ಮಂಗಳೂರು: ಮತೀಯ ಗಲಭೆಳು ಮತ್ತು ಕೋಮು ಉದ್ವಿಗ್ನತೆ ಸೃಷ್ಟಿಯಿಂದಲೆ ಅಧಿಕಾರವನ್ನು ನಿಯಂತ್ರಣದಲ್ಲಿಡುವ ವೈದಿಕ ಯೋಜಿತ ಪದ್ಧತಿಯ ಅನುಷ್ಠಾನ ಎಂಬಂತೆ, ಈ ಹಿಂದಿನ ಗುಜರಾತ್, ಉತ್ತರ ಪ್ರದೇಶ, ಮುಜಾಫರ್ ನಗರ, ಕರ್ನಾಟಕದ ಕರಾವಳಿ ಜಿಲ್ಲೆಗಳು, ಮಣಿಪುರ ಮತ್ತು ಪ್ರಸ್ತುತ ಹರ್ಯಾಣದ ಗುರುಗ್ರಾಮ ಗಲಭೆಗಳು ಸಂಘ ಪರವಾರದ ಯೋಜನೆಯ ಮುಂದುವರಿದ ಭಾಗವಾಗಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಹೇಳಿದ್ದಾರೆ.
ಹರ್ಯಾಣದಲ್ಲಿ ಈಗಾಗಲೇ ಮುಕ್ತವಾಗಿ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗುವ ರೀತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಮಾಝ್ ನಿರ್ವಹಣೆಗೆ ವಿರೋಧ ವ್ಯಕ್ತವಾಗಿತ್ತು. ಆದರೆ ಗುರುಗ್ರಾಮದಲ್ಲಿ ಅಸ್ತಿತ್ವದಲ್ಲಿರುವ ಏಕೈಕ ಮಸೀದಿಯ ಧಾರ್ಮಿಕ ಗುರುವೊಬ್ಬರನ್ನು ಸಂಘೀ ಪ್ರೇರಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ನಡೆಸಿದ್ದು ಮತ್ತು ಮಸೀದಿಗೆ ಬೆಂಕಿ ಹಚ್ಚಿ ನಾಶಪಡಿಸಿದ ಕೃತ್ಯ ಧಾರ್ಮಿಕ ಸ್ವಾತಂತ್ರ್ಯದ ಹರಣವಾಗಿದೆ.
ಈ ಕೃತ್ಯ ಮಣಿಪುರದಲ್ಲಿ ನಡೆದ ಜನಾಂಗೀಯ ಹತ್ಯೆಯ ಮುಂದುವರಿದ ಭಾಗವಾಗಿದೆ. ಪರಿಸ್ಥಿತಿಯ ಮಾಹಿತಿ ಹೊರಗೆ ಲಭ್ಯವಾಗದೇ ಇರುವಂತೆ ಇಂಟರ್ನೆಟ್ ಸ್ಥಗಿತ ಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಪ್ರಾಯೋಜತ್ವದಲ್ಲಿಯೆ ಸಂಘ ಪರಿವಾರವನ್ನು ಗಲಭೆ ಉತ್ತೇಜಿಸಲು ಪ್ರಯತ್ನಿಸುವಂತಿದೆ ಎಂದು ಕೆ.ಅಶ್ರಫ್(ಮಾಜಿ ಮೇಯರ್) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್