ಬಂಟ್ವಾಳ: ಇಲ್ಲಿನ ಮಂಚಿ, ಕೊಳ್ನಾಡು ಸರಕಾರಿ ಪ್ರೌಢ ಶಾಲೆಯಲ್ಲಿ 76ನೇ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ವಿದ್ಯಾರ್ಥಿನಿಯ ಮೂಲಕ ಸಾವರ್ಕರ್ ಗೆ ಜೈಕಾರ ಕೂಗಿಸಿದ್ದು ವಿವಾದವೆಬ್ಬಿಸಿದೆ.
ಶಿಕ್ಷಣ ಸಚಿವರು ಮತ್ತು ಸಚಿವ ಪ್ರಿಯಾಂಕ್ ಖರ್ಗೆ ಅವರು ಸಾವರ್ಕರ್ ಪಠ್ಯವನ್ನು ಕಿತ್ತು ಬಿಸಾಕಿದ್ದೇವೆ ಎಂದು ಹೇಳಿದ್ದು, ಮತ್ತೆ ಸರ್ಕಾರಿ ಶಾಲೆಯಲ್ಲಿ ಸಾವರ್ಕರ್ ಗೆ ಜೈಕಾರ ಕೂಗಿಸುವ ಅಗತ್ಯವೇನಿತ್ತು ಎಂದು ವಿದ್ಯಾರ್ಥಿಗಳ ಪೋಷಕರು ಪ್ರಶ್ನಿಸಿದ್ದಾರೆ.
ಶಾಲೆಯ ಶಿಕ್ಷಕಿಯೋರ್ವರು ವಿದ್ಯಾರ್ಥಿನಿಯ ಮೂಲಕ ಹೇಡಿ ಸಾವರ್ಕರ್ ಗೆ ಜೈಕಾರ ಕೂಗಿಸಿದ್ದಾರೆ. ವಿದ್ಯಾರ್ಥಿನಿಯ ಹೆತ್ತವರು ಈ ಬಗ್ಗೆ ವಿಚಾರಿಸಲು ತೆರಳಿದಾಗ ಅಲ್ಲಿನ ಮುಖ್ಯ ಉಪಾದ್ಯಾಯಿನಿ ಗೈರು ಹಾಜರಾಗಿದ್ದು, ಇತರ ಶಿಕ್ಷಕಿಯರ ಬಳಿ ವಿಚಾರಿಸಿದಾಗ ಹಾರಿಕೆಯ ಉತ್ತರ ಲಭಿಸಿದೆ ಎಂದು ಪೋಷಕರು ಆರೋಪಿಸಿದ್ದಾರೆ.
ಘಟನೆ ನಡೆದ ದಿನದಲ್ಲೇ ಬಂಟ್ವಾಳ ಕ್ಷೇತ್ರ ಶಿಕ್ಷಣ ಇಲಾಖಾ ಅಧಿಕಾರಿಗೆ ಟೆಲಿಫೋನ್ ಮೂಲಕ ಮಾಹಿತಿ ನೀಡಲಾಗಿದ್ದು, ಅವರು ಸ್ಥಳದಲ್ಲಿ ಇಲ್ಲ ಸ್ವಲ್ಪ ಹೊರಗಡೆ ಇದ್ದೇನೆ ಆಮೇಲೆ ವಿಚಾರಿಸುವೆ ಎಂಬ ಅಸಡ್ಡೆಯ ಉತ್ತರ ನೀಡಿದ್ದಾರೆ.
ರಾಜ್ಯಾದ್ಯಂತ ಸಾಮಾಜಿಕ ಜಾಲತಾಣಗಳಲ್ಲಿ ಬ್ರಿಟೀಷರ ಬೂಟ್ ನೆಕ್ಕಿದ ಹೇಡಿ ಸಾವರ್ಕರ್ ಗೆ ಜೈ ಕೂಗಿದ ವಿಡಿಯೋ ಭಾರೀ ವೈರಲ್ ಆಗಿದ್ದರೂ ಕೂಡ ಈವರೆಗೆ ಸಂಬಂಧಪಟ್ಟ ಇಲಾಖೆ ಯಾವುದೇ ಕ್ರಮ ಕೈಗೊಳ್ಳದಿರುವುದು ವಿಪರ್ಯಾಸ.
ಇಷ್ಟೇಲ್ಲಾ ವಿದ್ಯಮಾನಗಳು ನಡೆದರೂ ಕೂಡ ಸರಕಾರಿ ಪ್ರೌಢ ಶಾಲೆಯ ಮುಖ್ಯ ಶಿಕ್ಷಕಿ ಏನೂ ನಡೆದೇ ಇಲ್ಲ ಎಂಬಂತೆ, ಸುರಿಬೈಲು ಶಾಲೆಯಲ್ಲಿ ನಡೆಯುವ ಹೈಸ್ಕೂಲ್ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸಿದ್ದು ಅಚ್ಚರಿ ಮೂಡಿಸಿದೆ!
ಸದ್ರಿ ಶಾಲೆಯ ವಿದ್ಯಾರ್ಥಿಗಳ ಪೋಷಕರ ಪರವಾಗಿ ಕೆಲವರು ಸ್ಥಳೀಯ ಗ್ರಾಮ ಪಂಚಾಯತ್ ಅಧ್ಯಕ್ಷರ ಬಳಿ ಮೌಖಿಕ ಮನವಿ ನೀಡಿದಾಗ, ಅವರು ಪಂಚಾಯತ್ ಪಿಡಿಒ ಅವರಿಗೆ ಮನವಿ ನೀಡಿ ಎಂದು ಹಾಸ್ಯಾಸ್ಪದ ಹೇಳಿಕೆ ನೀಡಿರುವುದು ಗಮನಕ್ಕೆ ಬಂದಿದೆ.
ಒಟ್ಟಿನಲ್ಲಿ ಪ್ರಕರಣದ ಹಿಂದೆ ಶಿಕ್ಷಣದ ಕೇಸರೀಕರಣ ಷಡ್ಯಂತ್ರ ಇನ್ನೂ ಜೀವಂತವಿರುವುದಾಗಿ ಕಂಡು ಬರುತ್ತಿದೆ. ಸಂಬಂಧಪಟ್ಟವರು ಎಚ್ಚೆತ್ತುಕೊಂಡು, ಪ್ರಕರಣದ ರುವಾರಿಯಾಗಿರುವ ಶಿಕ್ಷಕಿಯನ್ನು ಅಮಾನತು ಗೊಳಿಸುವಂತೆ ಸರಕಾರಿ ಪ್ರೌಢ ಶಾಲೆ ಮಂಚಿ ಇಲ್ಲಿನ ವಿದ್ಯಾರ್ಥಿಗಳ ಪೋಷಕರು ಆಗ್ರಹಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ
‘ಮಾದರಿ ಮದುವೆ ಅಭಿಯಾನ’ ಸಮಾರೋಪ ಸಮಾರಂಭ – ಎಸ್ವೈಎಸ್ ಬಂಟ್ವಾಳ ಝೋನ್ ಯಶಸ್ವಿಗೆ ಕರೆ