ಸೌದಿ ಅರೇಬಿಯಾ:ಇಲ್ಲಿನ ಪೂರ್ವ ಪ್ರಾಂತ್ಯದಲ್ಲಿರುವ ನಈರಿಯ್ಯಾದಲ್ಲಿ ಕಳೆದ 20 ವರ್ಷಗಳಿಂದ ಕೆಲಸ ನಿರ್ವಹಿಸುತ್ತಿದ್ದ ಹೈದರಬಾದ್ ನಿವಾಸಿ ಮುಹಮ್ಮದ್ ಜಹಾಂಗೀರ್ ಶೈಖ್ ಎಂಬುವವರು ಜುಲೈ 17 ರಂದು ಹೃದಯಾಘಾತದಿಂದ ನಿಧನರಾಗಿದ್ದರು.
ಕುಟುಂಬದ ಕೋರಿಕೆ ಮೇರೆಗೆ ಮೃತದೇಹವನ್ನು ಊರಿಗೆ ಕಳುಹಿಸಲು ಹಾಗೂ ಬೇಕಾದ ವ್ಯವಸ್ಥೆಯನ್ನು ಕಲ್ಪಿಸಲು ಕೂಡಲೇ ಸ್ಪಂದಿಸಿದ ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಸಾಂತ್ವನ ವಿಭಾಗದ ಕಾರ್ಯಕರ್ತರು, ದಾಖಲೆ ಪತ್ರ ಹಾಗು ಭಾರತೀಯ ರಾಯಭಾರಿ ಕಛೇರಿಗೆ ಸಂಬಂಧಿಸಿದಂತೆ ಇನ್ನಿತರ ವ್ಯವಸ್ಥೆಗಳನ್ನು ಸರಿಪಡಿಸಿ, ಜುಲೈ 22 ರಂದು ಮೃತದೇಹವನ್ನು ಊರಿಗೆ ಕಳಿಸಿಕೊಡುವಲ್ಲಿ ಯಶಸ್ವಿಯಾಗಿದ್ದಾರೆ.
ಸೌದಿ ಅರೇಬಿಯಾದಲ್ಲಿ ನಿಧನರಾಗುವ ಅನಿವಾಸಿಗಳ ಮೃತದೇಹವನ್ನು ಇಲ್ಲಿ ದಫನ ಮಾಡುವುದು ಅಥವಾ ಊರಿಗೆ ಕೊಂಡೊಯ್ಯುವುದಿದ್ದರೆ ವಲಸೆ ನೀತಿಗೆ ಸಂಬಂಧಿಸಿದ ಹಲವಾರು ದಾಖಲೆ ಪತ್ರಗಳನ್ನು ಸರಿಪಡಿಸಬೇಕಾದ ಅಗತ್ಯವಿದೆ. ಈ ನಿಟ್ಟಿನಲ್ಲಿ ಭಾರತೀಯ ಧೂತವಾಸ ಕೇಂದ್ರ, ಸ್ಥಳೀಯ ಆರೋಗ್ಯ ಇಲಾಖೆ, ಸೌದಿ ವಲಸೆ ಪ್ರಾಧಿಕಾರ, ಪೊಲೀಸ್ ಹಾಗೂ ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಕಡೆಗಳಿಂದ ಸಿಗಬೇಕಾದ ದಾಖಲೆಗಳನ್ನು ಸರಿಪಡಿಸಲು ಕೆಸಿಎಫ್ ದಮ್ಮಾಮ್ ನಾರ್ತ್ ಸೆಕ್ಟರ್ ಸಾಂತ್ವನ ನಾಯಕರಾದ ಫಾರೂಕ್ ಕಾಪು ಹಾಗೂ ದಮ್ಮಾಮ್ ಝೋನ್ ಸಾಂತ್ವನ ಇಲಾಖೆಯ ಅಧ್ಯಕ್ಷರಾದ ಬಾಷಾ ಗಂಗಾವಳಿ ಮುಂತಾದವರು ತಮ್ಮ ಕೆಲಸ ಕಾರ್ಯಗಳನ್ನು ಬದಿಗಿಟ್ಟು ಇದಕ್ಕಾಗಿ ಶ್ರಮಿಸಿದರ ಫಲವಾಗಿ ಎಲ್ಲಾ ದಾಖಲೆಗಳನ್ನು ಸರಿಪಡಿಸಿ ಮೃತದೇಹವನ್ನು ಊರಿಗೆ ಕಳುಹಿಸಲು ಸಾಧ್ಯವಾಗಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್