ಮಂಗಳೂರು: ಉಡುಪಿಯ ಖಾಸಗಿ ಕಾಲೇಜಿನಲ್ಲಿನ ಮೊಬೈಲ್ ಚಿತ್ರೀಕರಣ ಪ್ರಕರಣವು ಈಗಾಗಲೇ ಒಂದು ತಾರ್ಕಿಕ ಅಂತ್ಯ ಕಂಡಿದ್ದು, ಸಂಘ ಪರಿವಾರವು ಮುಗಿದು ಹೋದ ಈ ಘಟನೆಗೆ, ಮತೀಯ ವಿದ್ವೇಷ ಸೃಷ್ಟಿಸಿ ಕೋಮು ಗಲಭೆ ಪ್ರಚೋದಿಸಲು ಪ್ರಯತ್ನಿಸುತ್ತಿದೆ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಆರೋಪಿಸಿದ್ದಾರೆ.
ಚುನಾವಣೆಯಲ್ಲಿ ಪರಾಜಿತಗೊಂಡ ಸಂಘ ಪರಿವಾರ ಪ್ರಸ್ತುತ ಇಂತಹ ನಗಣ್ಯ ಘಟನೆಯನ್ನು ಉದ್ದಕ್ಕೆ ಎಳೆದು ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದೆ. ಪ್ರಕರಣವನ್ನು ಕೋಮೀಕರಣ ಗೊಳಿಸಲು ವೈದಿಕ ವರ್ಗವು ಶತಾಯ ಗತಾಯ ಶ್ರಮಿಸುತ್ತಿದ್ದು, ಉಡುಪಿಯಲ್ಲಿ ಯಷ್ಪಾಲ್ ಮತ್ತು ದ.ಕ.ಜಿಲ್ಲೆಯಲ್ಲಿ ಶರಣ್ ರನ್ನು ಮುಸ್ಲಿಮರ ವಿರುದ್ಧ ಛೂ ಬಿಡುತ್ತಿದ್ದಾರೆ.
ಮತೀಯ ಅಲ್ಪ ಸಂಖ್ಯಾತರ ವಿರುದ್ಧ ಕೋಮು ಗಲಭೆಗಳನ್ನು ಪ್ರಮುಖ ಅಸ್ತ್ರವಾಗಿ ಬಳಸುತ್ತಿರುವ ವೈದಿಕ ವರ್ಗ, ಹಿಂದುಳಿದ ವರ್ಗದ ಕೋಲು ನಾಯಕರನ್ನು ಸ್ಥಳೀಯವಾಗಿ ಮುಸ್ಲಿಮರ ಮತ್ತು ಕ್ರೈಸ್ತರ ವಿರುದ್ಧ ಬಳಕೆ ಮಾಡಿ ಫಸಲು ಕೊಯ್ಯುವ ಷಡ್ಯಂತ್ರ ರೂಪಿಸಿದ್ದಾರೆ.
ಮತೀಯ ವಿದ್ವೇಷ ಭಾಷಣ ಮಾಡುವ ಇಂತಹ ಕೋಲು ನಾಯಕರ ವಿರುದ್ಧ ಪೊಲೀಸರು ಮತೀಯ ನಿಂದನೆ ಪ್ರಕರಣ ದಾಖಲಿಸಿ ಬಂಧಿಸಬೇಕಿದೆ ಎಂದು ಕೆ.ಅಶ್ರಫ್ (ಮಾಜಿ ಮೇಯರ್) ಅಧ್ಯಕ್ಷರು. ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ