ಬೆಂಗಳೂರು : ಉದ್ಯಮಿಗೆ 5 ಕೋಟಿ ವಂಚಿಸಿದ ಚೈತ್ರಾ ಅಂಡ್ ಗ್ಯಾಂಗ್ ಸದ್ಯ ಜೈಲು ಸೇರಿದ್ದಾರೆ. ಇದೀಗ ಪ್ರಕರಣಕ್ಕೆ ಸಂಬಂಧಿಸಿದಂತೆ ವಜ್ರದೇಹಿ ಸ್ವಾಮೀಜಿಗೆ ಸಿಸಿಬಿ ನೋಟಿಸ್ ನೀಡಿದೆ.
ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ಬೈಂದೂರಿನ ಬಿಜೆಪಿ ಟಿಕೇಟ್ ನೀಡುವ ವಿಚಾರವಾಗಿ ಡೀಲ್ ನಡೆದು ಚೈತ್ರ ಕುಂದಾಪುರ ಬಂಧನ ಆದ ನಂತರ ಚೈತ್ರ ಇಡಿ ಗೆ ಬರೆದ ಪತ್ರದಲ್ಲಿ ವಜ್ರಾದೇಹಿ ಶ್ರೀ, ಚಕ್ರವರ್ತಿ ಸೂಲಿಬೆಲೆ, ಹಾಗೂ ಸಿಟಿ ರವಿ ಹೆಸರು ಉಲ್ಲೇಖವಾಗಿತ್ತು.
ಮಂಗಳೂರಿನ ಗುರುಪುರದಲ್ಲಿರುವ ವಜ್ರದೇಹಿ ಮಠದ ರಾಜಶೇಖರಾನಂದ ಸ್ವಾಮೀಜಿಗೆ ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ. ಸದ್ಯದಲ್ಲೇ ವಜ್ರದೇಹಿ ಸ್ವಾಮೀಜಿ ಸಿಸಿಬಿ ವಿಚಾರಣೆ ಎದುರಿಸಲಿದ್ದಾರೆ.
ಗೋವಿಂದ ಪೂಜಾರಿ ಟಿಕೆಟ್ ಪ್ರಕರಣಕ್ಕೆ ಸಂಬಂಧಿಸಿ ರಾಜಶೇಖರಾನಂದ ಸ್ವಾಮೀಜಿ ಅವರು ತನಗೆ ಫೋನ್ ಮಾಡಿದ್ದರು ಎಂದು ಚೈತ್ರಾ ಅವರು ಆದಾಯ ತೆರಿಗೆ ಇಲಾಖೆಗೆ ಬರೆದಿದ್ದಾರೆ ಎನ್ನಲಾದ ಪತ್ರದಲ್ಲಿ ಉಲ್ಲೇಖವಾಗಿತ್ತು.
ಬೆಂಗಳೂರು ನಗರ ಸಿಸಿಬಿ ಮಹಿಳಾ ಸಂರಕ್ಷಣಾ ತನಿಖಾಧಿಕಾರಿ ಮುಂದೆ ಹಾಜರಾಗುವಂತೆ ಬೆಂಗಳೂರು ಸಿಸಿಬಿ ಸಹಾಯಕ ಪೊಲೀಸ್ ಕಮಿಷನರ್ ರವರಾದ ರೀನಾ ಸುವರ್ಣ ಅವರು ವಜ್ರಾದೇಹಿ ಶ್ರಿಗಳಿಗೆ ನೋಟಿಸ್ ಜಾರಿ ಮಾಡಿದ್ದಾರೆ.
ಪ್ರಕರಣದ ಪ್ರಧಾನ ಆರೋಪಿಯಾಗಿರುವ ಚೈತ್ರಾ ಎರಡನೇ ಆರೋಪಿ ಗಗನ್ ಕಡೂರು, ನಾಲ್ಕನೇ ಆರೋಪಿ ರಮೇಶ್ ಕಡೂರು, ಐದನೇ ಆರೋಪಿ ಚನ್ನಾ ನಾಯ್ಕ ಆರನೇ ಆರೋಪಿ ಧನರಾಜ್ ಏಳನೇ ಆರೋಪಿ, ಚೈತ್ರಾ ಕುಂದಾಪುರಳ ಆಪ್ತ ಗೆಳೆಯ ಶ್ರೀಕಾಂತ್ ನಾಯಕ್ ಹಾಗೂ ಎಂಟನೇ ಆರೋಪಿ ಪ್ರಸಾದ್ ಬೈಂದೂರು ಅವರು 10 ದಿನಗಳ ಸಿಸಿಬಿ ಕಸ್ಟಡಿ ಮುಗಿಸಿದ್ದು, ನಂತರ ಅವರನ್ನು ಪರಪ್ಪನ ಅಗ್ರಹಾರಕ್ಕೆ ಶಿಫ್ಟ್ ಮಾಡಲಾಗಿತ್ತು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್