ದುಬೈ:ಅಲ್ ಖಾದಿಸ ಎಜುಕೇಶನಲ್ ಅಕಾಡಮಿ ದುಬೈ ಸಮಿತಿ ವತಿಯಿಂದ ಹುದ್ನಾ -1439 ಕಾರ್ಯಕ್ರಮವು ನಾಳೆ ದುಬೈಯಲ್ಲಿ ನಡೆಯಲಿದೆ.ದಕ್ಷಿಣ ಕನ್ನಡ ಜಿಲ್ಲೆಯ ಕಾವಳ್ಕಟ್ಟೆ ಎoಬಲ್ಲಿ ಬಡವರಿಗೆ ನಿರ್ಗತಿಕರಿಗೆ ಆಶಾ ಕೇಂದ್ರವಾಗಿ ಧಾರ್ಮಿಕ ಲೌಕಿಕ ಶಿಕ್ಷಣ ಸಂಸ್ಥೆಯಾಗಿ ಬೆಳೆಯುತ್ತಿರುವ ಅಲ್ ಖಾದಿಸ ಎಜುಕೇಷನಲ್ ಅಕಾಡಮಿ ಇದರ ದುಬೈ ಸಮಿತಿ ವತಿಯಿಂದ ಹುದ್ನಾ 1439 ಎಂಬ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.
ದಿನಾಂಕ 11/5/2018 ಶುಕ್ರವಾರ ಮಗ್ರಿಬ್ ನಮಾಝ್ ನಂತರ ದೇರಾ ಅಲ್ ನಖೀಲ್ ನಲ್ಲಿರುವ ಗೋಲ್ಡನ್ ಸ್ಕ್ವೇರ್ ಹೋಟೆಲ್ ಸಭಾಂಗಣದಲ್ಲಿ ದುಬೈ ಸಮಿತಿ ಅಧ್ಯಕ್ಷರಾದ ಅಬ್ದುಲ್ ಬಶೀರ್ ಬೊಳುವಾರ್ ರವರ ಅಧ್ಯಕ್ಷತೆಯಲ್ಲಿನಡಯಲಿದೆ. ಅಪ್ಪಟ ಪ್ರವಾದಿ ಪ್ರೇಮಿ ,ತಾಳ್ಮೆ,ಸಹನೆ,ಸರಳತೆ,ಸಜ್ಜನಿಕೆಯ ಪ್ರತಿ ರೂಪ, ಉನ್ನತ ಸ್ವಭಾವದ ಮೂಲಕ ಜನರನ್ನು ತನ್ನಡೆಗೆ ಸೆಳೆದ, ಅಲ್ ಖಾದಿಸ ವಿದ್ಯಾಸಂಸ್ಥೆಯ ಸ್ಥಾಪಕ ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಳಕಟ್ಟೆ ಯವರು ದುವಾಶೀರ್ವಚಗೈಯ್ಯಲಿದ್ದಾರೆ.
ಕಾರ್ಯಕ್ರಮದ ಉದ್ಘಾಟನೆಯನ್ನು ಕಮಾಲ್ ನಾಸರ್ ಲಂಡನ್ ನೆರವೇರಿಸಲಿದ್ದು, ಕರ್ನಾಟಕ ಮುಸ್ಲಿಂ ಜಮಾಅತ್ ಕೌನ್ಸಿಲ್(ಕೆಎಂಜೆಸಿ)ಇದರ ಪ್ರಧಾನ ಕಾರ್ಯದರ್ಶಿ ಬಹುಮಾನ್ಯ ಅಬೂಸುಫ್ಯಾನ್ ಇಬ್ರಾಹಿಮ್ ಮದನಿ ಮತ್ತು ಎಸ್ ವೈ ಎಸ್ ಬಂಟ್ವಾಳ ಝೋನ್ ಅಧ್ಯಕ್ಷರಾದ ಬಹುಮಾನ್ಯ ಹಂಝ ಮದನಿ ಮಿತ್ತೂರ್ ಮುಖ್ಯ ಪ್ರಭಾಷಣ ಗೈಯ್ಯಲಿದ್ದಾರೆ.
ಮಹಿಳೆಯರಿಗಾಗಿ ಪ್ರತ್ಯೇಕ ಸ್ಥಳಾವಕಾಶವನ್ನು ಕಲ್ಪಿಸಲಾಗಿದೆ, ಕಾರ್ಯಕ್ರಮವನ್ನು ಯಶಸ್ವಿ ಗೊಳಿಸಬೇಕೆಂದು ಅಲ್ ಖಾದಿಸ ದುಬೈ ಸಮಿತಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.















ಇನ್ನಷ್ಟು ಸುದ್ದಿಗಳು
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಉಮ್ರಾ ಯಾತ್ರಿಕರಿಗೆ ಸಿಹಿ ಸುದ್ದಿ: ಒಂದು ವರ್ಷ ಕಾಲಾವಧಿಯ ‘ಮಲ್ಟಿ ಎಂಟ್ರಿ’ ಉಮ್ರಾ ವೀಸಾ ಬಿಡುಗಡೆ
ಭಾರತದ ವಿಮಾನ ಪ್ರಯಾಣಿಕರಿಗೆ ಸಿಹಿ ಸುದ್ದಿ: ಟಿಕೆಟ್ ದರಕ್ಕೆ ಮಾಸಿಕ ಕಂತಿನ ಸೌಲಭ್ಯ
ನಿಖರವಲ್ಲದ ಸುದ್ದಿ ಹಂಚಿಕೊಂಡರೆ ಅಪಾಯ- ನಕಲಿ ಸುದ್ದಿಗಳ ವಿರುದ್ಧ ಸೌದಿಯಲ್ಲಿ ಎಚ್ಚರಿಕೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
ಅಂತಾರಾಷ್ಟ್ರೀಯ ಸರ್ವೀಸ್ಗಳಲ್ಲಿ ದರ ಕಡಿತ – ಏರ್ ಇಂಡಿಯಾ ಎಕ್ಸ್ಪ್ರೆಸ್ ಘೋಷಣೆ