ಮಂಗಳೂರು: ವಖ್ಫ್ ಆಸ್ತಿ ಅಂದರೆ ಅದು ಮುಸ್ಲಿಮ್ ಹಿರಿಯರು ದೇವನಿಗಾಗಿ ಅರ್ಪಿಸಿದ ಆಸ್ತಿಯಾಗಿದೆ ಹೊರತು ಯತ್ನಾಳ್ ಹಿರಿಯರ ಆಸ್ತಿಯಲ್ಲ ಎಂದು ಮುಸ್ಲಿಮ್ ಒಕ್ಕೂಟದ ಅಧ್ಯಕ್ಷರಾದ ಕೆ.ಅಶ್ರಫ್ ರವರು ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರಿಗೆ ತಿರುಗೇಟು ನೀಡಿದ್ದಾರೆ.
ಇತ್ತೀಚೆಗೆ ವಿಜಯಪುರದಲ್ಲಿ ಬಿಜೆಪಿ ಶಾಸಕ ಬಸವನ ಗೌಡ ಪಾಟೀಲ್ ಯತ್ನಾಳ್ ರವರು ಪ್ರಧಾನಿ ನರೇಂದ್ರ ಮೋದಿಯವರ ಕಾರ್ಯ ವೈಖರಿಯನ್ನು ಹಾಡಿ ಹೊಗಳುವ ಭರದಲ್ಲಿ ಕೇಂದ್ರ ಸರ್ಕಾರದ ಅಷ್ಟೂ ವರ್ಷಗಳ ವೈಫಲ್ಯವನ್ನು ಮರೆಮಾಚುವ ಉದ್ದೇಶದಿಂದ ಮತ್ತು ರಾಜ್ಯದಲ್ಲಿ ಕೋಮು ವಿದ್ವೇಶವನ್ನು ಮುಂದುವರಿಸುವ ಭಾಗವಾಗಿ ಪ್ರಧಾನ ಮಂತ್ರಿ ಮೋದಿಗೆ ತಾನು ಪತ್ರ ಬರೆದು ವಕ್ಫ್ ಕಾಯ್ದೆಯನ್ನು ರದ್ದು ಪಡಿಸಬೇಕೆಂದು ಒತ್ತಾಯಿಸಿದ್ದೇನೆಂದು ಹೇಳಿಕೆ ನೀಡಿದ್ದಾರೆ.
ದೇಶದಲ್ಲಿ ಪ್ರಸ್ತುತ ಅಸ್ತಿತ್ವದಲ್ಲಿರುವ ವಖ್ಫ್ ಆಸ್ತಿಗಳು ಈ ದೇಶದಲ್ಲಿ ಜೀವಿಸಿ, ಗತಿಸಿ ಹೋದ ಮುಸ್ಲಿಮರು ಮತ್ತು ಹಾಲಿ ಭಾರತದ ಪ್ರಜೆಗಳಾದ ಮುಸ್ಲಿಮರ ಕೊಡುಗೆಯಾಗಿದೆ. ಪ್ರಸ್ತುತ ಅಷ್ಟೂ ವಕ್ಫ್ ಆಸ್ತಿಗಳನ್ನು ಮುಸ್ಲಿಮ್ ಸಂಸ್ಥೆಗಳು ನಿರ್ವಹಿಸಿ ಜನರ ಧಾರ್ಮಿಕ ಸವಲತ್ತುಗಳನ್ನು ಪೂರೈಸುತ್ತಿದೆ.
ಯತ್ನಾಳ್, ವಕ್ಫ್ ಆಸ್ತಿ ರದ್ದತಿಯಿಂದ ಸರಕಾರಕ್ಕೆ ಕರ್ಚು ಉಳಿತಾಯವಾಗಲಿದೆ ಎಂದು ಹೇಳಿದ್ದಾರೆ. ವಕ್ಫ್ ಸಂಸ್ಥೆಯೇ ಸರಕಾರದ ಅಧೀನದಲ್ಲಿರುವಾಗ ವಕ್ಫ್ ರದ್ದತಿ ಪ್ರಸ್ತಾಪ ಯಾಕೆ ಎಂದು ಯತ್ನಾಳ್ ಹೇಳಬೇಕು. ವಕ್ಫ್ ರದ್ದತಿ ಕೋರಲು ವಕ್ಫ್ ಆಸ್ತಿಗಳು ಯತ್ನಾಳ್ ಹಿರಿಯರ ಆಸ್ತಿ ಏನು ಅಲ್ಲ. ಕೇಂದ್ರ ಸರಕಾರದ ವೈಫಲ್ಯಗಳನ್ನು ಜನರ ಚಿಂತನೆಯಿಂದ ಮರೆ ಮಾಚಲು ಯತ್ನಾಳ್ ಕೇಶವಕೃಪ ಸಲಹೆಯಂತೆ ಹೇಳಿಕೆ ನೀಡಿ ಜನರನ್ನು ಮುಸ್ಲಿಮ್ ವಿದ್ವೇಶದ ಕಡೆಗೆ ವಾಲಿಸುವ ಪ್ರಯತ್ನದ ಭಾಗವಾಗಿದೆ ಈ ಹೇಳಿಕೆ. ಯತ್ನಾಳ್ ವಾಸ್ತವ ಸತ್ಯ ಅರಿತು ವಕ್ಫ್ ಆಸ್ತಿಯು ಜನರ ಸೌಹಾರ್ದತೆಗೆ ಪೂರಕವಾಗಿ ಅಸ್ತಿತ್ವದಲ್ಲಿ ಇದೆ ಎಂಬುದನ್ನು ತಿಳಿಯಬೇಕು ಎಂದು ಕೆ.ಅಶ್ರಫ್( ಮಾಜಿ ಮೇಯರ್) ಅಧ್ಯಕ್ಷರು.ದ.ಕ.ಜಿಲ್ಲಾ ಮುಸ್ಲಿಮ್ ಒಕ್ಕೂಟ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ