ಸೌದಿ ಅರೇಬಿಯಾ:ಇಲ್ಲಿನ ಪೂರ್ವ ಪ್ರಾಂತ್ಯದಲ್ಲಿರುವ ನಈರಿಯ್ಯಾದಲ್ಲಿ ಕಳೆದ 20 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಹೈದರಬಾದ್ ನಿವಾಸಿ ಮುಹಮ್ಮದ್ ಜಹಾಂಗೀರ್ ಶೈಖ್ ಎಂಬುವವರು ಜುಲೈ 17 ರಂದು ಹೃದಯಾಘಾತದಿಂದ ನಿಧನರಾಗಿದ್ದರು.
ಕುಟುಂಬದ ಕೋರಿಕೆ ಮೇರೆಗೆ ಮೃತದೇಹವನ್ನು ಊರಿಗೆ ಕಳುಹಿಸಲು ಹಾಗೂ ಬೇಕಾದ ವ್ಯವಸ್ಥೆಯನ್ನು ಕಲ್ಪಿಸಲು ಕೂಡಲೇ ಸ್ಪಂದಿಸಿದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸಾಂತ್ವನ ವಿಭಾಗದ ಕಾರ್ಯಕರ್ತರು, ದಾಖಲೆ ಪತ್ರ ಹಾಗು ಭಾರತೀಯ ರಾಯಭಾರಿ ಕಛೇರಿಗೆ ಸಂಬಂಧಿಸಿದಂತೆ ಇನ್ನಿತರ ವ್ಯವಸ್ಥೆಗಳನ್ನು ಸರಿಪಡಿಸಿ, ಜುಲೈ 22 ರಂದು ಮೃತದೇಹವನ್ನು ಊರಿಗೆ ಕಳಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.
ಸೌದಿ ಅರೇಬಿಯಾದಲ್ಲಿ ನಿಧನರಾಗುವ ಅನಿವಾಸಿಗಳ ಮೃತದೇಹವನ್ನು ಇಲ್ಲಿ ದಫನ ಮಾಡುವುದು ಅಥವಾ ಊರಿಗೆ ಕೊಂಡೊಯ್ಯುವುದಿದ್ದರೆ ವಲಸೆ ನೀತಿಗೆ ಸಂಬಂಧಿಸಿದ ಹಲವಾರು ದಾಖಲೆ ಪತ್ರಗಳನ್ನು ಸರಿಪಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಭಾರತೀಯ ಧೂತವಾಸ ಕೇಂದ್ರ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಪೊಲೀಸ್ ಹಾಗೂ ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಸಿಗಬೇಕಾದ ದಾಖಲೆಗಳನ್ನು ಸರಿಪಡಿಸಲು ಕೆಸಿಎಫ್ ದಮ್ಮಾಮ್ ನಾರ್ತ್ ಸೆಕ್ಟರ್ ಸಾಂತ್ವನ ನಾಯಕರಾದ ಫಾರೂಕ್ ಕಾಪು ಹಾಗೂ ದಮ್ಮಾಮ್ ಝೋನ್ ಸಾಂತ್ವನ ಇಲಾಖೆಯ ಅಧ್ಯಕ್ಷರಾದ ಬಾಷಾ ಗಂಗಾವಳಿ ಮುಂತಾದವರು ತಮ್ಮ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಇದಕ್ಕಾಗಿ ಶ್ರಮಿಸಿದರ ಫಲವಾಗಿ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಮೃತದೇಹವನ್ನು ಊರಿಗೆ ಕಳುಹಿಸಲು ಸಾಧ್ಯವಾಗಿದೆ.
















ಇನ್ನಷ್ಟು ಸುದ್ದಿಗಳು
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?