ಬೆಳ್ತಂಗಡಿ; ಇತಿಹಾಸ ಪ್ರಸಿದ್ಧ ಕಾಜೂರ್ ದರ್ಗಾ ಶರಿಫ್ ಆಡಳಿತ ಸಮಿತಿಯ ವತಿಯಿಂದ ಪವಿತ್ರ ರಬೀವುಲ್ ಅವ್ವಲ್ ತಿಂಗಳಲ್ಲಿ ಉಮ್ರಾ ಯಾತ್ರೆ ಹೊರಟಿರುವವರಿಗೆ ಬೀಳ್ಕೊಡಿಗೆ ಕಾರ್ಯಕ್ರಮವು ಕಾಜೂರ್ ದರ್ಗಾ ವಠಾರದಲ್ಲಿ ನಡೆಯಿತು.
ದರ್ಗಾ ಸಮಿತಿ ಅಧ್ಯಕ್ಷ ಕೆ.ಯು ಇಬ್ರಾಹಿಂ ಅಧ್ಯಕ್ಷತೆ ವಹಿಸಿದ್ದ ಸಭೆಯನ್ನು ಕಾಜೂರ್ ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರ್ ಪ್ರಾರ್ಥನೆಗೆ ನೇತೃತ್ವ ನೀಡಿದರು.ಮುದರ್ರಿಸ್ ತೌಸೀಫ್ ಸಅದಿ ಹರೇಕಳ ಸಭೆಯನ್ನು ಉದ್ಘಾಟಿಸಿದರು. . ಕೆ.ಎಂ ಸಿದ್ದೀಕ್ ಮೋಂಟುಗೋಳಿ ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಉಮ್ರಾ ಯಾತ್ರೆ ಹೊರಟಿರುವ ಸಂಸ್ಥೆಯ ಪ್ರದಾನ ಕಾರ್ಯದರ್ಶಿ, ಜಿಲ್ಲಾ ವಕ್ಫ್ ಮಂಡಳಿ ಸದಸ್ಯರೂ ಆದ ಅಬೂಬಕ್ಕರ್ ಸಿದ್ದಿಕ್ ಜೆ.ಎಚ್, ಹಾಗೂ ಅವರ ತಂದೆ ಜೆ.ಎಚ್. ಅಬ್ಬಾಸ್, ಶಿಕ್ಷಣ ಸಂಸ್ಥೆಯ ಸಂಚಾಲಕರಾದ ಅಷ್ಫಾಕ್ ಹಾಗೂ ಅವರ ತಂದೆ ಕೆ.ಯು ಮಹಮ್ಮದ್ ರವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ದರ್ಗಾ ಆಡಳಿತ ಸಮಿತಿ ಪದಾಧಿಕಾರಿಗಳು ಸದಸ್ಯರುಗಳು, ಅಧೀನ ಸಂಸ್ಥೆಯ ಪದಾಧಿಕಾರಿಗಳು, ಸಂಸ್ಥೆಯ ಸಿಬ್ಬಂದಿಗಳು ಊರಿನ ಗಣ್ಯರು ಸಹಿತ ಹಲವರು ಉಪಸ್ಥಿತರಿದ್ದರು.