ಬೆಂಗಳೂರು:ಸುನ್ನೀ ಸ್ಟೂಡೆಂಟ್ ಫೆಡರೇಷನ್ ಎಸ್ಸೆಸ್ಸೆಫ್ ಇದರ ಐತಿಹಾಸಿಕ ಸುವರ್ಣ ಮಹೋತ್ಸವ ‘ಗೋಲ್ಡನ್ ಫಿಫ್ಟಿ’ ಸಮ್ಮೇಳನವು ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದು ಬೆಳಗ್ಗೆ ಅದ್ದೂರಿಯಾಗಿ ಚಾಲನೆಗೊಂಡಿದೆ.

ಬೆಳಗ್ಗೆ ಆರಂಭಗೊಂಡ ಉದ್ಘಾಟನಾ ಸಮಾವೇಶದಲ್ಲಿ, ರಾಜ್ಯ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಹಾಗೂ ವಖ್ಫ್ ಸಚಿವರಾದ ಬಿ. ಝಡ್. ಝಮೀರ್ ಅಹ್ಮದ್ ಖಾನ್ ಮಾತನಾಡಿ, ರಾಜ್ಯದ ಎಲ್ಲಾ ಮಸೀದಿಗಳ ಮುಅಝಿನ್ ಗಳಿಗೆ ರಾಜ್ಯ ವಖ್ಫ್ ಇಲಾಖೆ ವತಿಯಿಂದ ಮನೆ ನಿರ್ಮಿಸಿ ಕೊಡುವ ಕಾರ್ಯವನ್ನು ಶೀಘ್ರವಾಗಿಯೆ ನಡೆಸಲಿದ್ದೇವೆ ಎಂದು ಘೋಷಿಸಿದರು.
ಮದ್ರಸಾ ರಂಗವನ್ನು ಕೇರಳ ಮಾದರಿಯಂತೆ ಇನ್ನಷ್ಟು ಉನ್ನತಿಗೊಳಿಸಲಿದ್ದೇವೆ ಎಂದ ಸಚಿವರು, ಕೇರಳದ ಮಅದಿನ್ ಸಂಸ್ಥೆಯ ವರ್ಣನೆ ಮತ್ತು ವಿದ್ಯಾಭ್ಯಾಸದ ತತ್ವ ಮತ್ತು ಆಚಾರಗಳನ್ನು ಕರ್ನಾಟಕಾದ್ಯಂತ ಅಳವಡಿಸಲು ಇದೀಗಾಗಲೇ ಮಾತುಕತೆ ನಡೆಸುತ್ತಿದ್ದೇವೆ ಎಂದು ಹೇಳಿದರು.


ಮಸೀದಿಗಳಲ್ಲಿ ಮುಅಝಿನ್ ಕೆಲಸಮಾಡುವವರಿಗೆ ದೊರೆಯುವ ಸಣ್ಣ ವೇತನಗಳಿಂದ ಅವರ ಕುಟುಂಬ ನಿರ್ವಹಿಸುವುದೇ ಬಹಳ ಕಷ್ಟದ ಪರಿಸ್ಥಿತಿ, ಈ ನಿಟ್ಟಿನಲ್ಲಿ ಮುಅಝಿನ್ ಉಸ್ತಾದರುಗಳಿಗೆ ಸರಕಾರದಿಂದಲೇ ಮನೆ ನಿರ್ಮಿಸಿಕೊಡುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಬೆಂಗಳೂರಿನಲ್ಲಿ ನಡೆಯುತ್ತಿರುವ ಎಸ್ಸೆಸ್ಸೆಫ್ ಗೋಲ್ಡನ್ ಫಿಫ್ಟಿ ವಿದ್ಯಾರ್ಥಿ ಸಮಾವೇಶದಲ್ಲಿ ವಖ್ಫ್ ಸಚಿವರು ಹೇಳಿದರು.
ಎಸ್ಎಸ್ಎಫ್ ವಿದ್ಯಾರ್ಥಿಗಳ ಶಿಸ್ತನ್ನು ಕಂಡು ಅಚ್ಚರಿಗೊಂಡ ಸಚಿವರು, ಈ ಸಂಘಟನೆ ರಾಜ್ಯಕ್ಕೆ ಸಾಮಾಜಿಕವಾಗಿಯೂ, ಶೈಕ್ಷಣಿಕವಾಗಿಯೂ ಅತೀ ಅಗತ್ಯ ಎಂದರು.


ಕಾರ್ಯಕ್ರಮದಲ್ಲಿ ಮಅದಿನ್ ಸಂಸ್ಥೆಯ ಚೇರ್ಮ್ಯಾನ್ ಸಯ್ಯಿದ್ ಖಲೀಲುಲ್ ಬುಖಾರಿ ಅವರು ಕಾರ್ಯಕರ್ತರಿಗೆ ಉತ್ತಮ ಸಂದೇಶವನ್ನು ನೀಡಿದರು.
















ಇನ್ನಷ್ಟು ಸುದ್ದಿಗಳು
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್
ಮದ್ರಸಾ ಅಧ್ಯಾಪಕರ ಮೇಲಿನ ಹಲ್ಲೆ ಅತ್ಯಂತ ಖಂಡನೀಯ- ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ SJM ಕಿನ್ನಿಗೋಳಿ ರೇಂಜ್ ಆಗ್ರಹ