ಖಮೀಸ್ ಮುಷೈತ್: ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬೆಂಗಳೂರಿನ ನಯಾಝ್ ಭಾಯಿ ಎಂಬವರು ಪಾಸ್ಪೋರ್ಟ್ ನವೀಕರಣೆಗಾಗಿ ನೀಡಿರುವುದರಿಂದ ಊರಿಗೆ ತೆರಳಲು ಸಾಧ್ಯವಾಗದೆ ಸಂಕಷ್ಟಕ್ಕೆ ಸಿಲುಕಿರುವ ಸಂದರ್ಭದಲ್ಲಿ ಕೆಸಿಎಫ್ ಕಾರ್ಯಕರ್ತರ ನಿರಂತರ ಪರಿಶ್ರಮದಿಂದ ಸಕಾಲಕ್ಕೆ ಊರಿಗೆ ತೆರಳಲು ಸಾಧ್ಯವಾಯಿತು.
ಸೌದಿ ಅರೇಬಿಯಾದ ಖಮೀಸ್ ಮುಷೈತ್ ನ ಸಂಸ್ಥೆಯೊಂದರಲ್ಲಿ ಉದ್ಯೋಗಿಯಾಗಿದ್ದ ನಯಾಝ್ ಭಾಯಿ ಅವರು ಹಠಾತ್ ಆಗಿ ಗಂಭೀರ ರೋಗಕ್ಕೆ ತುತ್ತಾಗಿದ್ದರು. ರೋಗದ ಗಾಂಭೀರ್ಯತೆ ಕಾರಣ ಸರ್ಕಾರೀ ಆಸ್ಪತ್ರೆ ಚಿಕಿತ್ಸೆ ನಿರಾಕರಿಸಿ, ಖಾಸಗೀ ಆಸ್ಪತ್ರೆಗೆ ದಾಖಲಿಸುವಂತೆ ಕೇಳಿದೆ.
ಆದರೆ, ಅವರ ಕೈಯಲ್ಲಿ ಇನ್ಶೂರೆನ್ಸ್ ಇಲ್ಲದ ಕಾರಣ ಬಲು ದೊಡ್ಡ ಆಸ್ಪತ್ರೆ ಶುಲ್ಕವನ್ನು ಪಾವತಿಸುವುದು ಕಷ್ಟಕರವಾದ ಸಂಗತಿ. ಖಾಸಗೀ ಆಸ್ಪತ್ರೆಯ ವೈದ್ಯರು ಮೂರು ದಿನದೊಳಗೆ ಇವರನ್ನು ಊರಿಗೆ ಕಳಿಸಿಕೊಡಿ ಇಲ್ಲದಿದ್ದರೆ ಇಲ್ಲೇ ಶಸ್ತ್ರಚಿಕಿತ್ಸೆಗೆ ತಯಾರಿ ನಡೆಸಬೇಕು ಎಂದಿದ್ದು, ವಿಳಂಬವಾದರೆ ಜೀವಕ್ಕೆ ಅಪಾಯವಿದೆ ಎಂದು ಎಚ್ಚರಿಸಿದ್ದಾರೆ.
ಊರಿಗೆ ಕಳಿಸಲು ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಕಾರ್ಯಕರ್ತರು ಶ್ರಮಿಸುತ್ತಿರುವ ಮಧ್ಯೆ ಅವರ ಪಾಸ್ಪೋರ್ಟ್ ನ್ನು ನವೀಕರಣೆಗೆ ನೀಡಿರುವ ವಿವರ ಲಭಿಸಿದೆ. ಕೂಡಲೇ ಭಾರತೀಯ ಕಾನ್ಸುಲೇಟ್ ನ್ನು ಸಂಪರ್ಕಿಸಿದ ಕೆಸಿಎಫ್ ಕಾರ್ಯಕರ್ತರು, ಶೀಘ್ರ ಪಾಸ್ಪೋರ್ಟ್ ಲಭಿಸುವಂತೆ ಮನವಿ ಮಾಡಿದ್ದಾರೆ.
ಏತನ್ಮಧ್ಯೆ, ಎಕ್ಸಿಟ್ ಪಾಸ್ಪೋರ್ಟ್ ಪಡೆದು ಊರಿಗೆ ಕಳಿಸುವ ಬಗ್ಗೆಯೂ ಆಲೋಚಿಸಿದ್ದು, ಅದರಿಂದ ಮತ್ತೆ ಸೌದಿಗೆ ಬರಲು ಅಸಾಧ್ಯವಾದ ಹಿನ್ನೆಲೆಯಲ್ಲಿ ನವೀಕರಣೆಗಾಗಿ ನೀಡಿದ ಪಾಸ್ಪೋರ್ಟ್ ನ್ನೇ ಪಡೆಯಲು ಕೆಸಿಎಫ್ ಕಾರ್ಯಕರ್ತರು ತೀವ್ರ ಶ್ರಮ ಮುಂದುವರಿಸಿ, ಕೇವಲ 24 ಗಂಟೆಯಲ್ಲೇ ಪಾಸ್ಪೋರ್ಟ್ ಪಡೆಯುವಲ್ಲಿ ಯಶಸ್ವಿಯಾಗಿದ್ದು, ಕೂಡಲೇ ನಯಾಝ್ ಭಾಯಿ ಅವರನ್ನು ಊರಿಗೆ ಕಳಿಸಿಕೊಟ್ಟಿದ್ದಾರೆ. ಕರ್ನಾಟಕ ಕಲ್ಚರಲ್ ಫೌಂಡೇಶನ್ (ಕೆಸಿಎಫ್) ಕಾರ್ಯಕರ್ತರ ನಿರಂತರ ಪರಿಶ್ರಮಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ನಯಾಝ್ ಭಾಯಿ ಮತ್ತು ಅವರ ಕುಟುಂಬಸ್ಥರು ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ