ಶಾರ್ಜಾ(ಯು ಎ ಇ): ಶಾರ್ಜಾ ಸಅದಿಯ್ಯ ಕಮಿಟಿ .ಮತ್ತು ICF KCF RSC ಸಂಘಟನೆಗಳ ಸಹಭಾಗಿತ್ವದಲ್ಲಿ ವರ್ಷಂಪ್ರತಿ ಬಹಳ ವಿಜೃಂಭಣೆಯಿಂದ ನಡೆಸಲ್ಪಡುವ ತಾಜುಲ್ ಉಲಮಾ,ನೂರುಲ್ ಉಲಮಾ ಅನುಸ್ಮರಣಾ ಮಜ್ಲಿಸ್ 2023ರ ಅಕ್ಟೋಬರ್ 20 ಶುಕ್ರವಾರ ಮಗ್ರಿಬ್ ನಮಾಝಿನ ಬಳಿಕ ಶಾರ್ಜಾ ಕ್ಲಾಕ್ ಟವರ್ ಸಮೀಪದ ನೂರ್ ಹಿಲಾಲ್ ಪಾರ್ಟಿ ಹಾಲ್ ನಲ್ಲಿ ನಡೆಯಲಿದೆ.

ಪ್ರಸ್ತುತ ಕಾರ್ಯಕ್ರಮಕ್ಕೆ ಜಾಮಿಅ ಸಅದಿಯ್ಯ ಸಂಸ್ಥೆಯ ಅಧ್ಯಕ್ಷರೂ ಸಮಸ್ತ ಉಪಾಧ್ಯಕ್ಷರಾದ ಬಹು; K S ಆಟಕೋಯ ತಂಙಳ್ ಕುಂಬೋಲ್ ರವರು ಆಗಮಿಸಲಿದ್ದಾರೆ.
ಕಾರ್ಯಕ್ರಮದ ಯಶಸ್ವಿಗಾಗಿ, ಸೆಪ್ಟೆಂಬರ್ 2 ರಂದು ಶಾರ್ಜಾ ಮುಹಿಮ್ಮಾತ್ ಸೆಂಟರ್ ನಲ್ಲಿ ಸ್ವಾಗತ ಸಮಿತಿಯನ್ನು ರಚಿಸಲಾಯಿತು. ಶಿರಿಯಾ ಅಬೂಬಕ್ಕರ್ ಉಸ್ತಾದರು ದುಅಃ ನೆರವೇರಿಸಿದರು. ಶಾರ್ಜಾ ಸಅದಿಯ್ಯ ಸಮಿತಿ ಅಧ್ಯಕ್ಷರಾದ ಅಬ್ದುಲ್ಲ ಹಾಜಿ ಉಳ್ವಾರ್ ಅಧ್ಯಕ್ಷತೆ ವಹಿಸಿದರು. ಪ್ರಧಾನ ಕಾರ್ಯದರ್ಶಿ ನುಅ್ ಮಾನ್ ಕೊಲ್ಲಂಬಾಡಿ ಸ್ವಾಗತಿಸಿದರು. ಅಬೂಬಕ್ಕರ್ ಮದನಿ ತೋಕೆ (ಪಯಕಡಪುರಂ) ಉದ್ಘಾಟಿಸಿದರು. ಸಯ್ಯಿದ್ ಜಿಫ್ರಿ ತಂಙಳ್ ಬೇಕಲ್ ಪ್ರಸ್ತಾವಿಕ ಬಾಷಣ ಮಾಡಿದರು.
ಸಭೆಯಲ್ಲಿ ಶೈಖ್ ಇಮಾಮ್ ಬೇಕಲ್, ಅಬ್ದುಲ್ ಖಾದರ್ ಹಾಜಿ ಕಾಞಂಗಾಡ್, ಸಅದಿಯ್ಯ ಶಾರ್ಜಾ ಓರ್ಗೈಸರ್ ಅಬ್ಬಾಸ್ ಮುಸ್ಲಿಯಾರ್ ಮಂಜನಾಡಿ ಹಾಗೂ ICF, KCF, RSC, ಸಅದಿಯ್ಯ ಅಲುಮ್ನಿ ಮೊದಲಾದ ಸಂಘಟನೆಯ ನಾಯಕರು, ಕಾರ್ಯಕರ್ತರು ಉಪಸ್ಥಿತರಿದ್ದರು.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ