ಮಂಗಳೂರು: ಮಂಗಳೂರಿನ ಮಹೇಶ್ ಮೋಟರ್ರ್ಸ್ ನ ಮಾಲಕ ಪ್ರಕಾಶ್ ಶೇಖ(48) ಅವರು ಕದ್ರಿಕಂಬಳದ ತಮ್ಮ ಫ್ಲ್ಯಾಟ್ನಲ್ಲಿ ರವಿವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಖ್ಯಾತ ಸಾರಿಗೆ ಉದ್ಯಮಿ, ಬಸ್ ಮಾಲಕರ ಸಂಘದ ಮಾಜಿ ಅಧ್ಯಕ್ಷ ಜಯರಾಮ ಶೇಖ ಅವರ ಪುತ್ರರಾಗಿರುವ ಪ್ರಕಾಶ್ ಅವರು, ಉದ್ಯಮವನ್ನು ಯಶಸ್ವಿಯಾಗಿ ಮುನ್ನಡೆಸಿಕೊಂಡು ಬಂದಿದ್ದರು.
ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ, ‘ಮಹೇಶ್ ಮೋಟಾರ್ಸ್’ಗೆ ಸೇರಿದ ಅನೇಕ ಸಿಟಿ ಬಸ್ ಮತ್ತು ಜಿಲ್ಲಾ ಬಸ್ಗಳು ಪ್ರತಿದಿನವೂ ಸಂಚರಿಸುತ್ತಿದ್ದು, ಜನಪ್ರಿಯವಾಗಿದೆ.
ಫ್ಲ್ಯಾಟ್ನಲ್ಲಿ ಪತ್ನಿ ಮತ್ತು ಪುತ್ರಿಯೊಂದಿಗೆ ವಾಸವಾಗಿದ್ದ ಅವರು ರವಿವಾರ ಬೆಳಗ್ಗೆ ತನ್ನ ರೂಮ್ಗೆ ಹೋಗಿದ್ದರು. ಮಧ್ಯಾಹ್ನ ಊಟಕ್ಕೂ ಹೊರಗೆ ಬಂದಿರಲಿಲ್ಲ. ಪತ್ನಿ ಕರೆಯಲು ಹೋದಾಗ ಬಾಗಿಲು ತೆರೆಯಲಿಲ್ಲ. ಇದರಿಂದ ಸಂಶಯಗೊಂಡು ಬಾಗಿಲು ಒಡೆದು ನೋಡಿದಾಗ ಪ್ರಕಾಶ್ ಫ್ಯಾನ್ಗೆ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದು ಗೊತ್ತಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
ಘಟನೆ ಸಂಬಂಧ ಕದ್ರಿ ಪೊಲೀಸರು ಸ್ಥಳ ಮಹಜರು ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗೆಂದು ಆಸ್ಪತ್ರೆಗೆ ಕಳುಹಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಸಂತಾಪ
ಪ್ರಕಾಶ್ ಶೇಖ ಅವರ ನಿಧನಕ್ಕೆ ಸಿಟಿಬಸ್ ಮಾಲಕರ ಸಂಘದ ಅಧ್ಯಕ್ಷ ಅಜೀಜ್ ಪರ್ತಿಪಾಡಿ, ಪ್ರಧಾನ ಕಾರ್ಯದರ್ಶಿ ರಾಮಚಂದ್ರ ಪಿಲಾರ್, ಮಾಜಿ ಅಧ್ಯಕ್ಷರಾದ ಜಯಶೀಲ ಅಡ್ಯಂತಾಯ, ದಿಲ್ರಾಜ್ ಆಳ್ವ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ತಪ್ಪು ಮುನ್ನೆಚ್ಚರಿಕೆ ಸಂದೇಶ- ತಾಂತ್ರಿಕ ದೋಷಕ್ಕೆ ವಿಷಾದ ವ್ಯಕ್ತಪಡಿಸಿದ ಯುಎಇ
ಆರೋಪ-ಅಪಹಾಸ್ಯಗಳ ನಡುವೆ ಧೀಮಂತ ನಾಯಕತ್ವ: ಶಾಫಿ ಸಅದಿ ಉಸ್ತಾದರ ಮುಕ್ತ ಅನಿಸಿಕೆ
‘ಸಮಸ್ತ’: ಇತಿಹಾಸ ಮತ್ತು ವರ್ತಮಾನದ ನೆನಪುಗಳನ್ನು ಮೆಲುಕು ಹಾಕಿದ ನಾಯಕರು
ಅನಿವಾಸಿಗಳಿಗೆ ಭಾರಿ ಹೊಡೆತ; ಪಾಸ್ಪೋರ್ಟ್ ದರಗಳಲ್ಲಿ ಗಣನೀಯ ಹೆಚ್ಚಳ- ಪರಿಷ್ಕೃತ ಶುಲ್ಕ ಜುಲೈ 1 ರಿಂದ ಜಾರಿ
ಗಲ್ಫ್ ಸೇರಿದಂತೆ ವಿದೇಶದಿಂದ ಭಾರತಕ್ಕೆ ಆಗಮಿಸುವ ಪ್ರಯಾಣಿಕರಿಗೆ ‘ಏರ್ ಸುವಿಧಾ’ ಡಿಕ್ಲರೇಷನ್ ಕಡ್ಡಾಯ
ಪಾಸ್ಪೋರ್ಟ್ ಮತ್ತು ಪೌರತ್ವದ ವಿರೋಧಾಭಾಸ – ಜಗತ್ತಿಗೆ ಭಾರತೀಯ, ಸ್ವದೇಶದಲ್ಲೇ ಪ್ರಶ್ನಾರ್ಹ?
ಆಧಾರ್ ಮತ್ತು ಪಾಸ್ಪೋರ್ಟ್ ಪೌರತ್ವ ದಾಖಲೆಯಲ್ಲ: ಹಾಗಾದ್ರೆ ನಿಜವಾದ ದಾಖಲೆ ಯಾವುದು?
ಹಿರಿಯ ಧಾರ್ಮಿಕ ವಿದ್ವಾಂಸರಾದ ಖಾಝಿ ತ್ವಾಖಾ ಅಹ್ಮದ್ ಮುಸ್ಲಿಯಾರ್ ಅಲ್ ಅಝ್ಹರಿ ವಫಾತ್
ಅಂಜುಮಾನ್ ಸಿರಾಜುಲ್ ಇಸ್ಲಾಂ ಮದ್ರಸ ಮುಕ್ಕ- SBS ನೂತನ ಸಮಿತಿ ಅಸ್ತಿತ್ವಕ್ಕೆ
ರೆಸಿಡೆನ್ಸಿ ನಿಯಮ ತಿದ್ದುಪಡಿ- ವಿದೇಶಿಯರಿಗೆ ಇನ್ನು ಮುಂದೆ ಸ್ಪಾನ್ಸರ್ ರಹಿತವಾಗಿ ವೀಸಾ ಲಭ್ಯ