ಮಂಗಳೂರು : ಪುಂಜಾಲಕಟ್ಟೆಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2012ರಲ್ಲಿ ನಡೆದ ದರೋಡೆ ಪ್ರಕರಣ ಸಂಬಂಧಿಸಿ ಇಬ್ಬರು ಆರೋಪಿಗಳನ್ನು ನ್ಯಾಯಾಲಯವು ದೋಷಮುಕ್ತಮುಕ್ತಗೊಳಿಸಿದೆ.
ಮಂಗಳೂರಿನ 6ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯವು ಆರೋಪಿಗಳಾದ ಮುಹಮ್ಮದ್ ಹುಸೈನಾರ್ ಅಲಿಯಾಸ್ ಹುಸೈನ್ ಹಾಗೂ ಇಬ್ರಾಹಿಂ ಅಲಿಯಾಸ್ ಟಿನ್ ಟಿನ್ ಮೋನು ಎಂಬವರನ್ನು ಪ್ರಕರಣದಿಂದ ದೋಷಮುಕ್ತ ಗೊಳಿಸಿದೆ.
ಪ್ರಕರಣದ ಇನ್ನಿಬ್ಬರು ಆರೋಪಿಗಳ ಪೈಕಿ ಒಬ್ಬರು ಮೃತರಾಗಿದ್ದರೆ, ಇನ್ನೊಬ್ಬರು ತಲೆಮರೆಸಿಕೊಂಡಿದ್ದಾರೆ. 2012 ಆಗಸ್ಟ್ 24ರ ಶುಕ್ರವಾರದಂದು, ಮನೆಯಲ್ಲಿ ಗಂಡಸರು ಮಸೀದಿಗೆ ಹೋದ ವೇಳೆಯಲ್ಲಿ, ಮನೆಯಲ್ಲಿದ್ದ ಮಹಿಳೆಯೊಂದಿಗೆ ಕುಡಿಯಲು ನೀರು ಬೇಕೆಂದು ಕೇಳಿದ್ದು, ನೀರು ತರಲು ಹೋದಾಗ ಹಿಂದಿನಿಂದ ಮಹಿಳೆಯ ಕೈಹಿಡಿದು ಚಾಕು ತೋರಿಸಿ, ಬೆದರಿಸಿ ಮನೆಯಲ್ಲಿದ್ದ ಎರಡುವರೆ ಲಕ್ಷದ ಮೌಲ್ಯದ ಚಿನ್ನಾಭರಣ ದರೋಡೆ ಮಾಡಲಾಗಿದೆ ಎಂಬ ಪ್ರಕರಣ ಸಂಬಂಧಿಸಿ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಲಯವು ಇಬ್ಬರನ್ನು ಪ್ರಕರಣದಿಂದ ದೋಷಮುಕ್ತ ಗೊಳಿಸಿದೆ. ವಕೀಲರಾದ ಅಬೂಬಕ್ಕರ್ ಸಿದ್ದೀಕ್ ಎಂ.ಪಿ, ಇಸ್ಮಾಯಿಲ್ ಎಸ್., ದುಗಾ ನಾಯಕ್ ಹಾಗೂ ನಈಮ್ ಶೇಖ್ ಅವರು ಮೇಲಿನ ಆರೋಪಿಗಳ ಪರವಾಗಿ ವಾದಿಸಿದ್ದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್