ಕೋಝಿಕ್ಕೋಡ್ |ಮಲೇಶಿಯನ್
ಸರ್ಕಾರದ ಅತ್ಯುನ್ನತ ಪ್ರಶಸ್ತಿಯನ್ನು ಸ್ವೀಕರಿಸಿ ಹಿಂದಿರುಗಿದ ಭಾರತದ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎ.ಪಿ.ಅಬೂಬಕರ್ ಮುಸ್ಲಿಯಾರ್ ಅವರನ್ನು ಆತ್ಮೀಯವಾಗಿ ಸ್ವಾಗತಿಸಲಾಯಿತು.
ಸಮಸ್ತ ಕೇರಳ ಜಮ್ಇಯ್ಯತುಲ್ ಉಲಮಾ ನೇತೃತ್ವದಲ್ಲಿ ಕರಿಪೂರ್ ವಿಮಾನ ನಿಲ್ದಾಣದಲ್ಲಿ ಸುನ್ನಿ ಕಾರ್ಯಕರ್ತರು
ಉಸ್ತಾದ್ ಅವರನ್ನು ಹೃತ್ಪೂರ್ವಕವಾಗಿ ಸ್ವಾಗತಿಸಿದರು. ಮಲೇಷ್ಯಾ ಸರ್ಕಾರದ ವಿಶೇಷ ಚಾರ್ಟರ್ಡ್ ವಿಮಾನದಲ್ಲಿ ಬೆಳಿಗ್ಗೆ 8.17 ಕ್ಕೆ ಕಾಂತಪುರಂ ಉಸ್ತಾದ್ ಕರಿಪೂರ್ ವಿಮಾನ ನಿಲ್ದಾಣದಲ್ಲಿ ಬಂದಿಳಿದರು. ಬೆಳಗ್ಗೆ 6 ಗಂಟೆಯಿಂದಲೇ ಕಾಂತಪುರಂ ಉಸ್ತಾದ್ ಅವರನ್ನು ಸ್ವಾಗತಿಸಲು ಅಪಾರ ಜನಸ್ತೋಮವೇ ವಿಮಾನ ನಿಲ್ದಾಣಕ್ಕೆ ಆಗಮಿಸಿತ್ತು.

ವಿಮಾನದಿಂದ ಇಳಿದು ಇಮಿಗ್ರೇಷನ್ ಪ್ರಕ್ರಿಯೆಗಳನ್ನು ಮುಗಿಸಿ ಒಂಬತ್ತು ಗಂಟೆಗೆ ವಿಮಾನ ನಿಲ್ದಾಣದಿಂದ ಹೊರಬಂದ ಅವರನ್ನು ಜನರು ತಕ್ಬೀರ್ ಧ್ವನಿಗಳೊಂದಿಗೆ ಸ್ವಾಗತಿಸಿದರು.
ಸಮಸ್ತ ಕೇರಳ ಜಮ್ಇಯ್ಯತುಲ್ ಉಲಮಾ ಅಧ್ಯಕ್ಷರಾದ ರಈಸುಲ್ ಉಲಮಾ ಇ ಸುಲೈಮಾನ್ ಮುಸ್ಲಿಯಾರ್, ಸಯ್ಯಿದ್ ಅಲಿ ಬಾಫಕಿ ತಂಙಳ್, ಸಯ್ಯಿದ್ ಇಬ್ರಾಹಿಂ ಖಲೀಲ್ ಅಲ್ ಬುಖಾರಿ ಮತ್ತು ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ ಮೊದಲಾದ ಮುಖಂಡರು ಸೇರಿ ಕಾಂತಪುರಂ ಉಸ್ತಾದರನ್ನು ವಿಮಾನ ನಿಲ್ದಾಣದಲ್ಲಿ ಬರಮಾಡಿಕೊಳ್ಳಲಾಯಿತು.

ನಂತರ ನೂರಾರು ವಾಹನಗಳ ಬೆಂಗಾವಲಿನೊಂದಿಗೆ ಕೋಝಿಕ್ಕೋಡ್ ನಗರಕ್ಕೆ ಕರೆದೊಯ್ಯಲಾಯಿತು. ಕಾಂತಪುರಂ ಉಸ್ತಾದರಿಗೆ ಇಂದು ಸಂಜೆ ಕೋಝಿಕ್ಕೋಡ್ನಲ್ಲಿ ಪೌರ ಸನ್ಮಾನವನ್ನು ಕೂಡ ಆಯೋಜಿಸುಲಾಗಿದೆ. ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಾಮಾಜಿಕ ಮತ್ತು ವೈಜ್ಞಾನಿಕ ಕ್ಷೇತ್ರಗಳಲ್ಲಿ ಅತ್ಯುತ್ತಮ ಸೇವೆ ಸಲ್ಲಿಸುವ ಧಾರ್ಮಿಕ ವಿದ್ವಾಂಸರಿಗೆ ಹಿಜ್ರಾ ವರ್ಷದ ಆರಂಭದಲ್ಲಿ ಮಲೇಷ್ಯಾ ಸರ್ಕಾರ ನೀಡುತ್ತಿರುವ ಅತ್ಯುನ್ನತ ಪ್ರಶಸ್ತಿಯನ್ನು ಕಳೆದ ದಿನ, ಮಲೇಷಿಯಾದ ರಾಜ ಅಲ್ ಸುಲ್ತಾನ್ ಅಬ್ದುಲ್ಲಾ ಸುಲ್ತಾನ್ ಅಹ್ಮದ್ ಷಾ ಅವರು ಕಾಂತಪುರಂ ಉಸ್ತಾದರಿಗೆ ಪ್ರದಾನ ಮಾಡಿದರು.
ಈ ಪ್ರಶಸ್ತಿಯು, ಜಾಗತಿಕ ಇಸ್ಲಾಮಿಕ್ ವೇದಿಕೆಗಳಲ್ಲಿ ನಿರಂತರ ಉಪಸ್ಥಿತಿಯಲ್ಲಿರುವ ಕಾಂತಪುರಂ ಅವರ ಆರು ದಶಕಗಳ ಸುದೀರ್ಘ ಸಾಮಾಜಿಕ ಕಾರ್ಯಕ್ಕೆ ಮನ್ನಣೆಯಾಗಿದೆ.
















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ