ಮಂಗಳೂರು,ಜೂನ್.16:ದ.ಕ.ಜಿಲ್ಲೆಯಲ್ಲಿ ಮತೀಯ ದುಷ್ಕರ್ಮಿಗಳಿಂದ ಹತ್ಯೆಗೀಡಾಗಿ ಸರಕಾರದಿಂದ ಪರಿಹಾರ ಸಿಗದ ನಾಲ್ವರು ಯುವಕರ ಕುಟುಂಬಗಳಿಗೆ ಮುಖ್ಯಮಂತ್ರಿಯ ಪರಿಹಾರ ನಿಧಿಯಿಂದ ತಲಾ 25 ಲಕ್ಷ ರೂ. ಪರಿಹಾರ ಘೋಷಿಸಿ ರಾಜ್ಯ ಸರಕಾರ ಇಂದು ಆದೇಶ ಹೊರಡಿಸಿದೆ.
ಕಳೆದ ಜುಲೈ 19ರಂದು ಬೆಳ್ಳಾರೆಯ ಮಸೂದ್, 28ರಂದು ಮಂಗಳಪೇಟೆಯ ಮುಹಮ್ಮದ್ ಫಾಝಿಲ್ ಹತ್ಯೆಯಾಗಿತ್ತು. ಕಳೆದ ವರ್ಷದ ಡಿಸೆಂಬರ್ 24ರಂದು ಕಾಟಿಪಳ್ಳದ ಅಬ್ದುಲ್ ಜಲೀಲ್ ಹಾಗೂ 2018ರ ಜನವರಿ 3ರಂದು ಕಾಟಿಪಳ್ಳದ ದೀಪಕ್ ರಾವ್ ಅವರನ್ನು ದುಷ್ಕರ್ಮಿಗಳು ಹತ್ಯೆ ಮಾಡಿದ್ದರು.
ರಾಜ್ಯ ಪೊಲೀಸ್ ಇಲಾಖೆಯ ಮಹಾನಿರ್ದೇಶಕರು ಸರಕಾರದ ವತಿಯಿಂದ ಪರಿಹಾರ ಧನ ಮಂಜೂರು ಮಾಡುವಂತೆ ಒಳಾಡಳಿತ ಇಲಾಖೆಯನ್ನು ಕೋರಿದ್ದರು. ಅದರಂತೆ ಪರಿಹಾರ ಬಿಡುಗಡೆ ಮಾಡಲಾಗಿದೆ.
ಬೊಮ್ಮಾಯಿ ಸರಕಾರದ ಅವಧಿಯಲ್ಲಿ ಇವರ ಕುಟುಂಬಕ್ಕೆ ಪರಿಹಾರ ಕೊಡದೆ ತಾರತಮ್ಯ ಮಾಡಲಾಗಿತ್ತು.ನೂತನ ಸರಕಾರ ಬಂದ ಬಳಿಕ ಪರಿಹಾರ ನೀಡಲು ಆಗ್ರಹ ಕೇಳಿ ಬಂದಿತ್ತು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ