ಪುತ್ತೂರು: ಎಸ್ ವೈ ಎಸ್ ದ.ಕ ಈಸ್ಟ್ ಜಿಲ್ಲಾ ಸಮಿತಿ ವತಿಯಿಂದ ಸಪ್ಟೆಂಬರ್ 02 ಶನಿವಾರ ಪುತ್ತೂರು ಟೌನ್ ಹಾಲ್ನಲ್ಲಿ ಬೆಳಗ್ಗೆ ಎಂಟು ಗಂಟೆಯಿಂದ ಸಂಜೆ ನಾಲ್ಕು ಗಂಟೆ ತನಕ ಕೇರಳ ಕರ್ನಾಟಕದ ಪ್ರಗಲ್ಭ ವಿದ್ವಾಂಸರು, ದಾರ್ಶನಿಕರು, ಸಾಹಿತಿಗಳು ಹಾಗೂ ಚಿಂತಕರಿಂದ ಆಧ್ಯಾತ್ಮಿಕತೆ, ಆದರ್ಶ, ಆರೋಗ್ಯ, ಸಂಘಟನೆ, ಸಾಹಿತ್ಯ ಮುಂತಾದ ವಿವಿಧ ವಿಷಯಗಳಲ್ಲಿ ತರಗತಿಗಳು ನಡೆಯಲಿದೆ.

ಕರ್ನಾಟಕ ಎಸ್ ವೈ ಎಸ್ ತನ್ನ ಮೂವತ್ತನೇ ವಾರ್ಷಿಕ ಆಚರಿಸುವ ಅಂಗವಾಗಿ ಬೆಳಗ್ಗೆ ಎಂಟು ಗಂಟೆಗೆ ಪುತ್ತೂರು ಕಿಲ್ಲೆ ಮೈದಾನದಲ್ಲಿ ಮೂವತ್ತು ಧ್ವಜಸ್ಥಂಭಗಳಲ್ಲಿ ಧ್ವಜಾರೋಹಣ ನಡೆಯಲಿದೆ. ಒಂಬತ್ತು ಗಂಟೆಗೆ ಖಾಝಿ ಖುರ್ರತುಸ್ಸಾದಾತ್ ಅಸ್ಸಯ್ಯದ್ ಫಝಲ್ ಕೋಯಮ್ಮ ತಂಙಳ್ ಕೂರತ್,ಖಾಝಿ ಝೈನುಲ್ ಉಲಮಾ ಮಾಣಿ ಉಸ್ತಾದ್ ರವರ ನೇತೃತ್ವದಲ್ಲಿ ಜಿಲ್ಲಾ ಪ್ರತಿನಿಧಿ ಸಮಾವೇಶದ ಉದ್ಘಾಟನಾ ಸಮಾರಂಭ ನಡೆಯಲಿದೆ.ನಂತರ ವಿವಿಧ ವಿಷಯಗಳಲ್ಲಿ ತರಗತಿ ನಡೆಯಲಿದೆ.
ಪೇರೋಡ್ ಅಬ್ದುರ್ರಹ್ಮಾನ್ ಸಖಾಫಿ, ತ್ವಾಹಿರ್ ಸಖಾಫಿ ಮಂಜೇರಿ, ಡಾ.ಸಯ್ಯಿದ್ ಸೈಫುಲ್ಲಾ ಮರ್ಕಝ್ ನಾಲೆಡ್ಜ್ ಸಿಟಿ, ಮರ್ಝೂಕ್ ಸಅದಿ ಕಾರಂದೂರು ಮರ್ಕಝ್, ರಾಶಿದ್ ಬುಖಾರಿ ಕುಟ್ಯಾಡಿ, ಡಾ.ಅಬ್ದುರ್ರಶೀದ್ ಝೈನಿ ಕಾಮಿಲ್ ಸಖಾಫಿ, ಹಾಫಿಲ್ ಸುಫ್ಯಾನ್ ಸಖಾಫಿ, ಎಕೆ ಸರ್ ನಂದಾವರ ವಿವಿಧ ವಿಷಯಗಳಲ್ಲಿ ತರಗತಿ ನಡೆಸಿಕೊಡಲಿದ್ದಾರೆ.ಜಿ.ಎಂ ಮುಹಮ್ಮದ್ ಕಾಮಿಲ್ ಸಖಾಫಿ, ಹಫೀಳ್ ಸಅದಿ ಕೊಡಗು,ಕೆ ಎಂ ಅಬೂಬಕರ್ ಸಿದ್ದೀಕ್ ಮೊಂಟುಗೋಳಿ,ಎಂ ಬಿ ಎಂ. ಸಾದಿಕ್ ಮಾಸ್ಟರ್,ಅಡ್ವಕೇಟ್ ಹಂಝತ್,ಎಫ್ ಎಚ್ ಮುಹಮ್ಮದ್ ಮಿಸ್ಬಾಹಿ ಮುಂತಾದ ಉಲಮಾ ಉಮರಾ ನೇತಾರರು,ಮಾನ್ಯ ಪುತ್ತೂರು ಶಾಸಕರಾದ ಶ್ರೀ ಆಶೋಕ್ ರೈ,ಶ್ರೀ ಎಂ ಬಿ ವಿಶ್ವನಾಥ ರೈ,ಶಕೂರ್ ಹಾಜಿ ಪಡೀಲ್, ಮುಂತಾದ ರಾಜಕೀಯ ಸಾಮಾಜಿಕ ನೇತಾರರು ಭಾಗವಹಿಸಲಿದ್ದಾರೆ.
ಸಂಜೆ ನಾಲ್ಕು ಗಂಟೆ ಸುನ್ನೀ ಸಂಘ ಕುಟುಂಬದ ವತಿಯಿಂದ ಪುತ್ತೂರು ಕಿಲ್ಲೆ ಮೈದಾನದಿಂದ ದರ್ಬೆ ವೃತ್ತದ ತನಕ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ಪ್ರಚಾರಾರ್ಥ ಬೃಹತ್ ಗೋಲ್ಟನ್ ರ್ಯಾಲಿ ನಡೆಯಲಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ