ಕೋಝಿಕ್ಕೋಡ್ | ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲಿ ಆಕ್ರಮಣಗಳು ಮತ್ತು ದಾಳಿಗಳು ಹೆಚ್ಚುತ್ತಿರುವ ಮಧ್ಯೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್, ಪ್ಯಾಲೇಸ್ಟಿನಿಯನ್ ಮುಫ್ತಿ ಮತ್ತು ವಿದ್ವಾಂಸ ಶೈಖ್ ಮುಹಮ್ಮದ್ ಹುಸೈನ್ ಅವರೊಂದಿಗೆ ಮಾತುಕತೆ ನಡೆಸಿದರು. ಪ್ರಸ್ತುತ ಯುದ್ಧದ ಪರಿಸ್ಥಿತಿ ಮತ್ತು ಪ್ಯಾಲೇಸ್ಟಿನಿಯನ್ನರ ಆತಂಕದ ವಾತಾವರಣ ಬಗ್ಗೆ ವಿಚಾರಿಸಿದ ಗ್ರ್ಯಾಂಡ್ ಮುಫ್ತಿ, ಭಾರತೀಯ ಜನತೆಯ ಹೃತ್ಪೂರ್ವಕ ಕಾಳಜಿ, ಬೆಂಬಲ ಮತ್ತು ಪ್ರಾರ್ಥನೆಗಳನ್ನು ತಿಳಿಸಿದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ಯಾಲೆಸ್ಟೀನಿಯನ್ನರ ಸಂಕಟ ಮತ್ತು ಅವರ ಹಕ್ಕುಗಳನ್ನು ಅತ್ಯಂತ ಪ್ರಾಮಾಣಿಕತೆಯಿಂದ ಅರ್ಥಮಾಡಿಕೊಂಡ ಭಾರತ, ಅದೇ ನಿಲುವಿನೊಂದಿಗೆ ಮುಂದುವರಿಯತ್ತಿದೆ ಎಂಬುದನ್ನು ಖಚಿತಪಡಿಸುವ ಕ್ರಮಗಳನ್ನು ನಿರೀಕ್ಷಿಸುತ್ತಿರುವುದಾಗಿ ಶೈಖ್ ಮುಹಮ್ಮದ್ ಹುಸೈನ್ ಅವರು ಗ್ರ್ಯಾಂಡ್ ಮುಫ್ತಿಯೊಂದಿಗೆ ಭರವಸೆ ವ್ಯಕ್ತಪಡಿಸಿದ್ದಾರೆ.
ವಿಶ್ವದ ಪ್ರಮುಖ ಶಕ್ತಿಶಾಲಿ ರಾಷ್ಟ್ರಗಳಲಿ ಒಂದಾಗಿ ಬೆಳೆಯುತ್ತಿರುವ ಭಾರತವು ಪ್ರಸ್ತುತ ಪಶ್ಚಿಮ ಏಷ್ಯಾದ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸುವಲ್ಲಿ ರಾಜತಾಂತ್ರಿಕ ಪಾತ್ರವನ್ನು ವಹಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಭಾರತ ಸರ್ಕಾರದ ಕ್ರಮಗಳಿಗೆ ಗ್ರ್ಯಾಂಡ್ ಮುಫ್ತಿ ಮಧ್ಯಸ್ಥಿಕೆ ವಹಿಸಬೇಕೆಂದೂ ಶೈಖ್ ಹುಸೈನ್ ಮನವಿ ಮಾಡಿದರು.
ಪ್ಯಾಲೆಸ್ತೀನರು ತಮ್ಮ ನಾಡು ಮತ್ತು ಈ ನೆಲವನ್ನು ಎಂದಿಗೂ ಬಿಡುವುದಿಲ್ಲ ಎಂದು ಹೇಳಿದ ಶೈಖ್ ಮುಹಮ್ಮದ್ ಹುಸೈನ್ ಭಾರತೀಯ ಜನರ ಬೆಂಬಲ ಮತ್ತು ಪ್ರಾರ್ಥನೆಗಾಗಿ ಮನವಿ ಮಾಡಿದರು.
ಅಖಿಲ ಭಾರತ ಜಮ್ಇಯ್ಯತುಲ್ ಉಲಮಾದ ಆಶ್ರಯದಲ್ಲಿ ನಡೆದ ಪ್ರಾರ್ಥನಾ ಸಭೆಗಳು ಮತ್ತು ಒಗ್ಗಟ್ಟಿನ ರ್ಯಾಲಿಗಳ ಬಗ್ಗೆ ಗ್ರ್ಯಾಂಡ್ ಮುಫ್ತಿ ಗಮನ ಸೆಳೆದರು. ಭಾರತ ಸರ್ಕಾರದ ತ್ವರಿತ ಕ್ರಮಕ್ಕಾಗಿ ನಾವು ಸಕ್ರಿಯವಾಗಿ ಮಧ್ಯಪ್ರವೇಶಿಸುತ್ತೇವೆ ಮತ್ತು ಅದನ್ನು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರುತ್ತೇವೆ ಎಂದು ಪ್ಯಾಲೆಸ್ತೀನ್ ಮುಫ್ತಿಗೆ ತಿಳಿಸಿದರು. ನಿನ್ನೆ ಮಧ್ಯಾಹ್ನ ದೂರವಾಣಿ ಸಂಭಾಷಣೆಯ ಮೂಲಕ ಇವರಿಬ್ಬರೂ ಮಾತುಕತೆ ನಡೆಸಿದರು.
















ಇನ್ನಷ್ಟು ಸುದ್ದಿಗಳು
ಹಜ್ ಯಾತ್ರಿಕರಿಗೆ ಡಿಜಿಟಲ್ ದಾಖಲೆಗಳ ಸೌಲಭ್ಯ- ಪಾಸ್ಪೋರ್ಟ್ಗಳ ಅಗತ್ಯವಿಲ್ಲ
ವೈದ್ಯಕೀಯ-ಇಂಜಿನಿಯರಿಂಗ್ ಕನಸುಗಳಾಚೆಗೆ ನಾಗರಿಕ ಸೇವೆಗಳತ್ತ ಯುವಶಕ್ತಿ ಮುಖ ಮಾಡಲಿ: ಇಕ್ಬಾಲ್ ಬಾಳಿಲ ಕರೆ
ಇಸ್ಲಾಂ ಧರ್ಮ ಮುಸ್ಲಿಮೇತರರ ವಿರೋಧಿಯಲ್ಲ; ಸಹಬಾಳ್ವೆಯೇ ಅದರ ಮೂಲ ಮಂತ್ರ- ಇಂಡಿಯನ್ ಗ್ರ್ಯಾಂಡ್ ಮುಫ್ತಿ
ಕರ್ನಾಟಕ ಜಮ್ಇಯ್ಯತುಲ್ ಉಲಮಾ ಮುಶಾವರಕ್ಕೆ ಶಾಫಿ ಸಅದಿ ನೇಮಕ- ಸುಲ್ತಾನುಲ್ ಉಲಮಾ ಘೋಷಣೆ
ಉಳ್ಳಾಲ ದರ್ಗಾ ಆಡಳಿತ ಮಂಡಳಿ ಚುನಾವಣೆ: ಅಧಿಕಾರಿಗಳ ನೇಮಕ ಮಾಡಿದ ವಕ್ಫ್ ಮಂಡಳಿ
ನಾಳೆ (ಮೇ 2): ಪುತ್ತೂರಿನಲ್ಲಿ ‘ಮಾದರಿ ಮದುವೆ ಅಭಿಯಾನ’ ಸಮಾರೋಪ- ಕರ್ನಾಟಕ ಮುಸ್ಲಿಂ ಜಮಾಅತ್ ಯಶಸ್ವಿಗೆ ಕರೆ
ಸುಲ್ತಾನುಲ್ ಉಲಮಾ ಎ.ಪಿ.ಉಸ್ತಾದರ ಆತ್ಮಕಥೆ ‘ಪ್ರೀತಿಯಿಂದ’ ಇಂದು ಬಿಡುಗಡೆ
ನಾಳೆ ‘ಮಾದರಿ ಮದುವೆ ಅಭಿಯಾನ’ ಸಮಾರೋಪ : ಎಸ್ಸೆಸ್ಸೆಫ್ ದ.ಕ ಈಸ್ಟ್ ಜಿಲ್ಲಾ ಸಮಿತಿ ಯಶಸ್ವಿಗೆ ಕರೆ
ಎಸ್ವೈಎಸ್ ಮಾದರಿ ಮದುವೆ ಅಭಿಯಾನ: ನಾಳೆ ಪುತ್ತೂರಿನಲ್ಲಿ ಸಮಾರೋಪ ಸಮ್ಮೇಳನ
ಏರ್ ಇಂಡಿಯಾ ಎಕ್ಸ್ಪ್ರೆಸ್: ಹೆಚ್ಚಿನ ವಿಮಾನ ಸೇವೆಗಳ ಪುನರಾರಂಭ