ಮಂಗಳೂರು: ಮತೀಯ ಗಲಭೆಳು ಮತ್ತು ಕೋಮು ಉದ್ವಿಗ್ನತೆ ಸೃಷ್ಟಿಯಿಂದಲೆ ಅಧಿಕಾರವನ್ನು ನಿಯಂತ್ರಣದಲ್ಲಿಡುವ ವೈದಿಕ ಯೋಜಿತ ಪದ್ಧತಿಯ ಅನುಷ್ಠಾನ ಎಂಬಂತೆ, ಈ ಹಿಂದಿನ ಗುಜರಾತ್, ಉತ್ತರ ಪ್ರದೇಶ, ಮುಜಾಫರ್ ನಗರ, ಕರ್ನಾಟಕದ ಕರಾವಳಿ ಜಿಲ್ಲೆಗಳು, ಮಣಿಪುರ ಮತ್ತು ಪ್ರಸ್ತುತ ಹರ್ಯಾಣದ ಗುರುಗ್ರಾಮ ಗಲಭೆಗಳು ಸಂಘ ಪರವಾರದ ಯೋಜನೆಯ ಮುಂದುವರಿದ ಭಾಗವಾಗಿದೆ ಎಂದು ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಹೇಳಿದ್ದಾರೆ.
ಹರ್ಯಾಣದಲ್ಲಿ ಈಗಾಗಲೇ ಮುಕ್ತವಾಗಿ ಧಾರ್ಮಿಕ ಆಚರಣೆಗಳಿಗೆ ಅಡ್ಡಿಯಾಗುವ ರೀತಿಯಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ನಮಾಝ್ ನಿರ್ವಹಣೆಗೆ ವಿರೋಧ ವ್ಯಕ್ತವಾಗಿತ್ತು. ಆದರೆ ಗುರುಗ್ರಾಮದಲ್ಲಿ ಅಸ್ತಿತ್ವದಲ್ಲಿರುವ ಏಕೈಕ ಮಸೀದಿಯ ಧಾರ್ಮಿಕ ಗುರುವೊಬ್ಬರನ್ನು ಸಂಘೀ ಪ್ರೇರಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ನಡೆಸಿದ್ದು ಮತ್ತು ಮಸೀದಿಗೆ ಬೆಂಕಿ ಹಚ್ಚಿ ನಾಶಪಡಿಸಿದ ಕೃತ್ಯ ಧಾರ್ಮಿಕ ಸ್ವಾತಂತ್ರ್ಯದ ಹರಣವಾಗಿದೆ.
ಈ ಕೃತ್ಯ ಮಣಿಪುರದಲ್ಲಿ ನಡೆದ ಜನಾಂಗೀಯ ಹತ್ಯೆಯ ಮುಂದುವರಿದ ಭಾಗವಾಗಿದೆ. ಪರಿಸ್ಥಿತಿಯ ಮಾಹಿತಿ ಹೊರಗೆ ಲಭ್ಯವಾಗದೇ ಇರುವಂತೆ ಇಂಟರ್ನೆಟ್ ಸ್ಥಗಿತ ಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಪ್ರಾಯೋಜತ್ವದಲ್ಲಿಯೆ ಸಂಘ ಪರಿವಾರವನ್ನು ಗಲಭೆ ಉತ್ತೇಜಿಸಲು ಪ್ರಯತ್ನಿಸುವಂತಿದೆ ಎಂದು ಕೆ.ಅಶ್ರಫ್(ಮಾಜಿ ಮೇಯರ್) ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ