ಕೋಝಿಕ್ಕೋಡ್ | ಗಾಜಾದಲ್ಲಿ ನಡೆಯುತ್ತಿರುವ ಇಸ್ರೇಲಿ ಆಕ್ರಮಣಗಳು ಮತ್ತು ದಾಳಿಗಳು ಹೆಚ್ಚುತ್ತಿರುವ ಮಧ್ಯೆ ಇಂಡಿಯನ್ ಗ್ರ್ಯಾಂಡ್ ಮುಫ್ತಿ ಕಾಂತಪುರಂ ಎಪಿ ಅಬೂಬಕರ್ ಮುಸ್ಲಿಯಾರ್, ಪ್ಯಾಲೇಸ್ಟಿನಿಯನ್ ಮುಫ್ತಿ ಮತ್ತು ವಿದ್ವಾಂಸ ಶೈಖ್ ಮುಹಮ್ಮದ್ ಹುಸೈನ್ ಅವರೊಂದಿಗೆ ಮಾತುಕತೆ ನಡೆಸಿದರು. ಪ್ರಸ್ತುತ ಯುದ್ಧದ ಪರಿಸ್ಥಿತಿ ಮತ್ತು ಪ್ಯಾಲೇಸ್ಟಿನಿಯನ್ನರ ಆತಂಕದ ವಾತಾವರಣ ಬಗ್ಗೆ ವಿಚಾರಿಸಿದ ಗ್ರ್ಯಾಂಡ್ ಮುಫ್ತಿ, ಭಾರತೀಯ ಜನತೆಯ ಹೃತ್ಪೂರ್ವಕ ಕಾಳಜಿ, ಬೆಂಬಲ ಮತ್ತು ಪ್ರಾರ್ಥನೆಗಳನ್ನು ತಿಳಿಸಿದರು.
ಅಂತರರಾಷ್ಟ್ರೀಯ ಮಟ್ಟದಲ್ಲಿ ಪ್ಯಾಲೆಸ್ಟೀನಿಯನ್ನರ ಸಂಕಟ ಮತ್ತು ಅವರ ಹಕ್ಕುಗಳನ್ನು ಅತ್ಯಂತ ಪ್ರಾಮಾಣಿಕತೆಯಿಂದ ಅರ್ಥಮಾಡಿಕೊಂಡ ಭಾರತ, ಅದೇ ನಿಲುವಿನೊಂದಿಗೆ ಮುಂದುವರಿಯತ್ತಿದೆ ಎಂಬುದನ್ನು ಖಚಿತಪಡಿಸುವ ಕ್ರಮಗಳನ್ನು ನಿರೀಕ್ಷಿಸುತ್ತಿರುವುದಾಗಿ ಶೈಖ್ ಮುಹಮ್ಮದ್ ಹುಸೈನ್ ಅವರು ಗ್ರ್ಯಾಂಡ್ ಮುಫ್ತಿಯೊಂದಿಗೆ ಭರವಸೆ ವ್ಯಕ್ತಪಡಿಸಿದ್ದಾರೆ.
ವಿಶ್ವದ ಪ್ರಮುಖ ಶಕ್ತಿಶಾಲಿ ರಾಷ್ಟ್ರಗಳಲಿ ಒಂದಾಗಿ ಬೆಳೆಯುತ್ತಿರುವ ಭಾರತವು ಪ್ರಸ್ತುತ ಪಶ್ಚಿಮ ಏಷ್ಯಾದ ಸಮಸ್ಯೆಯನ್ನು ಸೌಹಾರ್ದಯುತವಾಗಿ ಪರಿಹರಿಸುವಲ್ಲಿ ರಾಜತಾಂತ್ರಿಕ ಪಾತ್ರವನ್ನು ವಹಿಸಲಿದೆ ಎಂದು ಭರವಸೆ ವ್ಯಕ್ತಪಡಿಸಿದ ಅವರು, ಭಾರತ ಸರ್ಕಾರದ ಕ್ರಮಗಳಿಗೆ ಗ್ರ್ಯಾಂಡ್ ಮುಫ್ತಿ ಮಧ್ಯಸ್ಥಿಕೆ ವಹಿಸಬೇಕೆಂದೂ ಶೈಖ್ ಹುಸೈನ್ ಮನವಿ ಮಾಡಿದರು.
ಪ್ಯಾಲೆಸ್ತೀನರು ತಮ್ಮ ನಾಡು ಮತ್ತು ಈ ನೆಲವನ್ನು ಎಂದಿಗೂ ಬಿಡುವುದಿಲ್ಲ ಎಂದು ಹೇಳಿದ ಶೈಖ್ ಮುಹಮ್ಮದ್ ಹುಸೈನ್ ಭಾರತೀಯ ಜನರ ಬೆಂಬಲ ಮತ್ತು ಪ್ರಾರ್ಥನೆಗಾಗಿ ಮನವಿ ಮಾಡಿದರು.
ಅಖಿಲ ಭಾರತ ಜಮ್ಇಯ್ಯತುಲ್ ಉಲಮಾದ ಆಶ್ರಯದಲ್ಲಿ ನಡೆದ ಪ್ರಾರ್ಥನಾ ಸಭೆಗಳು ಮತ್ತು ಒಗ್ಗಟ್ಟಿನ ರ್ಯಾಲಿಗಳ ಬಗ್ಗೆ ಗ್ರ್ಯಾಂಡ್ ಮುಫ್ತಿ ಗಮನ ಸೆಳೆದರು. ಭಾರತ ಸರ್ಕಾರದ ತ್ವರಿತ ಕ್ರಮಕ್ಕಾಗಿ ನಾವು ಸಕ್ರಿಯವಾಗಿ ಮಧ್ಯಪ್ರವೇಶಿಸುತ್ತೇವೆ ಮತ್ತು ಅದನ್ನು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತರುತ್ತೇವೆ ಎಂದು ಪ್ಯಾಲೆಸ್ತೀನ್ ಮುಫ್ತಿಗೆ ತಿಳಿಸಿದರು. ನಿನ್ನೆ ಮಧ್ಯಾಹ್ನ ದೂರವಾಣಿ ಸಂಭಾಷಣೆಯ ಮೂಲಕ ಇವರಿಬ್ಬರೂ ಮಾತುಕತೆ ನಡೆಸಿದರು.
















ಇನ್ನಷ್ಟು ಸುದ್ದಿಗಳು
ದೇರಳಕಟ್ಟೆ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ವಿದ್ಯಾರ್ಥಿ ಬಲಿ: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ
ದುಬೈ: ರೂಮ್ ಶೇರಿಂಗ್ ಮತ್ತು ಸಬ್ಲೆಟಿಂಗ್ಗೆ ಹೊಸ ನಿಯಮ- ಅನಿವಾಸಿಗಳು ತಿಳಿದುಕೊಳ್ಳಬೇಕಾದ ಪ್ರಮುಖ ಮಾಹಿತಿ
ಎಸ್ವೈಎಸ್ ದ.ಕ ಜಿಲ್ಲೆ (ವೆಸ್ಟ್): ‘ಹುಬ್ಬುರ್ರಸೂಲ್ ಕಾನ್ಫರೆನ್ಸ್- 26’ – ಪ್ರಿ ಸಿಟ್ಟಿಂಗ್
ಎಸ್ಸೆಸ್ಸೆಫ್ ಉಡುಪಿ ಜಿಲ್ಲಾ ಮಟ್ಟದ ಸಾಹಿತ್ಯೋತ್ಸವ: ಇಂದು ಮತ್ತು ನಾಳೆ – ತ್ವಯಿಬಾ ಗಾರ್ಡನ್ ನಲ್ಲಿ
ಸಮಸ್ತ ಜನರಲ್ ಸೆಕ್ರೆಟರಿ ಪ್ರೊಫೆಸರ್ ಕೆ. ಆಲಿಕ್ಕುಟ್ಟಿ ಮುಸ್ಲಿಯಾರ್ ವಫಾತ್
ವಿದ್ಯಾರ್ಥಿಗಳ ಧ್ವನಿಗೆ ಕಿವಿಗೊಡಿ, ಶಿಕ್ಷಣ ಹಾಗೂ ಸಂವಿಧಾನ ಗೌರವಿಸಿ: ಕೇಂದ್ರಕ್ಕೆ ರಜ್ವಿ ಆಗ್ರಹ
ಅನಿವಾಸಿ ಮಿತ್ರರಿಗಾಗಿ ವಿಶೇಷ ಪ್ರಾರ್ಥನೆಗೆ ಎಸ್ಸೆಸ್ಸೆಫ್ ಕರೆ
ಇರಾನ್ ಮೇಲೆ ಮತ್ತೆ ಯುಎಸ್ ದಾಳಿ; ಬಂದರ್ ಅಬ್ಬಾಸ್ ಸೇರಿದಂತೆ ವಿವಿಧ ಕೇಂದ್ರಗಳಲ್ಲಿ ಬಾಂಬ್ ದಾಳಿ
ಅಸ್ಸುಫ್ಫಾ ‘ನಾಟ್ಟು ದರ್ಸ್’ ಭೌತಿಕವಾಗಿ ಮಾತ್ರ ನಡೆಸಬೇಕು: ಶತಮಾನೋತ್ಸವ ಸಮಿತಿ ಸ್ಪಷ್ಟನೆ
ಸೌದಿ: ‘ಏಕೀಕೃತ ರಾಷ್ಟ್ರೀಯ ವೀಸಾ ಪ್ಲಾಟ್ಫಾರ್ಮ್’ ಅನುಷ್ಠಾನಕ್ಕೆ- ವೀಸಾ ಪ್ರಕ್ರಿಯೆಗಳು ಇನ್ನಷ್ಟು ಸುಲಭ