ಗೆಳೆಯರ ಬಳಗ ನಾರ್ಶ, ಬಾರೆಬೆಟ್ಟು ಇದರ ವತಿಯಿಂದ ಶ್ರೀ ಬಿ. ರಮಾನಾಥ ರೈ ಅವರ ಹುಟ್ಟು ಹಬ್ಬದ ಪ್ರಯುಕ್ತ ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ನಾಟೆಕಲ್, ಉಳ್ಳಾಲ- ಮಂಗಳೂರು ಹಾಗೂ ಜಿಲ್ಲಾ ಅಂಧತ್ವ ನಿಯಂತ್ರಣ ಸೊಸೈಟಿ ( DBCS) ರಿ. ಮಂಗಳೂರು ಇದರ ನೇತೃತ್ವದಲ್ಲಿ ಆರೋಗ್ಯ ತಪಾಸಣಾ ಶಿಬಿರ ಹಾಗೂ ಬೃಹತ್ ರಕ್ತದಾನ ಶಿಬಿರವು ದಿನಾಂಕ :- 17-9-2023 ಆದಿತ್ಯವಾರದಂದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ತಾಳಿತ್ತನೂಜಿಯಲ್ಲಿ ನಡೆಯಲಿದೆ.
ಈ ಕಾರ್ಯಕ್ರಮವನ್ನು ಮಾಜಿ ಸಚಿವರಾದ ಶ್ರೀ ಬಿ. ರಮಾನಾಥ ರೈ ಅವರು ಉದ್ಘಾಟಿಸಲಿದ್ದಾರೆ. ಹಾಗೂ ಇನ್ನಿತರ ರಾಜಕೀಯ, ಸಾಮಾಜಿಕ ನಾಯಕರು ಭಾಗವಹಿಸಲಿದ್ದಾರೆ. ಈ ರಕ್ತದಾನ ಶಿಬಿರದಲ್ಲಿ ಕ್ರಿಕೇಟ್ ತಂಡದ 10 ಜನ ರಕ್ತದಾನ ಮಾಡಿದರೆ ಭಾಗವಹಿಸಿದ ಎಲ್ಲಾ ತಂಡಕ್ಕೆ ಉಚಿತವಾಗಿ 1 ಬ್ಯಾಟ್ ಮತ್ತು ಬಾಲ್ ನ್ನು ನೀಡಲಾಗುವುದು.
ಅಲ್ಲದೇ ಕಣ್ಣು ತಪಾಸಣೆ ಮಾಡಿ ಕನ್ನಡಕದ ಅವಶ್ಯಕತೆಯಿರುವ ಶಿಬಿರಾರ್ಥಿಗೆ ಕನ್ನಡಕವನ್ನು ಉಚಿತವಾಗಿ ನೀಡಲಾಗುವುದು ಮತ್ತು ಕಣ್ಣಿನ ಸರ್ಜರಿ ಮಾಡಬೇಕಾಗಿರುವ ಶಿಬಿರಾರ್ಥಿಗೆ ಉಚಿತವಾಗಿ ಕಣ್ಣಿನ ಸರ್ಜರಿಯನ್ನು ಕಣಚೂರು ಮೆಡಿಕಲ್ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನ ಕೇಂದ್ರ ನಾಟೆಕಲ್, ಉಳ್ಳಾಲ- ಮಂಗಳೂರು ಇಲ್ಲಿ ಮಾಡಿಕೊಡಲಾಗುವುದು. ಮತ್ತು ಆರೋಗ್ಯ ಶಿಬಿರದಲ್ಲಿ ಭಾಗವಹಿಸಿದ ವಿವಿಧ ರೀತಿಯ ಖಾಯಿಲೆಗೆ ತುತ್ತಾಗಿರುವ ಎಲ್ಲಾ ಶಿಬಿರಾರ್ಥಿಗಳಿಗೆ ಆಯಾ ಖಾಯಿಲೆಗೆ ಅನುಗುಣವಾಗಿ ಉಚಿತವಾಗಿ ಔಷಧಿಯನ್ನು ನೀಡಲಾಗುವುದು.

















ಇನ್ನಷ್ಟು ಸುದ್ದಿಗಳು
ಮಾದಕ ವಸ್ತು ‘ಖಾತ್’ ಮಾರಾಟ: ಭಾರತೀಯ ಪ್ರಜೆ ಸೌದಿಯಲ್ಲಿ ಬಂಧನ
ಅನಿವಾಸಿಗಳಿಗೆ ಶುಭ ಸುದ್ದಿ: ಕುವೈತ್ನಿಂದ ಭಾರತೀಯ ವಿಮಾನ ಸೇವೆಗಳು ಪುನರಾರಂಭ
ಟೋಲ್ ಪ್ಲಾಜಾ ಸಮೀಪದ ನಿವಾಸಿಗಳಿಗೆ ಗುಡ್ ನ್ಯೂಸ್: 20 ಕಿ.ಮೀ ವ್ಯಾಪ್ತಿಯವರಿಗೆ ಡಿಜಿಟಲ್ ಪಾಸ್ ಸೌಲಭ್ಯ!
ವಿಧಾನ ಪರಿಷತ್ ಚುನಾವಣೆ: ಕಾಂಗ್ರೆಸ್ಗೆ ಭರ್ಜರಿ ಗೆಲುವು- ಆಡಳಿತದ ಹಾದಿಗೆ ಸಿಕ್ಕ ಮುದ್ರೆ ಎಂದ ಸಿಎಂ ಡಿ.ಕೆ. ಶಿವಕುಮಾರ್
ಅಮೆರಿಕ-ಇರಾನ್ ಒಪ್ಪಂದ: ‘ಮಿಸ್ಟರ್ ಸೆಕ್ಯೂರಿಟಿ’ಗೆ ಭಾರಿ ಹಿನ್ನಡೆ- ನೆತನ್ಯಾಹು ರಾಜಕೀಯ ವರ್ಚಸ್ಸಿಗೆ ಧಕ್ಕೆ
‘ಪಶ್ಚಿಮ ಏಷ್ಯಾದಲ್ಲಿ ಶಾಂತಿಯ ಉದಯ’ ;ಅಮೆರಿಕ-ಇರಾನ್ ಕದನ ವಿರಾಮ ತಿಳುವಳಿಕಾ ಪತ್ರಕ್ಕೆ ಸಹಿ- ಹಾರ್ಮುಜ್ ಜಲಸಂಧಿ ಶೀಘ್ರದಲ್ಲೇ ಮುಕ್ತ
‘ಗಲ್ಫ್ ಪ್ರದೇಶದ ಸಂಘರ್ಷಗಳನ್ನು ಭಾರತಕ್ಕೆ ನಿರ್ಲಕ್ಷಿಸಲು ಸಾಧ್ಯವಿಲ್ಲ’ – ಭಾರತೀಯ ರಾಯಭಾರಿ ಡಾ. ಸುಹೈಲ್ ಅಜಾಝ್ ಖಾನ್
ಕೆಸಿಎಫ್ ಅಂತಾರಾಷ್ಟ್ರೀಯ ಸಮಿತಿ: ‘E-GEN ಸ್ಕಾಲರ್ಶಿಪ್’ ಗೆ ಅಧಿಕೃತ ಚಾಲನೆ
SIR ಪ್ರಕ್ರಿಯೆ: ಮತದಾರರ ಹಕ್ಕು ರಕ್ಷಣೆಗೆ ಸಿಪಿಐ(ಎಂ) ಆಗ್ರಹ- ಮುಖ್ಯಮಂತ್ರಿಗಳಿಗೆ ಮನವಿ
ಕೆಸಿಎಫ್ ಯುಎಇ: MRF ಯೋಜನೆಗೆ ಅಧಿಕೃತ ಚಾಲನೆ- 3,000ಕ್ಕೂ ಹೆಚ್ಚು ಸದಸ್ಯರ ಸೇರ್ಪಡೆ ಗುರಿ