ಮಂಗಳೂರು: ಉಡುಪಿಯ ಖಾಸಗಿ ಕಾಲೇಜಿನಲ್ಲಿನ ಮೊಬೈಲ್ ಚಿತ್ರೀಕರಣ ಪ್ರಕರಣವು ಈಗಾಗಲೇ ಒಂದು ತಾರ್ಕಿಕ ಅಂತ್ಯ ಕಂಡಿದ್ದು, ಸಂಘ ಪರಿವಾರವು ಮುಗಿದು ಹೋದ ಈ ಘಟನೆಗೆ, ಮತೀಯ ವಿದ್ವೇಷ ಸೃಷ್ಟಿಸಿ ಕೋಮು ಗಲಭೆ ಪ್ರಚೋದಿಸಲು ಪ್ರಯತ್ನಿಸುತ್ತಿದೆ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ಆರೋಪಿಸಿದ್ದಾರೆ.
ಚುನಾವಣೆಯಲ್ಲಿ ಪರಾಜಿತಗೊಂಡ ಸಂಘ ಪರಿವಾರ ಪ್ರಸ್ತುತ ಇಂತಹ ನಗಣ್ಯ ಘಟನೆಯನ್ನು ಉದ್ದಕ್ಕೆ ಎಳೆದು ಮೈಲೇಜ್ ಪಡೆಯಲು ಪ್ರಯತ್ನಿಸುತ್ತಿದೆ. ಪ್ರಕರಣವನ್ನು ಕೋಮೀಕರಣ ಗೊಳಿಸಲು ವೈದಿಕ ವರ್ಗವು ಶತಾಯ ಗತಾಯ ಶ್ರಮಿಸುತ್ತಿದ್ದು, ಉಡುಪಿಯಲ್ಲಿ ಯಷ್ಪಾಲ್ ಮತ್ತು ದ.ಕ.ಜಿಲ್ಲೆಯಲ್ಲಿ ಶರಣ್ ರನ್ನು ಮುಸ್ಲಿಮರ ವಿರುದ್ಧ ಛೂ ಬಿಡುತ್ತಿದ್ದಾರೆ.
ಮತೀಯ ಅಲ್ಪ ಸಂಖ್ಯಾತರ ವಿರುದ್ಧ ಕೋಮು ಗಲಭೆಗಳನ್ನು ಪ್ರಮುಖ ಅಸ್ತ್ರವಾಗಿ ಬಳಸುತ್ತಿರುವ ವೈದಿಕ ವರ್ಗ, ಹಿಂದುಳಿದ ವರ್ಗದ ಕೋಲು ನಾಯಕರನ್ನು ಸ್ಥಳೀಯವಾಗಿ ಮುಸ್ಲಿಮರ ಮತ್ತು ಕ್ರೈಸ್ತರ ವಿರುದ್ಧ ಬಳಕೆ ಮಾಡಿ ಫಸಲು ಕೊಯ್ಯುವ ಷಡ್ಯಂತ್ರ ರೂಪಿಸಿದ್ದಾರೆ.
ಮತೀಯ ವಿದ್ವೇಷ ಭಾಷಣ ಮಾಡುವ ಇಂತಹ ಕೋಲು ನಾಯಕರ ವಿರುದ್ಧ ಪೊಲೀಸರು ಮತೀಯ ನಿಂದನೆ ಪ್ರಕರಣ ದಾಖಲಿಸಿ ಬಂಧಿಸಬೇಕಿದೆ ಎಂದು ಕೆ.ಅಶ್ರಫ್ (ಮಾಜಿ ಮೇಯರ್) ಅಧ್ಯಕ್ಷರು. ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಪ್ರಕಟಣೆ ಮೂಲಕ ಒತ್ತಾಯಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್