
ಬೀದರ್ : ಕರ್ನಾಟಕ ರಾಜ್ಯ ಸುನ್ನೀ ಸ್ಟೂಡೆಂಟ್ಸ್ ಫೆಡರೇಷನ್ ಐವತ್ತನೇ ವರ್ಷಾಚರಣೆ ಪ್ರಯುಕ್ತ ಸೆಪ್ಟೆಂಬರ್ 10 ರಂದು ಬೆಂಗಳೂರಿನಲ್ಲಿ ನಡೆಯಲಿರುವ ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನದ ಪ್ರಚಾರಾರ್ಥ ಹಮ್ಮಿಕೊಂಡಿರುವ ಗೋಲ್ಡನ್ ಸಫಾರಿ ಯಾತ್ರೆಯ ಮೊದಲನೇ ಹಂತ ಬೆಂಗಳೂರಿನಿಂದ ಮಂಗಳೂರು ವರೆಗೆ ಈಗಾಗಲೇ ಸಮಾಪ್ತಿಗೊಂಡಿದೆ.
ಎರಡನೇ ಹಂತದ ಯಾತ್ರೆ ಜೂನ್ 21 ನಾಳೆ ಬೀದರ್ ಪಟ್ಟಣದ ಅಬುಲ್ ಫೈಲ್ ರಹ್ಮಹುಲ್ಲಾಹ್ ರವರ ದರ್ಬಾರಿನಿಂದ ಆರಂಭಗೊಳ್ಳಲಿದ್ದು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಹಾಫಿಝ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ನೇತೃತ್ವ ನೀಡಲಿದ್ದಾರೆ.
ನಾಳೆ ಸಂಜೆ ಗುಲ್ಬರ್ಗ ಶೈಖ್ ರೋಝಾದಲ್ಲಿ ಹಾಗೂ ರಾತ್ರಿ ಯಾದಗಿರಿ ಪಟ್ಟಣದಲ್ಲಿ ಕಾರ್ಯಕ್ರಮ ನಡೆಯಲಿದೆ.
ಬಳಿಕ ಬಿಜಾಪುರ, ರಾಯಚೂರು, ಗಂಗಾವತಿ, ಬಾಗಲಕೋಟೆ, ಹುಬ್ಬಳ್ಳಿ, ಬೆಳಗಾವಿ, ಚಿತ್ರದುರ್ಗ, ಬಳ್ಳಾರಿ, ದಾವಣಗೆರೆ, ಹಾವೇರಿ, ಗದಗ ಜಿಲ್ಲೆಗಳಲ್ಲಿ ಕಾರ್ಯಕ್ರಮ ನಡೆಯಲಿದ್ದು ಜೂನ್ 26ರಂದು ಭಟ್ಕಳದಲ್ಲಿ ಸಮಾರೋಪಗೊಳ್ಳಲಿದೆ ಎಂದು ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಸಫ್ವಾನ್ ಚಿಕ್ಕಮಗಳೂರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎಸ್ಸೆಸ್ಸೆಫ್ ರಾಜ್ಯ ಕೋಶಾಧಿಕಾರಿ ಕೆಎಂ ಮುಸ್ತಫಾ ನಈಮಿ ಹಾವೇರಿ, ಅನ್ವರ್ ಅಸ್ಅದಿ, ಜುನೈದ್ ಸಖಾಫಿ ಚಿತ್ರದುರ್ಗ, ಮುಜೀಬ್ ಕೊಂಡಂಗೇರಿ, ಅಶ್ರಫ್ ಸಖಾಫಿ ಹರಿಹರ, ಅಬ್ದುಲ್ ಹಮೀದ್ ತಲಪಾಡಿ ಹಾಗೂ ಇರ್ಶಾದ್ ಹಾಜಿ ಗೂಡಿನಬಳಿ ಯಾತ್ರೆಯಲ್ಲಿ ಪಾಲ್ಗೊಳ್ಳಲಿದ್ದಾರೆ.















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ