ಬೆಳ್ತಂಗಡಿ: SჄS 30 ನೇ ವರ್ಷಾಚರಣೆ ಪ್ರಯುಕ್ತ ಕಾರ್ಮಿಕರ ಸಂಗಮ ಹಾಗೂ SSF ಗೋಲ್ಡನ್ ಫಿಫ್ಟಿ ಪ್ರಚಾರಾರ್ಥ ಡ್ರೈವರ್ಸ್ ಮೀಟ್ ಕಾರ್ಯಕ್ರಮವು ಆಗಸ್ಟ್ 27 ರಂದು ಉಜಿರೆಯ ಮಲ್ಜಅ್ ವಿದ್ಯಾಸಂಸ್ಥೆ ಯ ಸಭಾಂಗಣದಲ್ಲಿ ನಡೆಯಿತು.

ಪ್ರಸ್ತುತ ಕಾರ್ಯಕ್ರಮದಲ್ಲಿ 200 ಕ್ಕೂ ಅಧಿಕ ಕಾರ್ಮಿಕರು ಹಾಗೂ ಡ್ರೈವರ್ಸ್ ಗಳು ಭಾಗವಹಿಸಿದ್ದರು. ಕರ್ನಾಟಕ ರಾಜ್ಯ ಸುನ್ನೀ ಯುವಜನ ಸಂಘ ಇದರ ರಾಜ್ಯ ಸದಸ್ಯರೂ ಜಿಲ್ಲಾ ಕಾರ್ಯದರ್ಶಿಯೂ ಆದ ಅಶ್ರಫ್ ಸಖಾಫಿ ಮಾಡಾವು ವಿಷಯ ಮಂಡಿಸಿದರು. ಅನುಗ್ರಹ ಸಮೂಹ ಸಂಸ್ಥೆಯ ವಕ್ತಾರರಾದ ತ್ವಲ್ಹತ್ M.G ಸವಣಾಲು ಕಾರ್ಮಿಕರಿಗೆ ಹಾಗೂ ಚಾಲಕರಿಗೆ ಸರಕಾರಿ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು.

ಕಾರ್ಮಿಕರಿಗೆ ಸ್ಥಳದಲ್ಲಿಯೇ ಆರೋಗ್ಯ ಕಾರ್ಡ್ ಮಾಡಿ ವಿತರಿಸಲಾಯಿತು. SჄS ಬೆಳ್ತಂಗಡಿ ಝೋನ್ ಅಧ್ಯಕ್ಷರಾದ M.A ಕಾಸಿಂ ಮುಸ್ಲಿಯಾರ್ ಮಾಚಾರು ಕಾರ್ಯಕ್ರಮವನ್ನು ಉದ್ಘಾಟಿಸಿದರು SჄS ಉಜಿರೆ ಸರ್ಕಲ್ ಅಧ್ಯಕ್ಷರಾದ ಸಲೀಂ ಕನ್ಯಾಡಿ ಅಧ್ಯಕ್ಷತೆ ವಹಿಸಿದ್ದರು.

ಕರ್ನಾಟಕ ಮುಸ್ಲಿಂ ಜಮಾಅತ್ ಝೋನ್ ಅಧ್ಯಕ್ಷರಾದ ಅಸ್ಸಯ್ಯಿದ್ S.M ಕೋಯ ತಂಙಳ್ ಉಜಿರೆ ಸರ್ಕಲ್ ಕಾರ್ಯದರ್ಶಿ ಖಾಲಿದ್ ಮಸ್ಲಿಯಾರ್ ಉಜಿರೆ ಸುನ್ನೀ ಮ್ಯಾನೇಜ್ಮೆಂಟ್ ಅಧ್ಯಕ್ಷರಾದ ಮುಹಿಯುದ್ದೀನ್ ನಜಾತ್ SSF ರಾಜ್ಯ ಕಾರ್ಯದರ್ಶಿ ಶರೀಫ್ ಬೆರ್ಕಳ SSF ಜಿಲ್ಲಾ ಕಾರ್ಯದರ್ಶಿ ಇಕ್ಬಾಲ್ ಮಾಚಾರು ಉಜಿರೆ SჄS ಝೋನ್ ನಾಯಕರಾದ ಅಯ್ಯೂಬ್ ಮಹ್ಲರಿ ಕಾವಳಕಟ್ಟೆ ಅಶ್ರಫ್ ಹಿಮಮಿ, ಪೈಝಲ್ ಬೆಳ್ತಂಗಡಿ ಅಬ್ದುಲ್ಲಾ ಉಜಿರೆ, SჄS ಉಜಿರೆ ಸರ್ಕಲ್ ನಾಯಕರು SSF ಉಜಿರೆ ಸೆಕ್ಟರ್ ನಾಯಕರು ಭಾಗವಹಿಸಿದ್ದರು ಕಾರ್ಯಕ್ರಮ ವನ್ನು SSF ಉಜಿರೆ ಸೆಕ್ಟರ್ ಅಧ್ಯಕ್ಷರಾದ ಅನ್ಸಾರ್ ಸಅದಿ ಮಾಚಾರು ಸ್ವಾಗತಿಸಿ ವಂದಿಸಿದರು.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?