯರಿಗೆ ಶೀಘ್ರದಲ್ಲೇ ಪರಿಹಾರ- ಉಸ್ತುವಾರಿ ಸಚಿವರಿಂದ ಭರವಸೆ
ಕಿನ್ಯದಲ್ಲಿ ಹಬ್ಬಗಳ ಮೂಲಕ ಗಟ್ಟಿಯಾದ ಸೌಹಾರ್ದದ ಬಂಧ
ಬೆಸ್ಟ್ ಫ್ರೆಂಡ್ಸ್ ಚಾರಿಟಬಲ್ ಟ್ರಸ್ಟ್: ಶುದ್ಧ ಕುಡಿಯುವ ನೀರಿನ ವಾಟರ್ ಡಿಸ್ಪೆನ್ಸರ್ ವಿತರಣೆ
ಧರ್ಮವನ್ನು ವ್ಯಾಖ್ಯಾನಿಸುವುದಲ್ಲ ರಾಜ್ಯದ ಕರ್ತವ್ಯ, ಆಡಳಿತ ನಡೆಸುವತ್ತ ಗಮನ ಕೊಡಿ- ವಿ.ಡಿ.ಸತೀಶನ್ ವಿರುದ್ಧ ಎಸ್ಎಸ್ಎಫ್
ಇಸ್ಲಾಂ ವಿರೋಧಿ ಹೇಳಿಕೆಯನ್ನು ಮುಖ್ಯಮಂತ್ರಿ ಹಿಂಪಡೆಯಬೇಕು- ಕೇರಳ ಮುಸ್ಲಿಂ ಜಮಾಅತ್
ಎಸ್ಸೆಸ್ಸೆಫ್ ರಾಜ್ಯ ಮಟ್ಟದ ಸಾಹಿತ್ಯೋತ್ಸವ- ಹೂವಿನಹಡಗಲಿಯಲ್ಲಿ
ಸ್ಕಾಯ್ ಕರಾಟೆಯಲ್ಲಿ ಫಾತಿಮತ್ ರಿಫಾತ್ಗೆ ಚಿನ್ನದ ಪದಕ
ಶೈಖ್ ಅಬೂಬಕ್ಕರ್ ಅಹ್ಮದ್ ಮುಸ್ಲಿಯಾರ್- ಜಗತ್ತು ಕಂಡ ಆಧುನಿಕ ದಾರ್ಶನಿಕ ನಾಯಕ
ಸೌಹಾರ್ದ ಹಾಗೂ ಸಾಮರಸ್ಯದ ಸಂಗಮಕ್ಕೆ ಸಾಕ್ಷಿಯಾದ ಬಳಕುಂಜೆ