ದುಬೈ: ಕರ್ನಾಟಕ ಕಲ್ಚರಲ್ ಫೌಂಡೇಶನ್ ಕೆಸಿಎಫ್ ದುಬೈ ಸೌತ್ ಝೋನ್ ವತಿಯಿಂದ ಗ್ರಾಂಡ್ ಮೀಲಾದ್ ಸಮ್ಮೇಳನವು ಅ. 08 ಭಾನುವಾರ ಬರ್ ದುಬೈ ಹಾಲಿಡೇ ಹೋಟೇಲಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿದ ಕಮಾಲಿಯ ವಿಧ್ಯಾ ಸಮುಚ್ಚಯಗಳ ಸಂಸ್ಥಾಪಕ ಸಯ್ಯಿದ್ ಝೈನುದ್ದೀನ್ ಅಲ್ ಬುಖಾರಿ ಮಾತನಾಡಿ “ವಿಶ್ವ ಪ್ರವಾದಿ ಮುಹಮ್ಮದರ ಜನ್ಮ ದಿನಾಚರಣೆಯನ್ನು ವಿಶ್ವದೆಲ್ಲೆಡೆ ಆಚರಿಸುವಾಗ ಅವರ ತತ್ವಾದರ್ಶಗಳು, ಜೀವನ ಪಾಠಗಳು ಹಾಗೂ ಮಾನವೀಯ ಮೌಲ್ಯಗಳ ಕುರಿತು ಎಲ್ಲರಿಗೂ ತಿಳಿಸಬೇಕು. ಪ್ರವಾದಿಯವರ ಜೀವನ ಶೈಲಿ ಪ್ರಸ್ತುತ ಜಗತ್ತಿಗೆ ಅನಿವಾರ್ಯವಾಗಿದ್ದು, ಈ ನಿಟ್ಟಿನಲ್ಲಿ ಕೆಸಿಎಫ್ ಸಂಘಟನೆಯು ವಿವಿಧ ಧಾರ್ಮಿಕ ಕಾರ್ಯಕ್ರಮ ಹಾಗೂ ತರಗತಿಗಳ ಮೂಲಕ ಅನಿವಾಸಿ ಕನ್ನಡಿಗರಿಗೆ ಪ್ರವಾದಿಯವರ ಬಗ್ಗೆ ಅರಿವು ಮೂಡಿಸುವಲ್ಲಿ ಅಪೂರ್ವ ಯಶಸ್ವಿ ಸಾಧಿಸಿದೆ” ಎಂದು ಹೇಳಿದರು.
ಕಾರ್ಯಕ್ರಮವನ್ನು ಉಧ್ಘಾಟಿಸಿ ಮಾತನಾಡಿದ ಕೆಸಿಎಫ್ ಯುಎಇ ಅಧ್ಯಕ್ಷ ಇಬ್ರಾಹಿಂ ಸಖಾಫಿ “ಕರ್ನಾಟಕ ರಾಜ್ಯ ವಿವಿಧ ಶಿಕ್ಷಣ ಸಂಸ್ಥೆಗಳ ಉನ್ನತಿಗಾಗಿ ಕೆಸಿಎಫ್ ಶ್ರಮಿಸುತ್ತಿದ್ದು, ಶೈಕ್ಷಣಿಕವಾಗಿ ಹಿಂದುಳಿದ ಜಿಲ್ಲೆಗಳಲ್ಲಿ ಶಿಕ್ಷಣ ಸಂಸ್ಥೆಗಳ ಶೈಕ್ಷಣಿಕ ವ್ಯಾಪ್ತಿಯನ್ನು ವಿಸ್ತರಿಸಿದ್ದು, ಅವುಗಳ ಬೆಳವಣಿಗೆಗೆ ಕೆಸಿಎಫ್ ಸದಾ ಮುಂಚೂಣಿಯಲ್ಲಿರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಸಮಾರಂಭದಲ್ಲಿ ಸಯ್ಯಿದ್ ತ್ವಾಹಾ ತಂಙಳ್ ಪೂಕೊಟೂರ್ ಬಳಗದಿಂದ ಅತ್ಯಾಕರ್ಷಕ ಬುರ್ದಾ ಆಲಾಪನೆ ನಡೆಯಿತು. ಮುಹಮ್ಮದ್ ಅಲಿ ಕನ್ಯಾನ ರಚಿತ, ಕೆಸಿಎಫ್ ದುಬೈ ಸೌತ್ ಝೋನ್ ಪ್ರಕಾಶಿತ, ಮಲಯಾಳಂ ಗಾಯಕ ಶಾಹಿನ್ ಬಾಬು ತಾನೂರು ಹಾಡಿದ ಕೆಸಿಎಫ್ ಸೇವೆಗಳ ಕುರಿತಾದ ಕನ್ನಡ ಹಾಡನ್ನು ಬಿಡುಗಡೆಗೊಳಿಸಲಾಯಿತು.
ಕಾರ್ಯಕ್ರಮದಲ್ಲಿ ಕೆಸಿಎಫ್ ಯುಎಇ ನಾಯಕರಾದ ಮೂಸಾ ಹಾಜಿ ಬಸರ, ಝೈನುದ್ದೀನ್ ಹಾಜಿ ಬೆಳ್ಳಾರೆ, ಸ್ವಾಗತ ಸಮಿತಿ ಅಧ್ಯಕ್ಷ ಇಕ್ಬಾಲ್ ಸಿದ್ದಕಟ್ಟೆ, ಕೆಸಿಎಫ್ ದುಬೈ ಸೌತ್ ಝೋನ್ ಅಧ್ಯಕ್ಷ ಇಲ್ಯಾಸ್ ಮದನಿ ಬರ್ಶ, ಕೋಶಾಧಿಕಾರಿ ರಝಕ್ ಹಾಜಿ, ನಝೀರ್ ಹಾಜಿ ಕೆಮ್ಮಾರ ಸೇರಿದಂತೆ ಕೆಸಿಎಫ್ ಯುಎಇಯ ವಿವಿಧ ಝೋನ್ಗಳ ನಾಯಕರು ಹಾಗೂ ಪದಾಧಿಕಾರಿಗಳು ಬಾಗವಹಿಸಿದ್ದರು.

















ಇನ್ನಷ್ಟು ಸುದ್ದಿಗಳು
ಸೌದಿಯಲ್ಲಿ ತೀವ್ರ ತಾಪಮಾನ: ವಾಹನಗಳಲ್ಲಿ ಬೆಂಕಿ ಹೊತ್ತಿಕೊಳ್ಳುವ ವಸ್ತುಗಳನ್ನು ಇಡದಂತೆ ಸಿವಿಲ್ ಡಿಫೆನ್ಸ್ ಎಚ್ಚರಿಕೆ
ಪವಿತ್ರ ಕಅಬಾಗೆ ತೊಡಿಸುವ ಕಿಸ್ವಾದ ಹಿಂದಿರುವ ಅದ್ಭುತ ರಹಸ್ಯಗಳ ಬಗ್ಗೆ ನಿಮಗೆ ಗೊತ್ತೇ?
ಅನಿವಾಸಿಗಳಿಗೆ ನೆಮ್ಮದಿ: ಕುವೈತ್ ವಿಮಾನ ನಿಲ್ದಾಣದಲ್ಲಿ ವಿದೇಶಿ ವಿಮಾನಗಳ ಸಂಚಾರಕ್ಕೆ ಅನುಮತಿ
ಅಮೆರಿಕ-ಇರಾನ್ ಕದನ ವಿರಾಮ ಒಪ್ಪಂದ – ಸೌದಿ ಅರೇಬಿಯಾ ಸ್ವಾಗತ
ಸೌದಿಯಲ್ಲಿ ತಪಾಸಣೆ ತೀವ್ರ: ಒಂದೇ ವಾರದಲ್ಲಿ 10,700 ನಿಯಮ ಉಲ್ಲಂಘಕರ ಬಂಧನ- 8,000 ಮಂದಿ ಗಡೀಪಾರು
ದುಬೈ ಏರ್ಪೋರ್ಟ್ನಲ್ಲಿ ಅನಾಥ ಬ್ಯಾಗ್: ಓಪನ್ ಮಾಡಿದ ಅಧಿಕಾರಿಗಳಿಗೆ ಶಾಕ್- ಒಳಗೇನಿತ್ತು ಗೊತ್ತೇ?
ದುಬೈ ಮಿನಿಬಸ್ ಅಪಘಾತ: ಆರು ಮಂದಿ ಭಾರತೀಯರು ಸಹಿತ ಎಂಟು ಮಂದಿ ಮೃತ್ಯು
ಸೌದಿ ಅರೇಬಿಯಾದಲ್ಲಿ ತೀವ್ರಗೊಂಡ ಬಿಸಿಲಿನ ಬೇಗೆ- ಹವಾಮಾನ ಇಲಾಖೆಯಿಂದ ಹೈ ಅಲರ್ಟ್!
ಅಪಾರ್ಟ್ಮೆಂಟ್ ಕೇಂದ್ರೀಕರಿಸಿ ಅನೈತಿಕ ಚಟುವಟಿಕೆ- ನಜ್ರಾನ್ನಲ್ಲಿ 12 ವಿದೇಶಿಗರ ಬಂಧನ
ಕುವೈತ್ ವಿಮಾನ ನಿಲ್ದಾಣದ ಮೇಲೆ ದಾಳಿ: ಗಾಯಗೊಂಡವರಲ್ಲಿ 13 ಮಂದಿ ಭಾರತೀಯರು