ಕಲ್ಲಡ್ಕ: ನಾಡಿನ ಪ್ರತಿಷ್ಠಿತ ಸಮನ್ವಯ ಶಿಕ್ಷಣ ಕೇಂದ್ರ ದಾರುಲ್ ಅಶ್ಅರಿಯ ಸುರಿಬೈಲ್ ತನ್ನ 25 ವರ್ಷಗಳನ್ನು ಪೂರೈಸಿ, 2023 ನವೆಂಬರ್ 1,2,3 ದಿನಾಂಕಗಳಲ್ಲಿ ಬೆಳ್ಳಿ ಹಬ್ಬವನ್ನು ಆಚರಿಸುವ ಸಂಭ್ರಮದಲ್ಲಿದೆ.
ಸಂಸ್ಥೆಯು ಬೆಳ್ಳಿ ಹಬ್ಬ ಅಂಗವಾಗಿ 25 ಅಂಶ ಸಮಾಜಮುಖಿ ಕಾರ್ಯಕ್ರಮಗಳನ್ನು ರೂಪಿಸಿದ್ದು, ಅದರ ಮೊದಲನೆಯ ಕಾರ್ಯಕ್ರಮವಾಗಿ ಬಂಟ್ವಾಳ ತಾಲೂಕು ಸರಕಾರಿ ಆಸ್ಪತ್ರೆಯ ನೂರಾರು ರೋಗಿಗಳಿಗೆ, ಸಹಾಯಕರಿಗೆ, ವೈದ್ಯಾಧಿಕಾರಿಗಳಿಗೆ ಪವಿತ್ರ ಬಕ್ರೀದ್ ಹಬ್ಬದ ದಿನ ಆಹಾರ ವಿತರಿಸುವ ಮೂಲಕ ಯೋಜನೆಗೆ ಚಾಲನೆ ನೀಡಲಾಯಿತು.
ಆಹಾರ ವಿತರಣಾ ಕಾರ್ಯಕ್ರಮದಲ್ಲಿ ಸಂಸ್ಥೆಯ ಜನರಲ್ ಮ್ಯಾನೇಜರ್ ಮಹಮ್ಮದ್ ಅಲಿ ಸಖಾಫಿ ಉಸ್ತಾದರು ಮಾತನಾಡಿ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಈ ವೇಳೆ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ.ಸ್ಟಾಲಿನ್, SSF ದಕ್ಷಿಣ ಕನ್ನಡ ಜಿಲ್ಲಾ ಮಾಜಿ ಅಧ್ಯಕ್ಷ ಇಬ್ರಾಹಿಂ ಸಖಾಫಿ ಸೆರ್ಕಳ ಹಾಗೂ ಅಕ್ಬರ್ ಅಲಿ ಮದನಿ ಆಲಂಪಾಡಿ, ಕರೀಂ ಕದ್ಕಾರ್, ಝಕರಿಯ ನಾರ್ಶ, ಹಂಝ ಮಂಚಿ, ಇಸ್ಮಾಯಿಲ್ ಬಂಟ್ವಾಳ, ರಝ್ಝಾಕ್ ಹನೀಫಿ, ರವೂಫ್ ಅಶ್-ಅರಿ, ಮುಸ್ತಫ ಅಶ್-ಅರಿ, ಝಾಹಿರ್ ಪಾತೂರ್ ಉಪಸ್ಥಿತರಿದ್ದರು.
ಸಿದ್ದೀಕ್ ಅಶ್-ಅರಿ, ಕುಕ್ಕಾಜೆ ಸಂಸ್ಥೆಯ 25 ಅಂಶ ಯೋಜನೆಗಳನ್ನು ಯಶಸ್ವಿಯಾಗಿ ನಡೆಸಲು ಸಹಕಾರ ಕೋರಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್