ಕೊಚ್ಚಿ: ಲುಲು ಮಾಲ್ನಲ್ಲಿ ಪ್ರದರ್ಶಿಸಿದ ಪಾಕಿಸ್ತಾನದ ಧ್ವಜವು ಭಾರತದ ಧ್ವಜಕ್ಕಿಂತ ದೊಡ್ಡದಾಗಿದೆ ಎಂಬ ಸುಳ್ಳು ಸುದ್ದಿಯಿಂದಾಗಿ ಲುಲು ಮಾರ್ಕೆಟಿಂಗ್ ಮ್ಯಾನೇಜರ್ ಕೆಲಸ ಕಳೆದುಕೊಂಡಿದ್ದಾರೆ. ಹತ್ತು ವರ್ಷಕ್ಕೂ ಹೆಚ್ಚು ಕಾಲ ಲುಲು ಬ್ರ್ಯಾಂಡ್ ಮಾನ್ಯತೆ ನೋಡಿಕೊಳ್ಳುತ್ತಿದ್ದ ಆತಿರಾ ನಂಬ್ಯಾದಿರಿ ಅವರು ನಕಲಿ ಸುದ್ದಿಯಿಂದಾಗಿ ಕೆಲಸ ಕಳೆದುಕೊಂಡಿದ್ದಾರೆ. ಈ ಬಗ್ಗೆ ಸ್ವತಃ ಆತಿರಾ ತಮ್ಮ ಲಿಂಕ್ಡ್ಇನ್ ಖಾತೆ ಮೂಲಕ ಮಾಹಿತಿ ನೀಡಿದ್ದಾರೆ.
ಒಂದು ದಶಕದಿಂದ ಕಂಪನಿಯಲ್ಲಿ ಕೆಲಸ ಮಾಡಿದ ನಾನು ಸುಳ್ಳು ಪ್ರಚಾರದಿಂದ ಕೆಲಸ ಕಳೆದುಕೊಂಡೆ, ಭಾರತೀಯಳಾಗಿ ನಾನು ಹೆಮ್ಮೆ ಪಡುತ್ತೇನೆ ಮತ್ತು ಈ ದೇಶದ ಪ್ರಜೆಯಾಗಿ ತನ್ನ ದೇಶದ ಬಗ್ಗೆ ಆಳವಾದ ಪ್ರೀತಿಯನ್ನು ಹೊಂದಿದ್ದೇನೆ ಎಂದು ಆತಿರಾ ತಮ್ಮ ಪೋಸ್ಟ್ನಲ್ಲಿ ಹೇಳಿದ್ದಾರೆ.
ದ್ವೇಷವನ್ನು ಹರಡುವುದು ಮತ್ತು ವ್ಯಕ್ತಿಗಳ ಜೀವನ ಮತ್ತು ಕೆಲಸವನ್ನು ನಾಶಮಾಡುವ ಚಟುವಟಿಕೆಗಳಿಂದ ದೂರವಿರಲು ಎಲ್ಲರೊಂದಿಗೆ ಮನವಿ ಮಾಡುತ್ತೇನೆ. ಇದರಿಂದ ತನಗೆ ನಷ್ಟ ಉಂಟಾಗಿದೆ, ಆದರೆ ಈ ದ್ವೇಷಕ್ಕೆ ಯಾರೂ ಒಳಗಾಗಬಾರದು ಎಂದು ಆತಿರಾ ತಮ್ಮ ಪೋಸ್ಟ್ ಅನ್ನು ಕೊನೆಗೊಳಿಸಿದ್ದಾರೆ.

ಲುಲು ಮಾಲ್ನಲ್ಲಿ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸುತ್ತಿರುವ ವಿವಿಧ ತಂಡಗಳ ಧ್ವಜಗಳನ್ನು ಪ್ರದರ್ಶಿಸಲಾಗಿತ್ತು. ಕೆಲವು ಚಿತ್ರಗಳಲ್ಲಿ ಧ್ವಜವು ದೊಡ್ಡದು ಮತ್ತು ಚಿಕ್ಕದಾಗಿ ಕಾಣಿಸುತ್ತದೆ. ಏಕೆಂದರೆ ಅವುಗಳನ್ನು ವಿವಿಧ ಎತ್ತರಗಳಲ್ಲಿ ಇರಿಸಲಾಗಿದೆ. ಆದರೆ ವಾಸ್ತವವಾಗಿ ಅವೆಲ್ಲವೂ ಒಂದೇ ಗಾತ್ರದಲ್ಲಿದೆ. ಫೋಟೋದ ಕೋನವನ್ನು ಅವಲಂಬಿಸಿ ಗಾತ್ರದಲ್ಲಿ ಕಂಡುಬರುವ ವ್ಯತ್ಯಾಸವನ್ನು ಹಿಂದುತ್ವವಾದಿಗಳು ನಕಲಿ ಸುದ್ದಿಗಳನ್ನು ಹರಡಲು ದುರುಪಯೋಗಪಡಿಸಿಕೊಂಡರು. ಈ ಸುಳ್ಳು ಸುದ್ದಿಯನ್ನು ಏಷ್ಯಾನೆಟ್ ಕನ್ನಡ ಆವೃತ್ತಿ ಸುವರ್ಣ ನ್ಯೂಸ್ ಮತ್ತು ಹಿಂದುತ್ವವಾದಿ ಪ್ರತಿಶ್ ವಿಶ್ವನಾಥನ್ ಹಬ್ಬಿಸಿದ್ದಾರೆ.
ಸುವರ್ಣ ನ್ಯೂಸ್ ವಿರುದ್ಧವಾಗಿ ಸ್ವತಃ ಏಷ್ಯಾನೆಟ್ ಮಲಯಾಳಂ ವಾರ್ತೆಯಲ್ಲಿ ಫ್ಯಾಕ್ಟ್ ಚೆಕ್ ಮೂಲಕ ಇದು ಸುಳ್ಳು ಸುದ್ದಿಯೆಂದು ವರದಿಮಾಡಿದೆ.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ
“ನಾವು ಭಾರತೀಯರೆಂದು ಹೇಳಿರಲಿಲ್ಲವೇ?”- ಬಾಂಗ್ಲಾದೇಶಕ್ಕೆ ಗಡೀಪಾರು ಮಾಡಲಾಗಿದ್ದ ಕುಟುಂಬಗಳು ವಾಪಸ್