ದೋಹಾ : ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ಖತ್ತರ್ ಸಂಘಟನಾ ವಿಭಾಗದ ವತಿಯಿಂದ EVOLVE – ಸಂಘಟನಾ ಕಾರ್ಯಾಗಾರವು ದಿನಾಂಕ 15-06-2023 ರಂದು ದೋಹಾದ ಹಸನಿಯ್ಯಾದಲ್ಲಿ ನಡೆಯಿತು.


ಖತ್ತರ್ ರಾಷ್ಟ್ರೀಯ ಸಮಿತಿ ಅಧ್ಯಕ್ಷರಾದ ಹನೀಫ್ ಪಾತೂರುರವರ ಅಧ್ಯಕ್ಷತೆಯಲ್ಲಿ ಜರಗಿದ ಕಾರ್ಯಕ್ರಮವನ್ನು, ಕೆಸಿಎಫ್ ಅಂತರಾಷ್ಟ್ರೀಯ ಸಮಿತಿ ಸಂಘಟನಾ ಕಾರ್ಯದರ್ಶಿ ಹಾಫಿಳ್ ಉಮರುಲ್ ಫಾರೂಖ್ ಸಖಾಫಿ ರವರು ಉದ್ಘಾಟಿಸಿದರು.
ಕಾರ್ಯಕ್ರಮವು ಮೂರು ಭಾಗವಾಗಿ ಜರಗಿದ್ದು, ಮೊದಲ ಭಾಗದಲ್ಲಿ ಐಸಿಎಫ್ ಖತ್ತರ್ ನಾಯಕರಾದ ಜಮಾಲ್ ಅಝ್’ಹರಿ ಯವರಿಂದ ಸಂಘಟನೆಯ ಮಹತ್ವ ಹಾಗೂ ಕಾರ್ಯಚಟುವಟಿಕೆಯ ರೀತಿಯ ಕುರಿತು ತರಬೇತಿ ಜರಗಿತು. ಎರಡನೇ ಭಾಗದಲ್ಲಿ ಬಹುಮಾನ್ಯರಾದ ಎಂ.ಪಿ ಅಬ್ದುಲ್ಲ ಫೈಝಿ ನೆಕ್ರಾಜೆಯವರಿಂದ ಪವಿತ್ರ ಹಜ್ಜ್ ಆರಂಭವಾದ ದಾರಿಯ ಕುರಿತು ತರಗತಿ ನಡೆದರೆ, ಮೂರನೇ ಭಾಗವಾಗಿ RSC ಖತ್ತರ್ ನಾಯಕರಾದ ಅಬ್ದುಲ್ ರಹ್ಮಾನ್ ಏರೋಲ್ ರವರಿಂದ ವ್ಯಕ್ತಿತ್ವ ಅಭಿವೃದ್ಧಿ ಹಾಗೂ ಸಂಘಟಿಸುವ ಕುರಿತಾದ ಪ್ರಾಯೋಗಿಕ ತರಗತಿ ಮೂಡಿ ಬಂತು.
ವೇದಿಕೆಯಲ್ಲಿ ಕೆಸಿಎಫ್ ಖತ್ತರ್ ರಾಷ್ಟ್ರೀಯ ಸಮಿತಿ ಶಿಕ್ಷಣ ವಿಭಾಗ ಅಧ್ಯಕ್ಷರಾದ ಖಾಲಿದ್ ಹಿಮಮಿ, ರಾಷ್ಟ್ರೀಯ ಅಡ್ಮಿನ್ ವಿಭಾಗದ ಅಧ್ಯಕ್ಷ ಸತ್ತಾರ್ ಅಶ್ರಫಿ ಮಠ, ರಾಷ್ಟ್ರೀಯ ಸಂಘಟನಾ ವಿಭಾಗದ ಅಧ್ಯಕ್ಷ ಮಿರ್ಶಾದ್ ಕನ್ಯಾನ ಉಪಸ್ಥಿತರಿದ್ದರು.
ಕೆಸಿಎಫ್ ದೋಹಾ ಝೋನ್ ಶಿಕ್ಷಣ ವಿಭಾಗ ಅಧ್ಯಕ್ಷರಾದ ಆಸಿಫ್ ಅಹ್ಸನಿ ಅನ್ವರಿ ಕೊಡಗು ರವರ ನೇತೃತ್ವದಲ್ಲಿ ಮಹ್ಲರತುಲ್ ಬದ್ರಿಯ ಮಜ್ಲಿಸ್ ಕೂಡ ನಡೆಯಿತು. ಕೆಸಿಎಫ್ ಖತ್ತರ್ ರಾಷ್ಟ್ರೀಯ ಸಮಿತಿ ಪ್ರಧಾನ ಕಾರ್ಯದರ್ಶಿ ಫಾರೂಖ್ ಕೃಷ್ಣಾಪುರ ಸ್ವಾಗತಿಸಿ, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ರಿಶಾದ್ ಮಧುವನ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಝಮೀರ್ ಹಜ್ ಜಮೀನು ಹೇಳಿಕೆಗೆ ಖಂಡನೆ: ಮಂಗಳೂರಿನ ಸ್ಥಿತಿವಂತ ಮುಸ್ಲಿಮರು ಈ ರಾಜ್ಯಕ್ಕೆ ಅಪಾರ ಕೊಡುಗೆ ನೀಡಿದ್ದಾರೆ: ಮಾಜಿ ಮೇಯರ್ ಕೆ.ಅಶ್ರಫ್
ಸಲೀಂ ಅಹ್ಮದ್ ರಿಯಾದಿನಲ್ಲಿ ನಿಧನ. ಅಂತ್ಯಕ್ರಿಯೆಗೆ ಸಹಕರಿಸಿದ ಕೆಸಿಎಫ್ ರಿಯಾದ್
ಕುದ್ರೋಳಿ ಮಖಾಂ ಉರೂಸ್ 2027 ಜನವರಿ 1 ರಿಂದ ಜನವರಿ 9
ಬೆಳ್ತಂಗಡಿ ತಾಲೂಕು ಮೊಹಲ್ಲಾಗಳಿಂದ ತಾಜುಲ್ ಉಲಮಾ ದರ್ಸ್ ಗೆ 10 ಲಕ್ಷ ರೂಪಾಯಿ ಚೆಕ್ ಹಸ್ತಾಂತರ
ತಾಜುಲ್ ಉಲಮಾ ಉರೂಸ್ ಯಶಸ್ಸಿಗೆ ಎಸ್ ವೈ ಎಸ್ ಕರೆ
ಮಂಗಳಪೇಟೆಯ ಈ ಮಕ್ಕಳು ನಮ್ಮ ಮಕ್ಕಳಿಗೆ ಮಾದರಿಯಾಗಲಿ
ಸೌದಿ ಅರೇಬಿಯಾ ವಿರುದ್ಧ ಹೌತಿಗಳ ದಾಳಿ; 73 ನಾಗರಿಕರಿಗೆ ಗಾಯ
ಹಾರ್ಮುಜ್ ತೆರೆಯುವುದಕ್ಕೆ ಆದ್ಯತೆ; ಬಿಕ್ಕಟ್ಟು ಮುಂದುವರಿದರೆ ಕೈಗಾರಿಕಾ ದುರಂತ- ಕತಾರ್
ಬುರೈದದಲ್ಲಿ ಕೆಸಿಎಫ್ ಅಲ್ ಕಸೀಮ್ ಝೋನ್ ವತಿಯಿಂದ ಲೆಗಸಿ ನೈಟ್-2026 ಫ್ಯಾಮಿಲಿ ಮೀಟ್
ನಮ್ಮ ಭಾರತ ನಮ್ಮ ಹೆಮ್ಮೆ’: ಕೆಸಿಎಫ್ ಸೌದಿ ಅರೇಬಿಯಾದ ರಾಷ್ಟ್ರೀಯ ಮಟ್ಟದ ಆನ್ಲೈನ್ ಸಂವಾದ