ಮಕ್ಕಾ: ಪವಿತ್ರ ಉಮ್ರಾ ಕರ್ಮ ನಿರ್ವಹಿಸಲು ಉಪ್ಪಳ ಸಿ.ಯಂ ಟ್ರಾವೆಲ್ಸ್ ಮೂಲಕ ಆಗಮಿಸಿದ ಮಂಗಳೂರು ಅಡ್ಯಾರ್ ಕಣ್ಣೂರು ಸಮೀಪದ ಮನಾಲ ನಿವಾಸಿ ಹುಸೈನ್ ರವರು ದಿನಾಂಕ 19/08/2023 ರಂದು ಮಕ್ಕಾದಲ್ಲಿ ನಿಧನ ಹೊಂದಿದ್ದರು.
ವಿಷಯ ತಿಳಿದು ಕಾರ್ಯಪ್ರವೃತರಾದ ಕೆಸಿಎಫ್ ಜಿದ್ದಾ ಝೋನ್ ಸಾಂತ್ವನ ಇಲಾಖೆ ಅಧ್ಯಕ್ಷರು ಹಾಗೂ ಮಕ್ಕಾ ಸೆಕ್ಟರ್ ನಾಯಕರಾದ ಮೂಸಾ ಹಾಜಿ ಕಿನ್ಯ ಮತ್ತು ಕೆಸಿಎಫ್ ಮದೀನತುಲ್ ಮುನವ್ವರ ಝೋನ್ ಸಾಂತ್ವನ ಕಾರ್ಯದರ್ಶಿ ಅಬ್ದುಲ್ ರಝ್ಝಾಖ್ ಉಳ್ಳಾಲರವರು ಮೃತರ ಅಂತ್ಯಕ್ರಿಯೆಗೆ ಬೇಕಾದ ದಾಖಲೆ ಪತ್ರಗಳು, ಭಾರತೀಯ ರಾಯಭಾರಿ ಕಚೇರಿಗೆ ಕಡತಗಳು ಹಾಗೂ ಇನ್ನಿತರ ವ್ಯವಸ್ಥೆಯನ್ನು ತ್ವರಿತ ಗತಿಯಲ್ಲಿ ಸಿದ್ಧಪಡಿಸಲು ಪ್ರಮುಖ ಪಾತ್ರ ವಹಿಸಿದ್ದರು.
ದಫನ ವಿಧಿ ವಿಧಾನಗಳಿಗೆ CM ಟ್ರಾವೆಲ್ಸ್ ಅಮೀರ್ ಜಬ್ಬಾರ್ ಸಖಾಫಿ ಪಾತೂರು ಉಸ್ತಾದರು ನೇತೃತ್ವ ನೀಡಿದರು. ಮಯ್ಯಿತ್ ದಫನ ಕಾರ್ಯದಲ್ಲಿ ಮೃತರ ಇಬ್ಬರು ಮಕ್ಕಳು ಹಾಗೂ ಕೆಸಿಎಫ್ ಮಕ್ಕತುಲ್ ಮುಕರ್ರಮಃ ಸೆಕ್ಟರ್ ಪ್ರಧಾನ ಕಾರ್ಯದರ್ಶಿ ಹನೀಫ್ ಕೋಳ್ಯೂರು, ಇಹ್ಸಾನ್ ಇಲಾಖೆ ಅಧ್ಯಕ್ಷರು ಅಬ್ದುಲ್ ಲತೀಫ್ ನೆಲ್ಯಾಡಿ ಮೊದಲಾದವರು ಪಾಲ್ಗೊಂಡಿದ್ದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ