ಮಂಜನಾಡಿ: ಮಅದನುಲ್ ಉಲೂಂ ಮದ್ರಸ ಮಂಗಳಾಂತಿ ಇದರ ವಿದ್ಯಾರ್ಥಿ ಸಂಘಟನೆಯಾದ ಎಸ್. ಬಿ.ಎಸ್ ಸಮಿತಿಗೆ ನೂತನ ಪದಾಧಿಕಾರಿಗಳನ್ನು ಆರಿಸಲಾಯಿತು.
ಸಭೆಯಲ್ಲಿ ಮದ್ರಸದ ಸದರ್ ಮುಅಲ್ಲಿಮರಾದ ಮುಹಮ್ಮದ್ ಸಯೀದ್ ಸಅದಿ ಅಲ್ ಅಫ್ಲಲಿ ಸೆರ್ಕಳ ಅಧ್ಯಕ್ಷತೆ ವಹಿಸಿ ಪ್ರಾರ್ಥನೆಗೆ ನೇತೃತ್ವ ನೀಡಿದರು. ಧಾರ್ಮಿಕ -ಲೌಕಿಕ ಜ್ಞಾನವನ್ನು ಮೈಗೂಡಿಸುವ ವಿದ್ಯಾರ್ಥಿ ಸಮೂಹವು ಆಧುನಿಕತೆಯಿಂದ ಮೈಮರೆತ ಯುವ ಪೀಳಿಗೆಗೆ ಮಾದರಿಯಾಗಬೇಕೆಂದೂ, ಪವಿತ್ರ ಇಸ್ಲಾಮಿನ ಶಾಂತಿ ಸೌಹಾರ್ದತೆಯನ್ನು ತಮ್ಮ ಜೀವನದ ಮೂಲಕ ಸಮಾಜಕ್ಕೆ ತೋರಿಸಿ ಕೊಡಬೇಕೆಂದೂ ಅಧ್ಯಕ್ಷ ಭಾಷಣದಲ್ಲಿ ಸೂಚಿಸಿದರು.
ಅಧ್ಯಾಪಕರಾದ ಸಿದ್ದೀಖ್ ಅಹ್ಸನಿ ಅಸೈ ಕಾರ್ಯಕ್ರಮವನ್ನು ಉದ್ಘಾಟಿಸಿದರು. ನಿಝಾರ್ ಸಖಾಫಿ ಕಲ್ಕಟ್ಟ ಹಾಗೂ ಫಾರೂಕ್ ಹಿಮಮಿ ಕಿನ್ಯಾ ಕಾರ್ಯಕ್ರಮದಲ್ಲಿ ಶುಭಕೋರಿದರು.
ತದನಂತರ ನೂತನ ಸಮಿತಿಯನ್ನು ಆರಿಸಲಾಯಿತು. ಅಧ್ಯಕ್ಷರಾಗಿ ಸಿನಾನ್ ಉಪಾಧ್ಯಕ್ಷರಾಗಿ ಸವಾನ್ ಕಾರ್ಯದರ್ಶಿ ತಾಹಿರ್, ಜೊತೆ ಕಾರ್ಯದರ್ಶಿ ನಿಯಾಫ್ ಹಾಗೂ ಕೋಶಾಧಿಕಾರಿಯಾಗಿ ಬಶಾರತ್ ರನ್ನೂ ಕಾರ್ಯಕಾರಿ ಸದಸ್ಯರುಗಳಾಗಿ ಆದಿಲ್, ಶಹೀರ್, ಅಫ್ಲಲ್, ನಜಾಫ್, ಶಾಹಿನ್, ನಿಹಾಲ್, ಫಾಝಿಲ್, ಆಶಿಖ್ ಎಂಬಿವರನ್ನು ಆರಿಸಲಾಯಿತು. ಏಳು ತಂಡಗಳಾಗಿ ನಡೆಯುವ ಸಾಹಿತ್ಯ ಸಮಾಜಕ್ಕೆ ಸಿನಾನ್, ತಾಹಿರ್, ನಿಯಾಫ್, ಆಝಿಲ್, ವಫಾ, ನುಹಾ ಹಾಗೂ ತೌಸಿಯಾ ರನ್ನು ನಾಯಕರನ್ನಾಗಿ ನೇಮಿಸಲಾಯಿತು. ಅಧ್ಯಾಪಕರಾದ ಇರ್ಷಾದ್ ರಝ್ವಿ ಕಾರ್ಯಕ್ರಮವನ್ನು ಸ್ವಾಗತಿಸಿ ಸಿನಾನ್ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ