ಬಂಟ್ವಾಳ : ಪುದು, ತುಂಬೆ ಮತ್ತು ಅಡ್ಯಾರ್ ಈ ಮೂರು ಗ್ರಾಮಗಳ 20 ಜಮಾಅತ್ ಹಾಗೂ ರೆಸ್ಕ್ಯೂ ಚಾರಿಟೇಬಲ್ ಟ್ರಸ್ಟ್ (ರಿ.) ಫರಂಗಿಪೇಟೆ ಇದರ ಜಂಟಿ ಆಶ್ರಯದಲ್ಲಿ ಮಾದಕ ವಸ್ತುಗಳ ಬಳಕೆಯ ವಿರುದ್ಧ ಜನಜಾಗೃತಿ ಮೂಡಿಸಲು ಸೆಪ್ಟೆಂಬರ್ 08 ಶುಕ್ರವಾರ ಮಧ್ಯಾಹ್ನ 02:30 ಗಂಟೆಗೆ ಫರಂಗಿಪೇಟೆಯ ಜಂಕ್ಷನ್ ನಲ್ಲಿ “ಡ್ರಗ್ಸ್ ಮುಕ್ತ ಗ್ರಾಮ ಜನಜಾಗೃತಿ ಅಭಿಯಾನ” ವನ್ನು ಏರ್ಪಡಿಸಲಾಗಿದೆ.
ಜಾಗೃತಿ ಕಾರ್ಯಕ್ರಮದಲ್ಲಿ ಶಾಲಾ/ಕಾಲೇಜು ವಿದ್ಯಾರ್ಥಿಗಳಿಂದ ಬೀದಿ ನಾಟಕ, ಹಲವು ಸಂಘ ಸಂಸ್ಥೆಗಳ ನೇತೃತ್ವದಲ್ಲಿ ವಾಹನ ಜಾಥಾ, ಜನಸಾಮಾನ್ಯರಿಗೆ ಅರಿವು ಮೂಡಿಸುವ ಸಲುವಾಗಿ ಬೃಹತ್ ಜಾಗೃತಿಸಭೆಯನ್ನು ಆಯೋಜಿಸಲಾಗಿದೆ.
ಇದೇ ಸಂದರ್ಭದಲ್ಲಿ ಧಾರ್ಮಿಕ ಹಾಗೂ ಸಾಮಾಜಿಕ ಮುಖಂಡರಿಂದ ಜಾಗೃತಿ ಸಂದೇಶ, ವೈದ್ಯಕೀಯ ತಜ್ಞರು ಹಾಗೂ ಪೊಲೀಸ್ ಇಲಾಖೆಯ ವರಿಷ್ಠರಿಂದ ಸಂವಾದ ಕಾರ್ಯಕ್ರಮ ನಡೆಯಲಿರುತ್ತದೆ.
ಈ ಮೂರು ಗ್ರಾಮಕ್ಕೆ ಒಳಪಟ್ಟ ಶಾಲಾ/ಕಾಲೇಜು ವಿದ್ಯಾರ್ಥಿಗಳು, ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ನಾಗರಿಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಪತ್ರಿಕಾ ಪ್ರಕಟಣೆಯಲ್ಲಿ ವಿನಂತಿಸಲಾಗಿದೆ.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ