ಬೆಂಗಳೂರು: ಕರ್ನಾಟಕ ರಾಜ್ಯ ವಖ್ಫ್ ಬೋರ್ಡ್ ಅಧ್ಯಕ್ಷರಾಗಿರುವ ಎನ್.ಕೆ.ಎಂ ಶಾಫಿ ಸಅದಿಯವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ಕಳೆದ ಒಂದೂವರೆ ವರ್ಷಗಳ ಹಿಂದೆ ಯೂಸುಫ್ ಬೆಂಗಳೂರು ರವರ ನಿಧನದಿಂದ ತೆರವಾದ ಸ್ಥಾನಕ್ಕೆ ನಡೆದ ವಕ್ಫ್ ಚುನಾವಣೆಯಲ್ಲಿ ಶಾಫಿ ಸಅದಿಯವರು ಆಯ್ಕೆ ಯಾಗಿದ್ದರು. ಇಂಡಿಯನ್ ಗ್ರ್ಯಾಂಡ್ ಮುಫ್ತಿ ಸುಲ್ತಾನುಲ್ ಉಲಮಾರ ಸಾನಿಧ್ಯದಲ್ಲಿ ಒಂದುವರೆ ವರ್ಷದ ಅಧಿಕಾರ ಹಂಚಿಕೆಯ ಸಂಧಾನದೊಂದಿಗೆ ಅಧಿಕಾರ ಸ್ವೀಕರಿಸಿದ್ದ ಉಸ್ತಾದರು ತನ್ನ ಅವಧಿ ಪೂರ್ಣಗೊಳಿಸಿ ರಾಜಿನಾಮೆ ನೀಡಿದ್ದು,ಮುಂದಿನ ಒಂದೂವರೆ ವರ್ಷ ರಾಜ್ಯ ವಕ್ಫ್ ಮಂಡಳಿ ಸದಸ್ಯರಾಗಿ ಮುಂದುವರಿಯಲಿದ್ದಾರೆ.
ಒಂದು ತಿಂಗಳಲ್ಲಿ ಸರ್ಕಾರ ಮಗದೊಮ್ಮೆ ಚುನಾವಣೆ ನಡೆಸಿ, ಒಪ್ಪಂದದಂತೆ ಮುತುವಲ್ಲಿ ವಿಭಾಗದಿಂದ ವಕ್ಫ್ ಸದಸ್ಯರಾಗಿರುವ ಅನ್ವರ್ ಚಿತ್ರದುರ್ಗ ಹಾಗೂ ಬಾರ್ ಕೌನ್ಸಿಲ್ ನಿಂದ ಆಯ್ಕೆಯಾಗಿರುವ ಅಡ್ವೊಕೇಟ್ ರಿಯಾಝ್ ಖಾನ್ ವಕ್ಫ್ ಚುನವಾಣಾ ಅಭ್ಯರ್ಥಿಗಳಾಗುವ ಸಾಧ್ಯತೆ ಇದೆ. ಮುಂದಿನ ಅಧ್ಯಕ್ಷರ ಆಯ್ಕೆ ತನಕ ಶಾಫಿ ಸಅದಿಯವರು ಹಂಗಾಮಿ ಅಧ್ಯಕ್ಷರಾಗಿ ಅಧಿಕಾರದಲ್ಲಿ ಮುಂದುವರೆಯಲಿದ್ದಾರೆ.
ರಾಜ್ಯದ ವಖ್ಫ್ ಬೋರ್ಡ್ ಅಧ್ಯಕ್ಷ ಸ್ಥಾನವನ್ನು ಓರ್ವ ಆಲಿಮ್ ಅಲಂಕರಿಸಿದ ಹೆಗ್ಗಳಿಕೆಯು ಶಾಫಿ ಸಅದಿಯರಿಗೆ ಸಲ್ಲುತ್ತದೆ. ರಾಜ್ಯಾದ್ಯಂತ ವಕ್ಫ್ ಸಂಸ್ಥೆಯನ್ನು ಗುರುತಿಸುವಂತೆ ಮಾಡಿ. ಹಲವು ಅಭಿವೃದ್ಧಿ ಕಾರ್ಯಗಳನ್ನು ಕೈಗೊಂಡಿದ್ದಾರೆ.

















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್