ಜುಬೈಲ್: ಉತ್ತರ ಕರ್ನಾಟಕ ಶೈಕ್ಷಣಿಕ ಚಳುವಳಿಯಲ್ಲಿ ಮಾದರಿ ಸೇವೆ ಸಲ್ಲಿಸುತ್ತಿರುವ ಮಸ್ದರ್ ಎಜು ಅಂಡ್ ಚಾರಿಟಿ ಇದರ ವತಿಯಿಂದ ‘ಪೈಗಾಮೆ ಪೈಗಂಬರ್’ﷺ ಕಾರ್ಯಕ್ರಮ ಜುಬೈಲ್ ಮಸ್ಕ್ ರೆಸಾರ್ಟ್ ನಲ್ಲಿ ನಡೆಯಿತು.
ಮೌಲಿದ್ ಮತ್ತು ದುಆದೊಂದಿಗೆ ಆರಂಭಗೊಂಡ ಸಭೆಯ ಅಧ್ಯಕ್ಷತೆಯನ್ನು ಮಸ್ದರ್ ಕಾರ್ಯಾಧ್ಯಕ್ಷ ಮೌಲಾನಾ ಅಬೂ ಸುಫ್ಯಾನ್ ಹೆಚ್ ಐ ಇಬ್ರಾಹಿಂ ಮದನಿ ಉಸ್ತಾದರು ವಹಿಸಿದ್ದರು.
ಡಿಕೆಎಸ್ಸಿ ನಾಯಕ ಜನಾಬ್ ಅಬ್ದುಲ್ ಹಮೀದ್ ಅರಾಮೆಕ್ಸ್ ಸಭೆಯನ್ನು ಉದ್ಘಾಟಿಸಿದರು. ಪ್ರಮುಖ ಎಂಜಿಟಿ ಅಂತರಾಷ್ಟ್ರೀಯ ಸಮಿತಿ ನಾಯಕ ಅಬ್ದುಲ್ ಸತ್ತಾರ್ ಜಯಪುರ ಹಾಗೂ ಕೆಸಿಎಫ್ ಜುಬೈಲ್ ಝೋನ್ ಅಧ್ಯಕ್ಷರಾದ ಅಝೀಝ್ ಸಅದಿ ಮಾತನಾಡಿ ಶುಭ ಹಾರೈಸಿದರು. ಕರ್ನಾಟಕ ಮುಸ್ಲಿಂ ಜಮಾಅತ್ ರಾಜ್ಯ ಪ್ರಧಾನ ಕಾರ್ಯದರ್ಶಿ ಅಬೂಸುಫ್ಯಾನ್ ಮದನಿ ಅಧ್ಯಕ್ಷ ಭಾಷಣ ಮಾಡಿದರು. ಹಾಗೂ ಮಸ್ದರ್ ಎಜು ಅಂಡ್ ಚಾರಿಟಿ ಇದರ ಕುರಿತು ಎಸ್ ಎಸ್ ಎಫ್ ರಾಜ್ಯಾಧ್ಯಕ್ಷ, ಮಸ್ದರ್ ಸಾರಥಿ ಹಾಫಿಲ್ ಸುಫ್ಯಾನ್ ಸಖಾಫಿ ಅಲ್ ಹಿಕಮಿ ವಿವರಿಸಿ ಮುಖ್ಯ ಪ್ರಭಾಷಣ ಮಾಡಿದರು.
ನಂತರ ಮಸ್ದರ್ ಜುಬೈಲ್ ಸಮಿತಿಯನ್ನು ಅಸ್ತಿತ್ವಕ್ಕೆ ತರಲಾಯಿತು.
ಗೌರವಾಧ್ಯಕ್ಷರಾಗಿ ಅಲ್ ಹಾಜ್ ಶರೀಫ್ ಸಾಮ್ಕೋನ್ ಕಳಸ ನಿರ್ದೇಶಕರಾಗಿ ಅಬ್ದುಲ್ ಹಮೀದ್ ಅರಾಮೆಕ್ಸ್, ಮುಹಮ್ಮದ್ ಅಲಿ ಗಲ್ಫ್ ಬೇಕರಿ, ಅಲ್ ಹಾಜ್ ಮುಹಮ್ಮದ್ ಕಮ್ಮರಡಿ.
ನೂತನ ಸಮಿತಿ ಅಧ್ಯಕ್ಷರಾಗಿ ಜನಾಬ್ ಖಲೀಲ್ ಜೋಕಟ್ಟೆ ಉಪಾಧ್ಯಕ್ಷರುಗಳಾಗಿ ಅಬ್ದುಲ್ ಅಝೀಝ್ ಸಅದಿ, ಶರೀಫ್ ಮಾರ್ನಾಡ್, ಇಸ್ಮಾಯಿಲ್ ಮುಸ್ಲಿಯಾರ್, ಪ್ರಧಾನ ಕಾರ್ಯದರ್ಶಿಯಾಗಿ ಅಸ್ಲಂ ಕಡಬಗೆರೆ ಕಾರ್ಯದರ್ಶಿಗಳಾಗಿ ತಸ್ರೀಫ್ ಕಣ್ಣಂಗಾರ್, ಶಫೀಕ್ ಕಾಟಿಪಳ್ಳ, ಕೋಶಾಧಿಕಾರಿಯಾಗಿ ಆಸಿಫ್ ಗೂಡಿನಬಳಿ ರವರನ್ನು ಆಯ್ಕೆ ಮಾಡಲಾಯಿತು.
ನೌಫಲ್ ಬಜಾಲ್, ಇಕ್ಬಾಲ್ ಬೈಲೂರು, ಅಬ್ದುಲ್ ಖಾದರ್ ತೀರ್ಥಹಳ್ಳಿ, ಆಸಿಫ್ ಕೃಷ್ಣಾಪುರ, ಇಕ್ಬಾಲ್ ಮಲ್ಲೂರು, ಮಹಮ್ಮದ್ ರಫಿ ಮಸ್ತಿ ಕಟ್ಟೆ ,ಅಬೂಬಕ್ಕರ್ ಮೂಡಿಗೆರೆ, ಹುದೈಫ್ ಕಳಸ, ಬಶೀರ್ ಕಟ್ಟಿಪ್ಪಳ, ಮುಝಮ್ಮಿಲ್ ಮೂಡಬಿದ್ರಿ , ಅಶ್ರಫ್ ನಾಳ ರವರನ್ನು ಕಾರ್ಯಕಾರಿ ಸಮಿತಿ ಸದಸ್ಯರನ್ನಾಗಿ ಆಯ್ಕೆ ಮಾಡಲಾಯಿತು.
ಇಕ್ಬಾಲ್ ಮಲ್ಲೂರು ಕಾರ್ಯಕ್ರಮ ನಿರೂಪಿಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ಸೌದಿಯ ವೈಮಾನಿಕ ದಾಳಿ ಇರಾಕಿ ಜನತೆ ಅಥವಾ ಸರ್ಕಾರದ ವಿರುದ್ಧವಲ್ಲ- ಸೌದಿ ಅರೇಬಿಯಾ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಇಸ್ರೇಲಿ ಉತ್ಪನ್ನಗಳ ಆಮದು ನಿಷೇಧ: ಐರ್ಲೆಂಡ್ ಕ್ರಮವನ್ನು ಸ್ವಾಗತಿಸಿದ ಕತಾರ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಪ್ರಾದೇಶಿಕ ಮಟ್ಟದಲ್ಲಿ ಅನಿಶ್ಚಿತತೆ: ಮೂರು ಗಲ್ಫ್ ದೇಶಗಳಿಗೆ ವಿಮಾನ ಸೇವೆ ಸ್ಥಗಿತ
ಅನಿವಾಸಿ ಭಾರತೀಯರ ಪಾಸ್ಪೋರ್ಟ್ ಶುಲ್ಕ ಹೆಚ್ಚಳ: ಮೂರು ವಾರಗಳಲ್ಲಿ ನಿರ್ಧಾರ ತಿಳಿಸುವಂತೆ ಕೇಂದ್ರಕ್ಕೆ ಕೋರ್ಟ್ ನಿರ್ದೇಶನ
ಹೋರ್ಮುಜ್ ಮೂಲಕ ಸುರಕ್ಷಿತ ಸಾರಿಗೆ- ಪ್ರಮುಖ ಚರ್ಚೆಗಾಗಿ ಇರಾನ್ಗೆ ತಲುಪಿದ ಒಮಾನ್ ನಿಯೋಗ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್