ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದುಬೈಗೆ ಹೊರಟಿದ್ದ ವಿಮಾನವನ್ನು ಹೈಜಾಕ್ ಮಾಡುವುದಾಗಿ ಇ- ಮೇಲ್ ಮೂಲಕ ಬೆದರಿಕೆ ಹಾಕಿದ ಕಾರಣ ವಿಮಾನ ಪ್ರಯಾಣವನ್ನು ರದ್ದುಗೊಳಿಸಿದ ಪ್ರಕರಣವು ನಿನ್ನೆ ವರದಿಯಾಗಿದೆ.
ವಿಮಾನ ನಿಲ್ದಾಣದ ವ್ಯವಸ್ಥಾಪಕರಿಗೆ, ಭಾನುವಾರ ಸಂಜೆ ‘ದುಬೈಗೆ ಹೊರಟಿರುವ ವಿಮಾನದಲ್ಲಿ ಐಎಸ್ಐ ಉಗ್ರರಿಗೆ ಮಾಹಿತಿ ನೀಡುವ ವ್ಯಕ್ತಿಯಿದ್ದಾನೆ, ಆತ ವಿಮಾನವನ್ನು ಹೈಜಾಕ್ ಮಾಡಲಿದ್ದಾನೆ, ಅಲ್ಲದೆ ಆತ ವಿಮಾನ ನಿಲ್ದಾಣದಿಂದಲೇ ಕೆಲವು ಜನರ ಸಹಾಯವನ್ನು ಪಡೆದಿದ್ದಾನೆ’ ಎಂದು ಸುಳ್ಳು ಬೆದರಿಕೆ ಇ- ಮೇಲ್ ಕಳುಹಿಸಲಾಗಿತ್ತು.
ಈ ಬಗ್ಗೆ ತನಿಖೆ ನಡೆಸಿದ ಹಿರಿಯ ಪೊಲೀಸ್ ಕಮಿಷನರ್, ಇದೊಂದು ನಕಲಿ ಇ-ಮೇಲ್ ಬೆದರಿಕೆ ಎಂದು ಪತ್ತೆ ಮಾಡಿದ್ದು, ಹೆಚ್ಚಿನ ತನಿಖೆ ಆರಂಭಿಸಿದ್ದಾರೆ. ಬೆದರಿಕೆ ಕರೆಯಿಂದ ವಿಮಾನ ರದ್ದುಪಡಿಸಿ ಪ್ರಯಾಣಕರಿಗೆ ಪ್ರತ್ಯೇಕ ವಿಮಾನದ ವ್ಯವಸ್ಥೆ ಮಾಡಲಾಗಿದೆ.
ಅನುಮಾನ ಬಂದ ಹಿನ್ನೆಲೆಯಲ್ಲಿ ತಿರುಪತಿ ಬಾದಿನೇನಿ, ಎಲ್ ವಿನೋದ್ ಕುಮಾರ್ ಮತ್ತು ಆರ್ ರಾಕೇಶ್ ಕುಮಾರ್ ಅವರನ್ನು ವಿಮಾನ ನಿಲ್ದಾಣ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅವರು ಹೇಳಿದರು. ಇದಲ್ಲದೆ, ತಿರುಪತಿ ಬಾದಿನೇನಿ ಅವರನ್ನು ಭೇಟಿ ಮಾಡಲು ಬಂದಿದ್ದ ಮಹಿಳೆಯನ್ನು ಸಹ ವಿಚಾರಣೆ ನಡೆಸಲಾಗುವುದು ಎಂದಿದ್ದಾರೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್