ರಿಯಾದ್ ಮೇ 11: (ಜನಧ್ವನಿ ವಾರ್ತೆ) ಕರ್ನಾಟಕ ಕಲ್ಚರಲ್ ಫೌಂಢೇಶನ್ ರಿಯಾದ್ ಝೋನ್ ಅಧೀನದಲ್ಲಿರುವ ಕೆ.ಸಿ.ಎಫ್. ಹರಾ ಯುನಿಟ್ ಇದರ ವಾರ್ಷಿಕ ಕೌನ್ಸಿಲ್ ದಿನಾಂಕ 11-05- 2018 ಶುಕ್ರವಾರ ಜುಮಾ ನಮಾಝಿನ ಬಳಿಕ ಮಧ್ಯಾಹ್ನ 1ಗಂಟೆಗೆ ಸರಿಯಾಗಿ ಯುನಿಟ್ ಅಧ್ಯಕ್ಷರಾದ ಇಸ್ಮಾಯಿಲ್ ಮೊಂಟೆಪದವುರವರ ನಿವಾಸದಲ್ಲಿ ನಡೆಯಿತು. ಸಭೆಯನ್ನು ಹರಾ ಯುನಿಟ್ ಜೊತೆಕಾರ್ಯದರ್ಶಿ ರಝಾಕ್ ಮುಸ್ಲಿಯಾರ್ ನಾಟೆಕಲ್ ರವರು ಉದ್ಘಾಟಿಸಿದರು. ಯುನಿಟ್ ಕಾರ್ಯದರ್ಶಿ ಸಲಾಹುದ್ದೀನ್ ಬಜ್ಪೆ 2017-18 ನೇ ಸಾಲಿನ ವರದಿ ಹಾಗೂ ಲೆಕ್ಕಪತ್ರವನ್ನು ಮಂಡಿಸಿದರು.
ಝೋನ್ ನಿಂದ ಚುಣಾವಣಾ ವೀಕ್ಷಕರಾಗಿ ಆಗಮಿಸಿದ್ದ , ಕೆ.ಸಿ.ಎಫ್. ರಿಯಾದ್ ಝೋನ್ ಪ್ರಧಾನ ಕಾರ್ಯದರ್ಶಿ ಬಶೀರ್ ತಲಪಾಡಿ , ಹಾಲಿ ಸಮಿತಿಯನ್ನು ವಿಸರ್ಜಿಸಿ, ನೂತನ ಸಮಿತಿ ರಚನೆಯ ನೇತೃತ್ವವನ್ನು ವಹಿಸಿದ್ದರು .

ಈ ಸಂಧರ್ಭದಲ್ಲಿ ಮಾತಾನಾಡಿದ ಕೆ.ಸಿ.ಎಫ್. ರಾಷ್ಟ್ರೀಯ ಸಂಘಟನಾ ವಿಭಾಗದ ಚೇರ್ಮಾನ್ ಸಿಧ್ಧೀಖ್ ಸಖಾಫಿ ಪೆರುವಾಯಿಯವರು ಕಾರ್ಯಕರ್ತರ ಕಾರ್ಯಚಟುವಟಿಕೆ ಹೇಗಿರಬೇಕು ಹಾಗೂ ಸಂಘಟನಾ ಬಲವರ್ಧನೆ ಯಾವ ರೀತಿಯಲ್ಲಾಗಬೇಕೆಂಬುದರ ಕುರಿತು ಸಮಗ್ರವಾಗಿ ವಿವರಿಸಿದರು.

ವೇದಿಕೆಯಲ್ಲಿ ಕೆ.ಸಿ.ಎಫ್. ಸೌದಿ ರಾಷ್ಟೀಯ ಸಂಘಟನಾ ವಿಭಾಗದ ಕನ್ವೀನರ್ ರಮೀಝ್ ಕುಳಾಯಿ, ರಿಯಾದ್ ಝೋನ್ ಸಂಘಟನಾ ವಿಭಾಗದ ಚೆರ್ಮಾನ್ ರಶೀದ್ ಮದನಿ ಉರುವಾಲ್’ಪದವು, ಝೋನ್ ಶಿಕ್ಷಣ ವಿಭಾಗದ ಕನ್ವೀನರ್ ಹಸೈನಾರ್ ಕಾಟಿಪಳ್ಳ, ಝೋನ್ ಸಾಂತ್ವನ ವಿಭಾಗದ ಕನ್ವೀನರ್ ಇಸ್ಮಾಯಿಲ್ ಜೋಗಿಬೆಟ್ಟು, ಝೋನ್ ಅಡ್ಮಿನ್ ವಿಭಾಗದ ಕನ್ವೀನರ್ ಶಮೀರ್ ಜೆಪ್ಪು, ವಲಯ್ಯ ಸೆಕ್ಟರ್ ನಾಯಕ ರಝಾಕ್ ಬಾರ್ಯ ಉಪಸ್ಥಿತಿಯಿದ್ದರು.
ಸಲಾಹುದ್ದೀನ್ ಬಜ್ಪೆ ಸ್ವಾಗತಿಸಿದರೆ, ಇಸ್ಮಾಯಿಲ್ ಮೊಂಟೆಪದವು ವಂದಿಸಿದರು.
ರಶೀದ್ ಮದನಿ ಉರುವಾಲುಪದವು ಕಾರ್ಯಕ್ರಮ ನಿರೂಪಿಸಿದರು.
ನೂತನ ಸಮಿತಿಯ ವಿವರ:
ಅಧ್ಯಕ್ಷರು – ಅಬೂಬಕ್ಕರ್ ಸಾಲೆತ್ತೂರು
ಉಪಾಧ್ಯಕ್ಷರು – ರಝಾಕ್ ಮದನಿ ಕಳಂಜಿಬೈಲ್, ಖಾದರ್ ಸಾಲೆತ್ತೂರು
ಪ್ರಧಾನ ಕಾರ್ಯದರ್ಶಿ – ಇಸ್ಮಾಯಿಲ್ ಮೊಂಟೆಪದವು
ಜೊತೆಕಾರ್ಯದರ್ಶಿ – ರಝಾಕ್ ಮುಸ್ಲಿಯಾರ್ ನಾಟೆಕಲ್, ಶಿಹಾಬ್ ಹಸನ್ ಕಿನ್ಯ
ಕೋಶಾಧಿಕಾರಿ – ಸಾಲಿಂ ಕುಂಜತ್ತೂರು
ಸದಸ್ಯರು:
ನಿಝಾಂ ಸಾಗರ್,ಸಲಾಹುದ್ದೀನ್ ಬಜ್ಪೆ,ಹಸನ್ ಭಾವ ಕಾಟಿಪಳ್ಳ,ಹಮೀದ್ ಮನ್ನಿಪ್ಪಾಡಿಝೋನ್ ಕೌನ್ಸಿಲರ್:
ಅಬೂಬಕ್ಕರ್ ಸಾಲೆತ್ತೂರು,ಇಸ್ಮಾಯಿಲ್ ಮೊಂಟೆಪದವು,ಸಾಲಿಂ ಕುಂಜತ್ತೂರು,ನಿಝಾಂ ಸಾಗರ್
ಖಾದರ್ ಸಾಲೆತ್ತೂರು,ರಝಾಕ್ ಮುಸ್ಲಿಯಾರ್ ನಾಟೆಕಲ್.















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು