ಸ್ಟಾಕ್ ಹೋಮ್: ಪವಿತ್ರ ಖುರ್ಆನ್ ದಹಿಸಿ ಪ್ರತಿಭಟನೆಗೆ ಅನುಮತಿ ನೀಡಿದ ಸ್ವೀಡನ್ ನ್ಯಾಯಾಲಯದ ತೀರ್ಪಿನ ವಿರುದ್ಧ ವ್ಯಾಪಕ ಆಕ್ರೋಶ.
ಬಕ್ರೀದ್ ಹಬ್ಬದ ದಿನದಂದು ರಾಜಧಾನಿ ಸ್ಟಾಕ್ಹೋಮ್ನಲ್ಲಿರುವ ಮಸೀದಿಯ ಮುಂದೆ ಖುರ್ಆನ್ ಅನ್ನು ದಹಿಸಿ ಪ್ರತಿಭಟಿಸಲು ಮೇಲ್ಮನವಿ ನ್ಯಾಯಾಲಯ ಅನುಮತಿ ನೀಡಿದೆ. ನಗರದ ಮಧ್ಯಭಾಗದಲ್ಲಿರುವ ಸೊಡರ್ಮಾಮ್ ದ್ವೀಪದಲ್ಲಿರುವ ಮುಖ್ಯ ಮಸೀದಿಯ ಪರಿಸರ ಪ್ರತಿಭಟನೆ ನಡೆಸಲಾಗುವುದು.
ಖುರ್ಆನ್ ದಹನಕ್ಕೆ ಪೊಲೀಸರು ಅನುಮತಿ ನೀಡದ ಹಿನ್ನೆಲೆಯಲ್ಲಿ ಪ್ರತಿಭಟನಾಕಾರರು ನ್ಯಾಯಾಲಯದ ಮೊರೆ ಹೋಗಿದ್ದರು.
ಕಳೆದ ಜನವರಿಯಲ್ಲಿ ಟರ್ಕಿಯ ರಾಯಭಾರಿ ಕಚೇರಿ ಎದುರು ಇದೇ ರೀತಿಯ ಪ್ರತಿಭಟನೆ ನಡೆಸಲಾಗಿತ್ತು. ಟರ್ಕಿ ಮತ್ತು ಇತರ ಮುಸ್ಲಿಂ ರಾಷ್ಟ್ರಗಳು ಈ ವಿಷಯದ ಬಗ್ಗೆ ತೀವ್ರ ಪ್ರತಿಭಟನೆಗಳನ್ನು ಎತ್ತಿದವು.
ಟರ್ಕಿ ಅಧ್ಯಕ್ಷ ರಜಬ್ ತಯ್ಯಿಬ್ ಉರ್ದುಗಾನ್ ಸ್ವೀಡನ್ ನ ನ್ಯಾಟೋ ಸದಸ್ಯತ್ವಕ್ಕೆ ನೀಡಿದ್ದ ಬೆಂಬಲವನ್ನು ಹಿಂಪಡೆದಿದ್ದರು.
ಬಾಗ್ದಾದ್ ನಲ್ಲಿ ಸ್ವೀಡಿಷ್ ರಾಯಭಾರ ಕಚೇರಿಗೆ ಮುತ್ತಿಗೆ
ಇರಾಕ್ ನ ರಾಜಧಾನಿ ಬಾಗ್ದಾದ್ ನಲ್ಲಿ ಸಾವಿರಾರು ಪ್ರತಿಭಟನಾಕಾರರು ಸ್ವೀಡನ್ನಲ್ಲಿ ಕುರಾನ್ನ ಪ್ರತಿಯನ್ನು ಸುಟ್ಟುಹಾಕಿದ ಒಂದು ದಿನದ ನಂತರ, ಗುರುವಾರ ಬಾಗ್ದಾದ್ನಲ್ಲಿರುವ ಸ್ವೀಡಿಷ್ ರಾಯಭಾರ ಕಚೇರಿಗೆ ಮುತ್ತಿಗೆ ಹಾಕಿದ್ದಾರೆ.
ಭಾರೀ ಗಾತ್ರದ ಬ್ಯಾರಿಕೇಡನ್ನು ಹತ್ತಿ ರಾಯಭಾರ ಕಚೇರಿಯ ವರಾಂಡದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಬಳಿಕ ಇರಾಕಿನ ಭದ್ರತಾ ಪಡೆಗಳು ಪ್ರತಿಭಟನಾಕಾರರನ್ನು ಚದುರಿಸಿದರು.
ಪ್ರಬಲ ಇರಾಕಿನ ಶಿಯಾ ಧರ್ಮಗುರು ಮುಕ್ತದಾ ಅಲ್-ಸದರ್ ಪ್ರತಿಭಟನೆಗೆ ಆದೇಶಿಸಿದ್ದು, ಬಾಗ್ದಾದ್ನಲ್ಲಿರುವ ಸ್ವೀಡಿಷ್ ರಾಯಭಾರಿಯನ್ನು ಹೊರಹಾಕುವಂತೆ ಕರೆ ನೀಡಿದ್ದಾರೆ.


















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ