ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿ ಪಕ್ಕಾ ಆದಂತಾಗಿದೆ, ಗೃಹ ಸಚಿವ ಅಮಿತ್ ಶಾ ಮೈತ್ರಿಗೆ ಒಪ್ಪಿಕೊಂಡಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.
ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಮುಂದೆ ಈ ವಿಷಯವನ್ನು ಬಹಿರಂಗವಾಗಿ ಒಪ್ಪಿಕೊಂಡಿರುವ ಬಿಎಸ್ ವೈ, ಬಿಜೆಪಿ-ಜೆಡಿಎಸ್ ಮೈತ್ರಿ ಮಾಡಿಕೊಂಡರೆ ಮುಂಬರುವ ಲೋಕಸಭೆ ಚುನಾವಣೆಗೆ ಸಹಕಾರಿಯಾಗಲಿದೆ, ಅಮಿತ್ ಶಾ ಅವರು 4 ಸ್ಥಾನಗಳನ್ನು ಜೆಡಿಎಸ್ ಗೆ ಬಿಟ್ಟುಕೊಡಲು ಒಪ್ಪಿಕೊಂಡಿದ್ದಾರೆ. ಎರಡೂ ಪಕ್ಷಗಳು ಮೈತ್ರಿ ಮಾಡಿಕೊಂಡರೆ ಬಿಜೆಪಿ ಪಕ್ಷಕ್ಕೆ ಹೆಚ್ಚು ಶಕ್ತಿ ಬರಲಿದೆ ಎಂದಿದ್ದಾರೆ.
ರಾಜ್ಯದಲ್ಲಿ 4 ಲೋಕಸಭಾ ಸ್ಥಾನಗಳಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಈಗಾಗಲೇ ವರಿಷ್ಠರು ನಮಗೆ ದೆಹಲಿಯಿಂದ ಸೂಚನೆ ನೀಡಿದ್ದಾರೆ. ಉಭಯ ಪಕ್ಷಗಳ ವರಿಷ್ಠರ ಮಧ್ಯೆ ಮಾತುಕತೆ ನಡೆದಿದೆ ಎಂದಿದ್ದಾರೆ.
ನಾವು ಒಗ್ಗಟ್ಟಾಗಿ ರಾಜ್ಯ ಸರ್ಕಾರ ವಿರುದ್ಧ ಹೋರಾಡುತ್ತೇವೆ ಎಂದು ಮಾಧ್ಯಮ ಪ್ರತಿನಿಧಿಗಳ ಮುಂದೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ.
















ಇನ್ನಷ್ಟು ಸುದ್ದಿಗಳು
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ
ಗ್ರಾಹಕರ ಗಮನಕ್ಕೆ: ಎಲ್ಪಿಜಿ ಸಿಲಿಂಡರ್ ವಿತರಣಾ ವ್ಯವಸ್ಥೆಯಲ್ಲಿ ಮಹತ್ವದ ಬದಲಾವಣೆ
ಡಿಕೆಯಸ್ಸಿ ಯು.ಎ.ಇ ರಾಷ್ಟ್ರೀಯ ಸಮಿತಿ- ಹಜ್ ಯಾತ್ರಿಗಳಿಗೆ ಆತ್ಮೀಯ ಬಿಳ್ಕೊಡುಗೆ
ಮಾದರಿ ಮದುವೆ ಅಭಿಯಾನದ ಸಮಾರೋಪ ಪ್ರಚಾರ; ಎ.28, 29 ರಂದು ವಾಹನ ಸಂದೇಶ ಜಾಥಾ
ಮುಂಬೈಯನ್ನು ನಡುಗಿಸಿದ ಘಟನೆ: ಬಿರಿಯಾನಿ ಮತ್ತು ಕಲ್ಲಂಗಡಿ ತಿಂದ ಕುಟುಂಬ ಬೆಳಗಾಗುವಷ್ಟರಲ್ಲಿ ಅಂತ್ಯ