ಮಂಗಳೂರು: ವಖ್ಫ್ ಆಸ್ತಿ ಅಂದರೆ ಅದು ಮುಸ್ಲಿಮ್ ಹಿರಿಯರು ದೇವನಿಗಾಗಿ ಅರ್ಪಿಸಿದ ಆಸ್ತಿಯಾಗಿದೆ ಹೊರತು ಯತ್ನಾಳ್ ಹಿರಿಯರ ಆಸ್ತಿಯಲ್ಲ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರಿಗೆ ತಿರುಗೇಟು ನೀಡಿದ್ದಾರೆ.
ಇತ್ತೀಚೆಗೆ ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿಯನ್ನು ಹಾಡಿ ಹೊಗಳುವ ಭರದಲ್ಲಿ ಕೇಂದ್ರ ಸರ್ಕಾರದ ಅಷ್ಟೂ ವರ್ಷಗಳ ವೈಫಲ್ಯವನ್ನು ಮರೆಮಾಚುವ ಉದ್ದೇಶದಿಂದ ಮತ್ತು ರಾಜ್ಯದಲ್ಲಿ ಕೋಮು ವಿದ್ವೇಶವನ್ನು ಮುಂದುವರಿಸುವ ಭಾಗವಾಗಿ ಪ್ರಧಾನ ಮಂತ್ರಿ ಮೋದಿಗೆ ತಾನು ಪತ್ರ ಬರೆದು ವಕ್ಫ್ ಕಾಯ್ದೆಯನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿದ್ದೇನೆಂದು ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವಖ್ಫ್ ಆಸ್ತಿಗಳು ಈ ದೇಶದಲ್ಲಿ ಜೀವಿಸಿ, ಗತಿಸಿ ಹೋದ ಮುಸ್ಲಿಮರು ಮತ್ತು ಹಾಲಿ ಭಾರತದ ಪ್ರಜೆಗಳಾದ ಮುಸ್ಲಿಮರ ಕೊಡುಗೆಯಾಗಿದೆ. ಪ್ರಸ್ತುತ ಅಷ್ಟೂ ವಕ್ಫ್ ಆಸ್ತಿಗಳನ್ನು ಮುಸ್ಲಿಮ್ ಸಂಸ್ಥೆಗಳು ನಿರ್ವಹಿಸಿ ಜನರ ಧಾರ್ಮಿಕ ಸವಲತ್ತುಗಳನ್ನು ಪೂರೈಸುತ್ತಿದೆ.
ಯತ್ನಾಳ್, ವಕ್ಫ್ ಆಸ್ತಿ ರದ್ದತಿಯಿಂದ ಸರಕಾರಕ್ಕೆ ಕರ್ಚು ಉಳಿತಾಯವಾಗಲಿದೆ ಎಂದು ಹೇಳಿದ್ದಾರೆ. ವಕ್ಫ್ ಸಂಸ್ಥೆಯೇ ಸರಕಾರದ ಅಧೀನದಲ್ಲಿರುವಾಗ ವಕ್ಫ್ ರದ್ದತಿ ಪ್ರಸ್ತಾಪ ಯಾಕೆ ಎಂದು ಯತ್ನಾಳ್ ಹೇಳಬೇಕು. ವಕ್ಫ್ ರದ್ದತಿ ಕೋರಲು ವಕ್ಫ್ ಆಸ್ತಿಗಳು ಯತ್ನಾಳ್ ಹಿರಿಯರ ಆಸ್ತಿ ಏನು ಅಲ್ಲ. ಕೇಂದ್ರ ಸರಕಾರದ ವೈಫಲ್ಯಗಳನ್ನು ಜನರ ಚಿಂತನೆಯಿಂದ ಮರೆ ಮಾಚಲು ಯತ್ನಾಳ್ ಕೇಶವಕೃಪ ಸಲಹೆಯಂತೆ ಹೇಳಿಕೆ ನೀಡಿ ಜನರನ್ನು ಮುಸ್ಲಿಮ್ ವಿದ್ವೇಶದ ಕಡೆಗೆ ವಾಲಿಸುವ ಪ್ರಯತ್ನದ ಭಾಗವಾಗಿದೆ ಈ ಹೇಳಿಕೆ. ಯತ್ನಾಳ್ ವಾಸ್ತವ ಸತ್ಯ ಅರಿತು ವಕ್ಫ್ ಆಸ್ತಿಯು ಜನರ ಸೌಹಾರ್ದತೆಗೆ ಪೂರಕವಾಗಿ ಅಸ್ತಿತ್ವದಲ್ಲಿ ಇದೆ ಎಂಬುದನ್ನು ತಿಳಿಯಬೇಕು ಎಂದು ಕೆ.ಅಶ್ರಫ್( ಮಾಜಿ ಮೇಯರ್) ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?