ಅಜ್ಮಾನ್: ಕರ್ನಾಟಕ ಕಲ್ಚರಲ್ ಫೌಂಡೇಶನ್ ಅಜ್ಮಾನ್ ಝೋನ್ ವತಿಯಿಂದ ಅಕ್ಟೋಬರ್ 1 ರಂದು ನಡೆಯುವ ಬೃಹತ್ ಮೀಲಾದ್ ಸಮಾವೇಶ ನಡೆಯಲಿದೆ.
ಕಾರ್ಯಕ್ರಮದ ಯಶಸ್ಸಿಗಾಗಿ, ಸ್ವಾಗತ ಸಮಿತಿ ರಚನೆಯು KCF ಅಜ್ಮಾನ್ ಉಮರಾ ನಾಯಕ ಖಾಲಿದ್ ಮೂಡಬಿದ್ರೆ ನಿವಾಸದಲ್ಲಿ ಝೋನ್ ಅಧ್ಯಕ್ಷ ಅಬೂಬಕ್ಕರ್ ಸಿದ್ದೀಕ್ ಅಮಾನಿಯವರ ಅಧ್ಯಕ್ಷತೆಯಲ್ಲಿ ನಡೆಯಿತು. ಝೋನ್ ಕಾರ್ಯದರ್ಶಿ ಅಬ್ದುಲ್ ಖಾದರ್ ಕೊಡಿಪ್ಪಾಡಿ ಸ್ವಾಗತ ಕೋರಿದರು. ಕೆಸಿಎಫ್ ರಾಷ್ಟ್ರೀಯ ಇಹ್ಸಾನ್ ಅಧ್ಯಕ್ಷ ಅಬ್ದುಲ್ ಖಾದರ್ ಸಅದಿ ಸಭೆಯನ್ನು ಉದ್ಘಾಟಿಸಿದರು.
ಅಧ್ಯಕ್ಷೀಯ ಭಾಷಣದಲ್ಲಿ ಅಮಾನಿ ಉಸ್ತಾದರು, ಕರುಣೆಯ ಪ್ರವಾದಿ (ಸ ಅ) ರು ಒಂದು ಸುಂದರವಾದ ಕುಲೀನವಾದ ಕುಟುಂಬದಲ್ಲಿ ಜನಿಸಿದ ಗಂಡು ಮಗು ಆಗಿದ್ದರಿಂದ ಹೆಮ್ಮೆ ಪಡುತ್ತಾ ನಂತರದ ದಿನಗಳಲ್ಲಿ ಪ್ರವಾದಿ (ಸ ಅ) ರನ್ನು ದ್ವೇಷಿಸುತ್ತಾ ಕೊನೇ ಕ್ಷಣದಲ್ಲಿ ಅವರಲ್ಲಿ ಬಹುತೇಕ ಮಂದಿ ಪವಿತ್ರ ಇಸ್ಲಾಮ್ ಧರ್ಮ ಸ್ವೀಕರಿಸಲು ನೆಬಿಯವರ ಮೇಲ್ಮೆ ಗುಣ ಕಾರಣವಾಯಿತು ಎಂದು ವಿವರಿಸಿದರು.
“ಜಗತ್ತಿಗೆ ಕರುಣೆಯ ಪ್ರವಾದಿ (ಸ ಅ) ರಬೀಹ್ 23” ಎಂಬ ಕ್ಯಾಂಪೇನ್ ಅನ್ನು ಝೋನ್ ಮಟ್ಟದಲ್ಲಿ ಸಯ್ಯಿದ್ ತ್ವಾಹಿರ್ ತಂಙಳ್ ಅಧಿಕೃತವಾಗಿ ಚಾಲನೆ ನೀಡಿದರು.
ಸ್ವಾಗತ ಸಮಿತಿ ಪದಾಧಿಕಾರಿಗಳು
ಗೌರವಾಧ್ಯಕ್ಷ: ಸಯ್ಯಿದ್ ತ್ವಾಹಿರ್ ತಂಙಳ್, ಚೇರ್ಮನ್: ಖಾಲಿದ್ ಮೂಡಬಿದ್ರೆ, ವರ್ಕಿಂಗ್ ಚೇರ್ಮನ್: ಅಬ್ದುಲ್ ಖಾದರ್ ಸಅದಿ, ಜನರಲ್
ಕನ್ವೀನರ್: ಉಮರ್ ಸುಳ್ಯ, ಕನ್ವೀನರ್, ಮೊಹಮ್ಮದ್ ಅಲಿ ಕುಡ್ತಮುಗೆರು, ಖಜಾಂಜಿಯಾಗಿ ಮೊಹಮ್ಮದ್ ಅಯ್ಯೂಬ್ ಅಮ್ಮೆಂಬಳ, ಫೈನಾನ್ಸ್ ಚೇರ್ಮನ್, ಸಿದ್ದೀಕ್ ಪಾಣೆಮಂಗಳೂರು, ಮೀಡಿಯಾ ಮತ್ತು ಪಬ್ಲಿಕೇಶನ್ ಚೇರ್ಮನ್ ಆಗಿ ಅಶ್ರಫ್ ಸಖಾಫಿ ಕರ್ಪಾಡಿ, ಕನ್ವೀನರ್ ತಾಜುದ್ದೀನ್ ಉಳ್ಳಾಲ ಆಯ್ಕೆಯಾದರು.
ಹಾಗೂ ಕಾರ್ಯಕ್ರಮದ ವಿವಿಧ ವಿಭಾಗಗಳಿಗೆ ಉಸ್ತುವಾರಿಗಳನ್ನು ಆರಿಸಲಾಯಿತು. ಉಮರ್ ಸುಳ್ಯ ಧನ್ಯವಾದ ಸಲ್ಲಿಸಿದರು.
















ಇನ್ನಷ್ಟು ಸುದ್ದಿಗಳು
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ
ಕಣ್ಣೂರು: ಕೊನೆಗೂ ನಿಟ್ಟುಸಿರು ಬಿಟ್ಟ ಪ್ರಯಾಣಿಕರು; ಆತಂಕ ಸೃಷ್ಟಿಸಿದ್ದ ಜಿದ್ದಾ ವಿಮಾನ ಸುರಕ್ಷಿತ ಲ್ಯಾಂಡಿಂಗ್
ಕದನ ವಿರಾಮವಲ್ಲ, ಅಮೆರಿಕ ಮತ್ತು ಇಸ್ರೇಲ್ ಸೋಲೊಪ್ಪಿಕೊಂಡ ಕ್ಷಣ: ಯುದ್ಧ ಪ್ರೇಮಿಗಳು ಹಿಂದೆ ಸರಿಯಲು ನಿಜವಾದ ಕಾರಣವೇನು?
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
SჄS ಬೆಳ್ತಂಗಡಿ ಝೋನ್: ಸಾಂತ್ವನ ಫಂಡ್ ಹಸ್ತಾಂತರ
ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಿಗೆ ಮರು ಅರ್ಜಿ ಕಡ್ಡಾಯ- ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್
ಮುಂದಿನ 24 ಗಂಟೆಗಳಲ್ಲಿ ಯು.ಎಸ್-ಇರಾನ್ ಶಾಂತಿ ಒಪ್ಪಂದ ಅಂತಿಮ: ಪಾಕ್ ಪ್ರಧಾನಿ ಶಹಬಾಝ್ ಷರೀಫ್
ಮೂವರು ಭಾರತೀಯ ನಾವಿಕರ ಸಾವು: ಯು.ಎಸ್ ವಿರುದ್ಧ ವಿದೇಶಾಂಗ ಸಚಿವ ಜೈಶಂಕರ್ ಆಕ್ರೋಶ
ಜಿದ್ದಾದಲ್ಲಿ ಅಕ್ರಮ ಸಿಹಿತಿಂಡಿ ತಯಾರಿಕಾ ಘಟಕಕ್ಕೆ ಬೀಗ; 20 ಟನ್ ಕೊಳೆತ ಆಹಾರ ಪದಾರ್ಥಗಳ ನಾಶ
‘ಇಸ್ಲಾಂ ಸ್ವೀಕರಿಸಿದ್ದು ನನ್ನ ಸ್ವಂತ ಇಚ್ಛೆಯಿಂದ’ ; ಲವ್ ಜಿಹಾದ್ ಆರೋಪವನ್ನು ತಳ್ಳಿಹಾಕಿದ ಆಯುಷ್ ಮಲಿಕ್ (ಮುಹಮ್ಮದ್ ಅಲಿ)