ಸುಂಟಿಕೊಪ್ಪ : SSF ಕೊಡಗು ಜಿಲ್ಲಾ ಸಮಿತಿ ವತಿಯಿಂದ 77-ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸುಂಟಿಕೊಪ್ಪ ಪಟ್ಟಣದಲ್ಲಿ ಬ್ರಹತ್ ಆಝಾದಿ ರ್ಯಾಲಿ ನಡೆಸಲಾಯಿತು.
ಕೂರ್ಗ್ ಜಂಇಯ್ಯತುಲ್ ಉಲಮಾ ಅಧ್ಯಕ್ಷರಾದ ಸಯ್ಯದ್ ಶಿಹಾಬುದ್ದೀನ್ ಕಿಲ್ಲೂರು ತಂಙ್ಙಳ್ ರವರು ಕಾರ್ಯಕ್ರಮ ಉದ್ಘಾಟಿಸಿದರು. ಮುಖ್ಯ ಭಾಷಣಕಾರರಾಗಿ SYS ರಾಜ್ಯ ನಾಯಕರಾದ ಅಹ್ಮದ್ ಶರೀಫ್ ಸಖಾಫಿ ಕಿಲ್ಲೂರು ರವರು ಭಾರತದಲ್ಲಿರುವ ಭಾವೈಕ್ಯತೆಯ ಕುರಿತು ಆಳವಾಗಿ ವಿವರಿಸಿ ಸೆಪ್ಟೆಂಬರ್ 10ರಂದು ಬೆಂಗಳೂರಿನಲ್ಲಿ ನಡೆಯುವ SSF ಗೋಲ್ಡನ್ ಫಿಫ್ಟಿ ಮಹಾ ಸಮ್ಮೇಳನವನ್ನು ಯಶಸ್ವಿಗೊಳಿಸಲು ಕರೆ ನೀಡಿದರು.

ಮುಖ್ಯ ಅತಿಥಿಗಳಾಗಿ ಆಗಮಿಸಿದ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾll ಮಂತರ್ ಗೌಡ ಕಾರ್ಯಕ್ರಮಕ್ಕೆ ಶುಭಹಾರೈಸಿದರು.
ಕಾಂಗ್ರೆಸ್ ನಾಯಕರಾದ ವಿ.ಪಿ ಶಶಿದರ್ ಹಾಗೂ ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಕಾರ್ಯದರ್ಶಿ ಲತೀಫ್ ಸುಂಟಿಕೊಪ್ಪ ಮಾತನಾಡಿದರು.
ಜಿಲ್ಲಾಧ್ಯಕ್ಷರಾದ ಝುಬೈರ್ ಸಅದಿ ಉಸ್ತಾದರ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಜಂಇಯ್ಯತುಲ್ ಉಲಮಾ ಪ್ರಧಾನ ಕಾರ್ಯದರ್ಶಿ ಅಹ್ಸನಿ ಉಸ್ತಾದ್,SYS ರಾಜ್ಯಾದ್ಯಕ್ಷರಾದ ಹಫೀಲ್ ಸಅದಿ, ಮಾಜಿ ರಾಜ್ಯಾಧ್ಯಕ್ಷರಾದ ಇಸ್ಮಾಯಿಲ್ ಸಖಾಫಿ ಕರ್ನಾಟಕ ಮುಸ್ಲಿಂ ಜಮಾಅತ್ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಹಾಜಿ, SJM ಜಿಲ್ಲಾಧ್ಯಕ್ಷರಾದ ಮುಸ್ತಫಾ ಸಖಾಫಿ, ಪ್ರಧಾನ ಕಾರ್ಯದರ್ಶಿ ಅಶ್ರಫ್ ಸಖಾಫಿ, SYS ಜಿಲ್ಲಾಧ್ಯಕ್ಷರಾದ ಹಮೀದ್ ಮುಸ್ಲಿಯಾರ್ ಪ್ರಧಾನ ಕಾರ್ಯದರ್ಶಿ ಅಹ್ಮದ್ ಮದನಿ SSF ರಾಷ್ಟ್ರೀಯ ಸಮಿತಿ ಕಾರ್ಯದರ್ಶಿ ಯಾಕೂಬ್ ಮಾಷ್ಟರ್, ಶರೀಫ್ ಮಾಷ್ಟರ್ ಕೊಡಗು ಮಾಜಿ ಜಿಲ್ಲಾದ್ಯಕ್ಷರಾದ ಶಾಫಿ ಸಅದಿ ಉಪಸ್ಥಿತರಿದ್ದರು.
ಗದ್ದೇಹಳ ಸರ್ಕಳ್ ನಿಂದ ಪ್ರಾರಂಭಗೊಂಡ ಬೃಹತ್ ಆಝಾದಿ ಸಂದೇಶ ಜಾಥಾ ಸುಂಟಿಕೊಪ್ಪ ಪಟ್ಟಣದ ವಾಹನ ಚಾಲಕರ ಹಾಗು ಮಾಲಿಕರ ಸಂಘ ಸಂಘದ ಸಾರ್ವಜನಿಕ ವೇದಿಕೆಯಲ್ಲಿ ಸಮಾರೋಪ ಸಮಾರಂಭ ನಡೆಯಿತು. ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜುನೈದ್ ಅಮ್ಮತ್ತಿ ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಉಮ್ರಾ ಯಾತ್ರೆಗೆ ತೆರಳಿದ ನಿಟ್ಟೆ ಅಬ್ದುರ್ರಝ್ಝಾಖ್ ಮದನಿ: ಮದ್ರಸ ವಿದ್ಯಾರ್ಥಿಗಳಿಂದ ಬೀಳ್ಕೊಡುಗೆ
ನಾಳೆ ಕುದುಂಬ್ಲಾಡಿಯಲ್ಲಿ ಮರ್ಹಬಾ ಯಾ ರಬೀಅ್, ತ್ರೈಮಾಸಿಕ ಜಲಾಲಿಯ್ಯಾ ಮಜ್ಲಿಸ್ ಹಾಗೂ ಅನುಸ್ಮರಣಾ ಸಂಗಮ
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ